ವರುಣನ ಅಬ್ಬರ; ಜನ ತತ್ತರ


Team Udayavani, Aug 8, 2019, 3:09 AM IST

varunana-abb

ರಾಜ್ಯದಲ್ಲಿ ಆಶ್ಲೇಷಾ ಮಳೆಯ ಅಬ್ಬರ ಮುಂದುವರಿದಿದ್ದು, ಮಲೆನಾಡು, ಹಳೇ ಮೈಸೂರು, ಕೊಡಗು, ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಹಲವು ಪ್ರದೇಶಗಳು ಭಾರೀ ಗಾಳಿ ಮಳೆಯಲ್ಲಿ ಅಕ್ಷರಶ: ತೊಯ್ದು ತೊಪ್ಪೆಯಾಗಿವೆ. ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೇ ವೇಳೆ, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ಪ್ರವಾಹದ ಭೀಕರತೆ ಮತ್ತಷ್ಟು ಹೆಚ್ಚಿದ್ದು, ನದಿ ಪಾತ್ರದ ಹಳ್ಳಿಗಳಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

23 ಸಾವಿರ ಹೆಕ್ಟೇರ್‌ ಬೆಳೆ ಹಾನಿ: ತೀವ್ರ ಮಳೆ, ಹುಬ್ಬಳ್ಳಿ-ಧಾರವಾಡ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದ ಕಾಶಯ್ಯ ಮಹಾದೇವಯ್ಯ ಹೊಸಳ್ಳಿಮಠ (57) ಹೊಲಕ್ಕೆ ಹೋಗುವಾಗ ಮಧ್ಯದ ಹಳ್ಳದ ರಭಸಕ್ಕೆ ಸಿಕ್ಕು ಕೊಚ್ಚಿ ಹೋಗಿದ್ದಾರೆ. ಮೂರು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, 435 ಕುಟುಂಬಗಳನ್ನು ರಕ್ಷಿಸಿ, 821 ಜನರನ್ನು ಸ್ಥಳಾಂತರಿಸಲಾಗಿದೆ. ಒಟ್ಟು 705 ಮನೆಗಳು ಜಖಂಗೊಂಡಿವೆ. 23 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ನಷ್ಟಕ್ಕೆ ಸಿಲುಕಿದೆ. ಧಾರವಾಡ ಸಮೀಪದ ಸಲಕಿನಕೊಪ್ಪದ ದೊಡ್ಡ ಕೆರೆಯಲ್ಲಿ ಭಾರೀ ನೀರು ಸಂಗ್ರಹಣೆಯಾಗಿದ್ದು, ಕೆರೆಯ ಕೆಳಭಾಗದಲ್ಲಿರುವ ಬಾಡ, ನಿಗದಿ ಮತ್ತು ಬೆನಕನಕಟ್ಟಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ದೇವರಹುಬ್ಬಳ್ಳಿಯ ಕುಡಿಕೆರಿಗೆ ವಿಪರೀತ ನೀರು ಹರಿದು ಬರುತ್ತಿರುವುದರಿಂದ ಕೆರೆಕಟ್ಟೆಯಲ್ಲಿ ಸಣ್ಣ ಬಿರುಕು ಕಾಣಸಿಕೊಂಡಿದೆ. ಅಳ್ನಾವರದ ಇಂದಿರಮ್ಮನ ಕೆರೆಯಲ್ಲೂ ಕೋಡಿ ಬಿದ್ದ ನೀರಿನ ರಭಸಕ್ಕೆ ಹುಲಿಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ಕೊಚ್ಚಿಕೊಂಡು ಹೋಗಿದೆ. ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳ ರಜೆಯನ್ನು ಆ.10ರವರೆಗೆ ಜಿಲ್ಲಾಡಳಿತ ವಿಸ್ತರಿಸಿದೆ.

23 ಸಾವಿರ ಹೆಕ್ಟೇರ್‌ ಬೆಳೆ ಹಾನಿ: ತೀವ್ರ ಮಳೆ, ಹುಬ್ಬಳ್ಳಿ-ಧಾರವಾಡ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದ ಕಾಶಯ್ಯ ಮಹಾದೇವಯ್ಯ ಹೊಸಳ್ಳಿಮಠ (57) ಹೊಲಕ್ಕೆ ಹೋಗುವಾಗ ಮಧ್ಯದ ಹಳ್ಳದ ರಭಸಕ್ಕೆ ಸಿಕ್ಕು ಕೊಚ್ಚಿ ಹೋಗಿದ್ದಾರೆ. ಮೂರು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, 435 ಕುಟುಂಬಗಳನ್ನು ರಕ್ಷಿಸಿ, 821 ಜನರನ್ನು ಸ್ಥಳಾಂತರಿಸಲಾಗಿದೆ. ಒಟ್ಟು 705 ಮನೆಗಳು ಜಖಂಗೊಂಡಿವೆ. 23 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ನಷ್ಟಕ್ಕೆ ಸಿಲುಕಿದೆ. ಧಾರವಾಡ ಸಮೀಪದ ಸಲಕಿನಕೊಪ್ಪದ ದೊಡ್ಡ ಕೆರೆಯಲ್ಲಿ ಭಾರೀ ನೀರು ಸಂಗ್ರಹಣೆಯಾಗಿದ್ದು, ಕೆರೆಯ ಕೆಳಭಾಗದಲ್ಲಿರುವ ಬಾಡ, ನಿಗದಿ ಮತ್ತು ಬೆನಕನಕಟ್ಟಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ದೇವರಹುಬ್ಬಳ್ಳಿಯ ಕುಡಿಕೆರಿಗೆ ವಿಪರೀತ ನೀರು ಹರಿದು ಬರುತ್ತಿರುವುದರಿಂದ ಕೆರೆಕಟ್ಟೆಯಲ್ಲಿ ಸಣ್ಣ ಬಿರುಕು ಕಾಣಸಿಕೊಂಡಿದೆ. ಅಳ್ನಾವರದ ಇಂದಿರಮ್ಮನ ಕೆರೆಯಲ್ಲೂ ಕೋಡಿ ಬಿದ್ದ ನೀರಿನ ರಭಸಕ್ಕೆ ಹುಲಿಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ಕೊಚ್ಚಿಕೊಂಡು ಹೋಗಿದೆ. ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳ ರಜೆಯನ್ನು ಆ.10ರವರೆಗೆ ಜಿಲ್ಲಾಡಳಿತ ವಿಸ್ತರಿಸಿದೆ.

23 ಸಾವಿರ ಹೆಕ್ಟೇರ್‌ ಬೆಳೆ ಹಾನಿ: ತೀವ್ರ ಮಳೆ, ಹುಬ್ಬಳ್ಳಿ-ಧಾರವಾಡ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಕುಂದಗೋಳ ತಾಲೂಕಿನ ಭರದ್ವಾಡ ಗ್ರಾಮದ ಕಾಶಯ್ಯ ಮಹಾದೇವಯ್ಯ ಹೊಸಳ್ಳಿಮಠ (57) ಹೊಲಕ್ಕೆ ಹೋಗುವಾಗ ಮಧ್ಯದ ಹಳ್ಳದ ರಭಸಕ್ಕೆ ಸಿಕ್ಕು ಕೊಚ್ಚಿ ಹೋಗಿದ್ದಾರೆ. ಮೂರು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದು, 435 ಕುಟುಂಬಗಳನ್ನು ರಕ್ಷಿಸಿ, 821 ಜನರನ್ನು ಸ್ಥಳಾಂತರಿಸಲಾಗಿದೆ. ಒಟ್ಟು 705 ಮನೆಗಳು ಜಖಂಗೊಂಡಿವೆ. 23 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ನಷ್ಟಕ್ಕೆ ಸಿಲುಕಿದೆ. ಧಾರವಾಡ ಸಮೀಪದ ಸಲಕಿನಕೊಪ್ಪದ ದೊಡ್ಡ ಕೆರೆಯಲ್ಲಿ ಭಾರೀ ನೀರು ಸಂಗ್ರಹಣೆಯಾಗಿದ್ದು, ಕೆರೆಯ ಕೆಳಭಾಗದಲ್ಲಿರುವ ಬಾಡ, ನಿಗದಿ ಮತ್ತು ಬೆನಕನಕಟ್ಟಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ದೇವರಹುಬ್ಬಳ್ಳಿಯ ಕುಡಿಕೆರಿಗೆ ವಿಪರೀತ ನೀರು ಹರಿದು ಬರುತ್ತಿರುವುದರಿಂದ ಕೆರೆಕಟ್ಟೆಯಲ್ಲಿ ಸಣ್ಣ ಬಿರುಕು ಕಾಣಸಿಕೊಂಡಿದೆ. ಅಳ್ನಾವರದ ಇಂದಿರಮ್ಮನ ಕೆರೆಯಲ್ಲೂ ಕೋಡಿ ಬಿದ್ದ ನೀರಿನ ರಭಸಕ್ಕೆ ಹುಲಿಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ಕೊಚ್ಚಿಕೊಂಡು ಹೋಗಿದೆ. ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳ ರಜೆಯನ್ನು ಆ.10ರವರೆಗೆ ಜಿಲ್ಲಾಡಳಿತ ವಿಸ್ತರಿಸಿದೆ.

ಮಲೆನಾಡಲ್ಲಿ ಕೊಚ್ಚಿ ಹೋದ ಬದುಕು: ಭಾರೀ ಮಳೆಗೆ ಮತ್ತಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರ ಬೆಳಗ್ಗೆ ಶಿಕಾರಿಪುರ ತಾಲೂಕು ಚಿಕ್ಕಮಾಗಡಿಯ ರೈತ ಲೇಕಪ್ಪ (45) ಎಂಬುವರು ವಿದ್ಯುತ್‌ ಪ್ರವಹಿಸಿ ಮೃತಪಟ್ಟಿದ್ದಾರೆ. ಮಳೆಯ ಕಾರಣ ಜಿಲ್ಲೆಯಲ್ಲಿ ಒಂದೇ ದಿನ 106 ಮನೆಗಳು ಕುಸಿದಿವೆ. ತೀರ್ಥಹಳ್ಳಿ ತಾಲೂಕಿನ 5 ಸೇತುವೆಗಳಿಗೆ ಭಾಗಶ: ಹಾನಿಯಾಗಿದೆ. ಶಾಲಾ ಕಾಂಪೌಂಡ್‌ ಮೇಲೆ ಮರ ಬಿದ್ದು ಹಾನಿಯಾಗಿದೆ. ಶರಾವತಿ, ತುಂಗಾ, ಮಾಲತಿ, ವರದಾ, ದಂಡಾವತಿ, ಕುಮದ್ವತಿ ಮತ್ತು ಪ್ರಮುಖ ಹಳ್ಳಗಳಲ್ಲಿ ಪ್ರವಾಹ ಮತ್ತಷ್ಟು ಏರಿಕೆಯಾಗಿದ್ದು, ಸುಮಾರು 5 ಹೆಕ್ಟೇರ್‌ಗೂ ಅಧಿಕ ಗದ್ದೆ, ತೋಟ ಜಲಾವೃತಗೊಂಡಿದೆ. ಹಲವು ರಸ್ತೆಗಳ ಸಂಚಾರ ಸ್ಥಗಿತಗೊಂಡಿದೆ. ಶಿವಮೊಗ್ಗದಲ್ಲಿ ಶಿವಪ್ಪ ನಾಯಕ ಅರಮನೆ ಆವರಣದಲ್ಲಿ ದೊಡ್ಡ ಮರವೊಂದು ಬುಡ ಸಮೇತ ನೆಲಕ್ಕೊರಗಿ ಐತಿಹಾಸಿಕ ವಿಗ್ರಹಗಳ 12ಕ್ಕೂ ಅಧಿಕ ಪೀಠಗಳು ಕುಸಿದಿವೆ. ಲಿಂಗನಮಕ್ಕಿ ಜಲಾಶಯದ ಒಳಹರಿವು 1.40 ಲಕ್ಷ ಕ್ಯೂಸೆಕ್‌ಗೆ ಏರಿಕೆಯಾಗಿದ್ದು ಒಂದೇ ದಿನ 5.50 ಅಡಿ ನೀರು ಬಂದಿದೆ. ಭದ್ರಾ ಜಲಾಶಯದ ಒಳಹರಿವು 41 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದ್ದು 4.50 ಅಡಿ ನೀರು ಬಂದಿದೆ. ತುಂಗಾ ಜಲಾಶಯಕ್ಕೆ ಒಂದು ಲಕ್ಷ ಕ್ಯೂಸೆಕ್‌ ನೀರು ಬರುತ್ತಿದ್ದು ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಜೋಗ ಪರಿಸರದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಲಪಾತದಲ್ಲಿ ಶರಾವತಿ ಭೋರ್ಗರೆಯುತ್ತಿದೆ. ತುಂಗಾ ನದಿ ಅಪಾಯ ಮಟ್ಟ ಮೀರಿದ್ದು, ಗಾಜನೂರು ಅಣೆಕಟ್ಟೆಯ ಎಲ್ಲ ಗೇಟುಗಳಿಂದ ನೀರು ಹೊರಬಿಡಲಾಗುತ್ತಿದೆ. ಸುಮಾರು 95,100 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ.

ಕಾಳಿ, ಗಂಗಾವಳಿ ರೌದ್ರಾವತಾರ: ಮೂರು ದಿನದಿಂದ ಸುರಿಯುತ್ತಿರುವ ಮಳೆಗೆ ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಕಾಳಿ ಮತ್ತು ಗಂಗಾವಳಿ ಪ್ರವಾಹ ತಂದೊಡ್ಡಿವೆ. ಕದ್ರಾ, ಮಲ್ಲಾಪುರ ಗ್ರಾಮ, ಮಲ್ಲಾಪುರ ಟೌನ್‌ಶಿಪ್‌ ನೀರಿನಿಂದ ಆವೃತವಾಗಿವೆ. ಕೈಗಾ ಟೌನ್‌ಶಿಪ್‌ನ 100 ಮಂದಿ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. 4000 ಜನರು ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಕದಂಬ ನೌಕಾನೆಲೆಯ ಸಹಾಯ ಪಡೆಯಲಾಗಿದೆ. ಗುರುವಾರವೂ ಶಾಲೆಗಳಿಗೆ ರಜೆ ನೀಡಲಾಗಿದೆ. ಪ್ರವಾಸಿಗರು ಜಿಲ್ಲೆಗೆ 3 ದಿನ ಬಾರದಂತೆ ನಿರ್ಬಂಧ ವಿ ಧಿಸಲಾಗಿದೆ. ಕಾಳಿಯ ಮೊದಲ ಅಣೆಕಟ್ಟು ಸುಪಾ ಜಲಾಶಯಕ್ಕೆ ಒಳ ಹರಿವು ಹೆಚ್ಚಿದೆ. 127 ಟಿಎಂಸಿ ಅಡಿ ಸಾಮರ್ಥ್ಯದ ಪೈಕಿ ಭರ್ತಿಗೆ 10 ಮೀ. ಬಾಕಿ ಇದೆ. ಕಾಳಿ ಕೊನೆಯ ಅಣೆಕಟ್ಟುಗಳಾದ ಕೊಡಸಳ್ಳಿ ಮತ್ತು ಕದ್ರಾ ಮೇಲೆ ನಿರಂತರ ನಿಗಾ ಇಡಲಾಗಿದೆ. ಯಲ್ಲಾಪುರ-ಅಂಕೋಲಾ, ಶಿರಸಿ-ಕುಮಟಾ, ಶಿರಸಿ-ಯಲ್ಲಾಪುರ, ಕಲಘಟಗಿ-ಮುಂಡಗೋಡ ರಸ್ತೆ ಸಂಪರ್ಕ ಕಡಿತಗೊಂಡಿದೆ. ಡೊಂಗ್ರಿ ಎಂಬಲ್ಲಿ ಸೇತುವೆಯೇ ಕೊಚ್ಚಿ ಹೋಗಿದೆ. 5000 ಹೆಕ್ಟೇರ್‌ ಪ್ರದೇಶದಲ್ಲಿ ಮಳೆ ನೀರು ನಿಂತ ಪರಿಣಾಮ ಭತ್ತ, ಕಬ್ಬು, ಮೆಕ್ಕೆಜೋಳ ಬೆಳೆ ರೈತರ ಕೈಗೆ ಬರದಂತಾಗಿದೆ. 25ರಿಂದ 30 ಕೋಟಿ ಹಾನಿಯಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ.

ಮುನಿದ ಕೃಷ್ಣಾ, ಭೀಮಾ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು ಕೃಷ್ಣಾ ನದಿಗೆ ಹಾಗೂ ಜಿನಿ ಜಲಾಶಯದಿಂದ 2 ಲಕ್ಷ ಕ್ಯೂಸೆಕ್‌ ನೀರು ಭೀಮಾ ನದಿಗೆ ಹರಿಯುತ್ತಿರುವ ಕಾರಣ ಜಿಲ್ಲೆಯ ಗಡಿ ಉದ್ದಕ್ಕೂ ಎರಡೂ ನದಿಗಳ ಪ್ರವಾಹ ತಲೆ ದೋರಿದೆ. ಮುದ್ದೇಬಿಹಾಳ ತಾಲೂಕಿನ ಗಂಗೂರಿನ ಅಡವಿ ಸಿದ್ದೇಶ್ವರ ದೇವಸ್ಥಾನ ಹಾಗೂ ನಾಲತವಾಡ ಸಮೀಪದ ಛಾಯಾ ಭಗವತಿ ದೇವಸ್ಥಾನಗಳು ಸಂಪೂರ್ಣ ಜಲಾವೃತವಾಗಿವೆ. ಇದರಿಂದಾಗಿ ಒಂದು ವಾರದಿಂದ ಹರಿಯುತ್ತಿರುವ ಕೃಷ್ಣೆ, ಈ ಭಾಗದ ಸುಮಾರು 400 ಎಕರೆ ಪ್ರದೇಶದ ಜಮೀನುಗಳಲ್ಲಿ ಬೆಳೆದು ನಿಂತಿರುವ ಬೆಳೆಗಳನ್ನು ಹಾಳು ಮಾಡಿದೆ. ಪ್ರವಾಹದ ನೀರು ಜಿಲ್ಲೆಯ ಸುಮಾರು 40 ಜನವಸತಿ ಪ್ರದೇಶಕ್ಕೆ ನುಗ್ಗುವ ಭೀತಿ ಎದುರಾಗಿದೆ. ಅಲಮಟ್ಟಿ ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ಬಸವಸಾಗರ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚುತ್ತಿದೆ. ಬಸವಸಾಗರ ಜಲಾಶಯದಿಂದ 4.75 ಲಕ್ಷ ಕ್ಯೂಸೆಕ್‌ ನೀರನ್ನು ಬಿಡಲಾಗುತ್ತಿದೆ. ಇದರಿಂದಾಗಿ ತೀರದಲ್ಲಿರುವ ಸುಮಾರು 20 ಹಳ್ಳಿಗಳು ಪ್ರವಾಹ ಭೀತಿ ಎದುರಿಸುತ್ತಿವೆ. ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ನದಿಪಾತ್ರದಲ್ಲಿ ಬರುವ ಸುಮಾರು 26 ಹಳ್ಳಿಗಳಲ್ಲಿ ಪ್ರವಾಹದ ಭೀತಿ ಇದೆ.

ಯಾದಗಿರಿಯಲ್ಲೂ ಕೃಷ್ಣಾವತಾರ: ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಬುಧವಾರ ಸಂಜೆ 4.60 ಲಕ್ಷ ಕ್ಯೂಸೆಕ್‌ ನೀರನ್ನು ಹರಿ ಬಿಟ್ಟಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ. ಜನ-ಜಾನುವಾರುಗಳು ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಶಹಾಪುರದ ಕೊಳ್ಳೂರು ಮತ್ತು ಗೌಡೂರಿನಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ವಡಗೇರಾದಲ್ಲಿ ಈಗಾಗಲೇ ಗಂಜಿ ಕೇಂದ್ರ ಆರಂಭ ವಾಗಿದೆ. ಸುರಪುರಲ್ಲಿ ಒಂದು ಗಂಜಿ ಕೇಂದ್ರ ಸಿದ್ಧವಾಗಿದೆ. ಅಂದಾಜು 1,110 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ. ಬುಧವಾರ ರಾತ್ರಿ ವೇಳೆಗೆ ಗ್ರಾಮಗಳಲ್ಲಿ ನೀರು ನುಗ್ಗುವ ಆತಂಕ ಎದುರಾಗಿದ್ದು, ವಡಗೇರಾ ತಾಲೂಕಿನ ಚನ್ನೂರ ಗ್ರಾಮಸ್ಥರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಭಾಗಮಂಡಲ ಸಂಪೂರ್ಣ ಜಲಾವೃತ: ಕಳೆದ ವರ್ಷ ಸಂಭವಿಸಿದ ಅತಿವೃಷ್ಟಿ ಹಾನಿಯಿಂದ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಕೊಡಗು ಜಿಲ್ಲೆ ಈ ಬಾರಿಯೂ ಆರ್ಭಟಿಸುತ್ತಿರುವ ಆಶ್ಲೇಷನ ದಾಳಿಗೆ ಸಿಲುಕಿ ನಲುಗಿದೆ. ಮಳೆ ಜೊತೆಗೆ, ಬುಧವಾರ ಗಾಳಿ ತೀವ್ರತೆ ಪಡೆದುಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ಆ.8 ಮತ್ತು 9ರಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಭಾಗಮಂಡಲ ಸಂಪೂರ್ಣವಾಗಿ ಜಲಾವೃತವಾಗಿದ್ದು, ದೇಗುಲದ ಮೆಟ್ಟಿಲಿನವರೆಗೂ ನೀರು ಆವರಿಸಿದೆ. ಕಾವೇರಿ ಹಾಗೂ ಉಪನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಶ್ರೀ ಭಗಂಡೇಶ್ವರ ದೇವಾಲಯದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರತಿ ವರ್ಷ ಪ್ರವಾಹಕ್ಕೆ ಸಿಲುಕುವ ಕರಡಿಗೋಡು ಭಾಗದ ಮನೆಗಳು ಈ ಬಾರಿಯೂ ಜಲಾವೃತಗೊಂಡಿದ್ದು, ಅಲ್ಲಿನ ನಿವಾಸಿಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ನೆಲ್ಯಹುದಿಕೇರಿ ಭಾಗದ 8 ಕುಟುಂಬಗಳಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ. ತಾಳತ್ತಮನೆ ಸಮೀಪದ ಮಂಗಳೂರು ರಸ್ತೆಗೆ ಅಳವಡಿಸಲಾಗಿದ್ದ ತಾತ್ಕಾಲಿಕ ಮರಳಿನ ತಡೆ ಗೋಡೆ ಕೊಚ್ಚಿ ಹೋಗಿದೆ.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.