ಮಳೆ ಚುರುಕು, ಚರಂಡಿ ನಿರ್ಮಾಣಕ್ಕೆ ವೇಗ
Team Udayavani, Jun 15, 2020, 5:57 AM IST
ಉಡುಪಿ: ಮಳೆಗಾಲ ಚುರುಕಾಗಿದ್ದು, ನಗರದ ಅಲ್ಲಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಕೂಡ ಬಿರುಸಿನಿಂದ ನಡೆಯುತ್ತಿದೆ.
ಅಜ್ಜರಕಾಡು ಪುರಭವನದಿಂದ ಮಹಾತ್ಮಾ ಗಾಂಧಿ ಕ್ರೀಡಾಂಗಣ ಸಂಪರ್ಕಿ ಸುವ ರಸ್ತೆ, ಉಡುಪಿ- ಮಣಿಪಾಲ ನಡುವಿನ ರಾ.ಹೆದ್ದಾರಿಯ ವಿವಿಧ ಕಡೆಗಳಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಮಳೆ ಸಂದರ್ಭ ನೀರು ರಸ್ತೆ ಮೇಲೆ ಹರಿಯುವುದರಿಂದ ಹೆಚ್ಚು ಸಮಸ್ಯೆಗೆ ಒಳಗಾಗುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಪ್ರಥಮ ಪ್ರಾಶಸ್ತ್ಯ ನೀಡಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.
ಸಿಂಡಿಕೇಟ್ ಬ್ಯಾಂಕ್ ವೃತ್ತ, ಇಂದ್ರಾಳಿ ಮುಂತಾದ ಕಡೆಗಳಲ್ಲಿ ಅತೀ ಹೆಚ್ಚು ಸಮಸ್ಯೆಯಾಗುತ್ತಿದ್ದು, ಈ ಜಾಗಗಳಲ್ಲಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಇನ್ನೊಂದೆಡೆ ನಗರಸಭೆ ವ್ಯಾಪ್ತಿಯಲ್ಲಿನ ವಿವಿಧ ವಾರ್ಡ್ಗಳಲ್ಲಿ ಕೂಡ ಮುಚ್ಚಿ ಹೋದ ಚರಂಡಿಗಳ ಮರು ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ