ಹೂಡದಳ್ಳಿ ಕೆರೆ ಒಡ್ಡು ಒಡೆದು ವರ್ಷವಾಯ್ತು

ವ್ಯರ್ಥವಾಗಿ ಹರಿಯುತ್ತಿದೆ ಮಳೆ ನೀರು; ದೋಟಿಕೋಳ ಕೆರೆ ದುರಸ್ತಿ ಇನ್ನೂ ಆಗಿಲ್ಲ

Team Udayavani, Aug 4, 2021, 9:12 PM IST

Rain-Water

ಚಿಂಚೋಳಿ: ತಾಲೂಕಿನಲ್ಲಿ ಕಳೆದ ವರ್ಷ ಆಗಸ್ಟ್‌ ಕೊನೆ ವಾರದಲ್ಲಿ ಸತತವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಹೂಡದಳ್ಳಿ ಗ್ರಾಮದ ಸಣ್ಣ ನೀರಾವರಿ ಕೆರೆ ಭರ್ತಿಯಾಗಿ ಒಡೆದು ಒಂದು ವರ್ಷವಾದರೂ ದುರಸ್ತಿ ಕಾರ್ಯ ಕೈಗೊಂಡಿಲ್ಲ. ಹೀಗಾಗಿ ಮಳೆ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ.

ತಾಲೂಕಿನ ಹೂಡದಳ್ಳಿ ಗ್ರಾಮದ ಹತ್ತಿರದಲ್ಲಿ ಸಣ್ಣದಾದ ನಾಲಾ ಇದ್ದು, ಮಳೆಗಾಲದಲ್ಲಿ ಪಸ್ತಪುರ, ಮೋಘಾ, ಹೂವಿನಬಾವಿ, ರುಸ್ತಂಪುರ ಗ್ರಾಮಗಳ ಬೆಟ್ಟ-ಗುಡ್ಡಗಳಿಂದ ಹರಿದು ಬರುವ ಮಳೆ ನೀರನ್ನು ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಸದುಪಯೋಗ ಮಾಡಿಕೊಳ್ಳಲಿ ಎಂದು ಆಗಿನ ಮೈಸೂರು ರಾಜ್ಯದ ಮುಖ್ಯಮಂತ್ರಿ ಆಗಿದ್ದ ವೀರೇಂದ್ರ ಪಾಟೀಲರು ತಮ್ಮ ಹುಟ್ಟೂರಿನಲ್ಲಿ 1969 ನವೆಂಬರ್‌ 22ರಲ್ಲಿ ಸಣ್ಣ ನೀರಾವರಿ ಕೆರೆ ಮಂಜೂರಿಗೊಳಿಸಿ, ಮೂರು ಸಾವಿರ ಹೆಕ್ಟೇರ್‌ ಜಮೀನಿಗೆ ನೀರಿನ ಸೌಲಭ್ಯ ಒದಗಿಸಿದ್ದರು. ಆದರೆ ಕಳೆದ ವರ್ಷ 2020 ಆಗಸ್ಟ್‌ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಕೆರೆ ತುಂಬಿದ್ದರಿಂದ ಸೆಪ್ಟೆಂಬರ್‌ 15ರಂದು ಒಡ್ಡು ಒಡೆದು ಹೋಗಿ, ಕೆರೆ ಕೆಳಭಾಗದಲ್ಲಿರುವ ಅನೇಕ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ ಮಾಡಿತ್ತು.

ಈ ವೇಳೆ ಸಂಸದ ಹಾಗೂ ಈಗಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಡಾ| ಅವಿನಾಶ ಜಾಧವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಸರ್ಕಾರದಿಂದ ಯಾವುದೇ ಅನುದಾನ ಮಂಜೂರಿ ಆಗದೇ ಇರುವುದರಿಂದ ದುರಸ್ತಿ ಕಾರ್ಯ ಆರಂಭವಾಗಲೇ ಇಲ್ಲ. ದೋಟಿಕೋಳ ಗ್ರಾಮದ ಮೇಲ್ಭಾಗದಲ್ಲಿ ಇರುವ ಸಣ್ಣ ನೀರಾವರಿ ಕೆರೆಗೂ ಹೆಚ್ಚಿನ ನೀರು ಹರಿದು ಬಂದಿದ್ದರಿಂದ ಒಡ್ಡಿನಲ್ಲಿ ಕಳೆದ ವರ್ಷ ಆಗಸ್ಟ್‌ನಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ವೇಳೆ ರಾತ್ರೋರಾತ್ರಿ ಗ್ರಾಮಸ್ಥರು ಎಚ್ಚರಗೊಂಡು ಅಧಿ ಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದರಿಂದ ಜೆಸಿಬಿ ಯಂತ್ರದ ಮೂಲಕ ಕೋಡಿಯಿಂದ ನೀರು ಹರಿ ಬಿಟ್ಟು ಕೆರೆ ರಕ್ಷಣೆ ಮಾಡಲಾಗಿತ್ತು. ಆದರೆ ಯಾವುದೇ ದುರಸ್ತಿ ಕಾರ್ಯ ಕೈಗೊಳ್ಳದೇ ಇದ್ದುದರಿಂದ ಕೋಡಿ ಮೂಲಕ ನೀರು ಹರಿದು ಬಿಡಲಾಗುತ್ತಿದೆ.

ಇದರಿಂದಾಗಿ ಮಳೆಯಾಶ್ರಿತ ರೈತರು ಹಿಂಗಾರು ಬೆಳೆಗಳಿಗೆ ನೀರು ಪಡೆಯಲು ತೊಂದರೆ ಆಗುತ್ತಿದೆ. ಅಲ್ಲದೇ ಬೇಸಿಗೆ ದಿನಗಳಲ್ಲಿ ದನಕರುಗಳಿಗೆ, ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ.

ನಮ್ಮ ಸ್ವಂತ ಊರು ಹೂಡದಳ್ಳಿಯಲ್ಲಿ ಸಣ್ಣ ನೀರಾವರಿ ಕೆರೆ ಒಡೆದು ಹೋಗಿದೆ. ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ನಾಗಾಇದಲಾಯಿ ಕೆರೆಗೆ ಭೇಟಿ ನೀಡಿ ಅನುದಾನ ನೀಡಿದ್ದಾರೆ. ಆದರೆ ಹೂಡದಳ್ಳಿ ಕೆರೆ ದುರಸ್ತಿಗೆ ಯಾವುದೇ ಅನುದಾನ ಬಂದಿಲ್ಲ. ಇದಕ್ಕೆ ಶಾಸಕ ಡಾ| ಅವಿನಾಶ ಜಾಧವ ಬೇವಾಬ್ದಾರಿತನ ಕಾರಣವಾಗಿದೆ. ಕಳೆದ ಮಾರ್ಚ್‌ 14ರಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವಗೆ ತಿಳಿಸಲಾಗಿತ್ತು. ಅವರು ಗಮನ ಹರಿಸಿಲ್ಲ.
-ಕೈಲಾಶನಾಥ ಪಾಟೀಲ, ಮಾಜಿ ಶಾಸಕ

ತಾಲೂಕಿನಲ್ಲಿ ಒಡೆದು ಹೋಗಿರುವ ಸಣ್ಣ ನೀರಾವರಿ ಕೆರೆಗಳನ್ನು ದುರಸ್ತಿ ಮಾಡುವಂತೆ ಅನೇಕ ಸಲ ಹೋರಾಟ ನಡೆಸಿ ಸರ್ಕಾರದ ಗಮನ ಸೆಳೆದು ಮನವಿ ನೀಡಲಾಗಿದೆ. ಆದರೆ ಶಾಸಕರು ಈ ಕುರಿತು ನಿರ್ಲಕ್ಷ್ಯ ತೋರುತ್ತಿದ್ದಾರೆ. ದುರಸ್ತಿ ಕಾರ್ಯ ಕೈಗೊಳ್ಳಲು ಅನುದಾನ ತರುವಲ್ಲಿ ವಿಫಲರಾಗಿದ್ದಾರೆ.
-ಸಂಜೀವನ್‌ ಯಾಕಾಪುರ, ಜೆಡಿಎಸ್‌ ಮುಖಂಡ

ತಾಲೂಕಿನಲ್ಲಿ ಕಳೆದ ವರ್ಷ ಧಾರಾಕಾರ ಮಳೆ ಆಗಿದ್ದರಿಂದ ಕೆರೆ ಒಡ್ಡು ಒಡೆದಿದೆ. ಆದರೆ ಸರ್ಕಾರದಿಂದ ಇನ್ನುವರೆಗೂ ಅನುದಾನ ಬಂದಿಲ್ಲ. ಅನುದಾನ ಬಂದ ನಂತರ ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ನೀಡಲಾಗುವುದು. ಶಾಸಕ ಡಾ| ಅವಿನಾಶ ಜಾಧವ ಅನುದಾನ ಮಂಜೂರಿಗೊಳಿಸುವ ಭರವಸೆ ನೀಡಿದ್ದಾರೆ.
-ಶಿವಶರಣಪ್ಪ ಕೇಶ್ವಾರ, ಎಇಇ ಸಣ್ಣ ನೀರಾವರಿ ಇಲಾಖೆ

-ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.