ವಾರದಲ್ಲೇ ಸುರಿದ ಮಳೆಗಾಲದ ಮಳೆ


Team Udayavani, Aug 13, 2019, 6:00 AM IST

r-42

ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಈವರೆಗೆ ಇಡೀ ರಾಜ್ಯದಲ್ಲಿ ಸುರಿಯಬೇಕಾದ ಮಳೆ, ಏಳು ಜಿಲ್ಲೆಗಳಲ್ಲಿ ಕೇವಲ ಏಳು ದಿನಗಳಲ್ಲೇ ಸುರಿದಿದೆ! ಮಲೆನಾಡಿನ ನಾಲ್ಕು ಮತ್ತು ಉತ್ತರ ಕರ್ನಾಟಕದ
ಮೂರು ಜಿಲ್ಲೆಗಳಲ್ಲಿ ಕಳೆದ ಏಳು ದಿನಗಳಲ್ಲಿ ಸರಾಸರಿ 516 ಮಿ.ಮೀ. ಮಳೆ ಸುರಿದಿದೆ. ಇದು ಇಡೀ ರಾಜ್ಯದಲ್ಲಿ ಈವರೆಗಿನ ಮುಂಗಾರು ಹಂಗಾಮಿನಲ್ಲಿ (ಜೂನ್‌ನಿಂದ ಆಗಸ್ಟ್‌ 12ರವರೆಗೆ) ಸುರಿಯುವ
ವಾಡಿಕೆ ಮಳೆಗೆ ಸರಿಸಮ.

ಬೆಳಗಾವಿ, ಧಾರವಾಡ, ಹಾವೇರಿ ಸುತ್ತಲಿನ ಪ್ರದೇಶ ಹಾಗೂ ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸುತ್ತಲಿನ ಭಾಗಗಳಿಗೆ ಸರಾಸರಿ ವಾಡಿಕೆ ಲೆಕ್ಕಹಾಕಿದರೆ, ಪ್ರಸಕ್ತ ಮುಂಗಾರಿನಲ್ಲಿ ಇದುವರೆಗೆ 107 ಮಿ.ಮೀ. ಮಳೆ ಬೀಳಬೇಕಾಗಿತ್ತು.
ಆದರೆ, ಐದುಪಟ್ಟು ಸುರಿದಿದೆ. ಇದೇ ಅವಧಿಯಲ್ಲಿ ಒಟ್ಟಾರೆ ರಾಜ್ಯದಲ್ಲಿ ಸುರಿಯಬೇಕಾದ ಮಳೆಗೆ (560 ಮಿ.ಮೀ.) ಹೆಚ್ಚು-ಕಡಿಮೆ ಸರಿಸಮವಾಗಿದೆ ಎಂದು ಹವಾಮಾನ ಇಲಾಖೆ ಅಂಕಿ-ಸಂಖ್ಯೆಗಳು
ಸ್ಪಷ್ಟಪಡಿಸುತ್ತವೆ.

ಹತ್ತು ದಿನಗಳಲ್ಲಿ!: ವಿಚಿತ್ರವೆಂದರೆ ರಾಜ್ಯದ ಮುಂಗಾರು ಹಂಗಾಮು ಜೂನ್‌ 1ರಿಂದ ಸೆಪ್ಟೆಂಬರ್‌ ಅಂತ್ಯದವರೆಗೆ ಸುರಿಯುವ ವಾಡಿಕೆ ಮಳೆ 832.3 ಮಿ.ಮೀ. ಈ ಪೈಕಿ ಶೇ. 62ರಷ್ಟು ಮಳೆ ಬರೀ ಈ 7 ಜಿಲ್ಲೆಗಳಲ್ಲಿ 7ದಿನಗಳಲ್ಲಿ ಸುರಿದಿದೆ. ಆ. 1ರಿಂದ 11- 578 ಮಿ.ಮೀ. ಅಂದರೆ
ಶೇ. 70ರಷ್ಟು ಮಳೆ ಬಿದ್ದಿದೆ! ಇದರರ್ಥ 30 ಜಿಲ್ಲೆಗಳ ಭೌಗೋಳಿಕ ಪ್ರದೇಶದಲ್ಲಿ ಸುರಿಯುವ ವಾಡಿಕೆ ಮಳೆ ಕೇವಲ ಏಳು ಜಿಲ್ಲೆಗಳ
ಭೌಗೋಳಿಕ ವ್ಯಾಪ್ತಿಯಲ್ಲಿ ಬಿದ್ದಿದೆ.

ರಾಜ್ಯದ ಮಳೆ ಜಿಲ್ಲೆಗೆ ಸೀಮಿತ: ರಾಜ್ಯಾದ್ಯಂತ ಹಂಚಿಕೆ ಆಗಬೇಕಾದ ಮಳೆ ಕೆಲವೇ ಪ್ರದೇಶಗಳಿಗೆ ಸೀಮಿತವಾಗಿದೆ. ಅದರ ಪ್ರಮಾಣ ರಾಜ್ಯದ ಪ್ರಸಕ್ತ ಮುಂಗಾರಿನ ವಾಡಿಕೆ ಮಳೆಗೆ ಹತ್ತಿರದಲ್ಲಿದ್ದರೂ ಅಚ್ಚರಿ ಇಲ್ಲ. ಇನ್ನು ಹೆಚ್ಚು ಮಳೆ ಬಿದ್ದ ಕಡೆಗಳಲ್ಲೆಲ್ಲಾ ಬೆಟ್ಟ ಗುಡ್ಡಗಳು ಇರುವುದನ್ನು
ಕಾಣಬಹುದು. ಅವು ಮಾರುತ ಗಳನ್ನು ತಡೆದು, ಅಧಿಕ ಮಳೆ ಸುರಿಸುತ್ತವೆ. ಇದರ ಜತೆಗೆ ಮಹಾರಾಷ್ಟ್ರದ ಜಲಾಶಯದಿಂದಲೂ ನೀರನ್ನು ಬಿಡುಗಡೆ ಮಾಡಲಾಯಿತು. ಇವೆರಡೂ ಕಾರಣದಿಂದ ಕರ್ನಾಟ
ಕವು ಮತ್ತೂಮ್ಮೆ ನೆರೆಗೆ ತುತ್ತಾಗಬೇಕಾಯಿತು ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಪ್ರಭಾರ ನಿರ್ದೇಶಕ ಸಿ.ಎಸ್‌. ಪಾಟೀಲ “ಉದಯವಾಣಿ’ಗೆ ತಿಳಿಸಿದರು.

ಎಲ್ಲೆಲ್ಲಿ ಎಷ್ಟು ಮಳೆ?
ಆ. 5ರಿಂದ 11ರವರೆಗೆ ಆಯ್ದ 7 ಜಿಲ್ಲೆಗಳಲ್ಲಿ ಸುರಿದ
ಮಳೆ ಪ್ರಮಾಣ ಹೀಗಿದೆ (ಮಿ.ಮೀ.ಗಳಲ್ಲಿ).
ಜಿಲ್ಲೆ                   ಮಳೆ
ಬೆಳಗಾವಿ           382.1
ಹಾವೇರಿ            313.3
ಧಾರವಾಡ         266
ಕೊಡಗು            893.8
ಚಿಕ್ಕಮಗಳೂರು  718
ಶಿವಮೊಗ್ಗ           729.4
ಹಾಸನ              312.4

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.