ರಜನಿಕಾಂತ್ ಪತ್ನಿಗೆ ನೋಟಿಸ್
Team Udayavani, May 12, 2019, 3:05 AM IST
ಬೆಂಗಳೂರು: ಜಾಹೀರಾತು ಕಂಪನಿಗೆ ವಂಚನೆ ಮಾಡಿದ ಆರೋಪದಡಿ ನಟ ರಜನಿಕಾಂತ್ ಪತ್ನಿ, ಲತಾ ರಜನಿಕಾಂತ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲಸೂರು ಗೇಟ್ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಈ ಸಮನ್ಸ್ಗೆ ಪ್ರತಿಕ್ರಿಯೆ ನೀಡಿರುವ ಲತಾ ರಜನಿಕಾಂತ್ ಅವರು, “ನಾನು ಪ್ರವಾಸದಲ್ಲಿರುವುದರಿಂದ ತಾವು ಸೂಚಿಸಿದ ದಿನಾಂಕದಂದು ವಿಚಾರಣೆಗೆ ಬರಲು ಸಾಧ್ಯವಿಲ್ಲ. ಹೀಗಾಗಿ, ಮೇ 20ರ ಬಳಿಕ ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಉತ್ತರ ನೀಡಿದ್ದಾರೆ.
ರಜನಿಕಾಂತ್ ಅಭಿನಯದ ಕೊಚಾಡಿಯನ್ ಚಿತ್ರದ ಜಾಹೀರಾತು ಪ್ರಕಟಿಸಲು ಚೆನ್ನೈ ಮೂಲದ ಅಭಿಚಂದ್ ನಾಹರ್ ಅವರ ಆ್ಯಡ್ ಬ್ಯೂರೋ ಅಡ್ವಟೈಸಿಂಗ್ ಪ್ರೈವೇಟ್ ಲಿ.ಕಂಪನಿಗೆ ವಹಿಸಲಾಗಿದ್ದು, ಒಪ್ಪಂದ ಕೂಡ ಮಾಡಿಕೊಡಲಾಗಿತ್ತು. ಆದರೆ, ಅಂತಿಮವಾಗಿ ಕಂಪನಿಗೆ ನೀಡುವ ಸಂಭಾವನೆಯಲ್ಲಿ ಲತಾ ರಜನಿಕಾಂತ್ ಒಪ್ಪಂದಕ್ಕಿಂತ ಕಡಿಮೆ ಹಣ ಸಂದಾಯ ಮಾಡಿದ್ದರು ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಕಂಪನಿ ಮಾಲೀಕರು 2015ರಲ್ಲಿ ಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ಕೋರ್ಟ್ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಹಲಸೂರು ಗೇಟ್ ಪೊಲೀಸರು ಮೇ 6ರಂದು ವಿಚಾರಣೆಗೆ ಹಾಜರಾಗುವಂತೆ ಮೇ 2ರಂದೇ ಸಮನ್ಸ್ ಜಾರಿ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು