ಸಾವಿರ ಕೋ.ರೂ. ದಾಟಿದ ರಾಮಮಂದಿರ ನಿಧಿ!


Team Udayavani, Feb 10, 2021, 2:40 AM IST

ಸಾವಿರ ಕೋ.ರೂ. ದಾಟಿದ ರಾಮಮಂದಿರ ನಿಧಿ!

ಉಡುಪಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹ ಕಾರ್ಯ ಜ. 15ರಿಂದ ದೇಶಾದ್ಯಂತ ನಡೆಯುತ್ತಿದ್ದು ಫೆ. 8ರ ವರೆಗೆ 950 ಕೋ.ರೂ. ಸಂಗ್ರಹವಾಗಿದೆ. ಫೆ. 9ರಂದು ಇದು ಸಾವಿರ ಕೋ.ರೂ.ಗೆ ಏರಿರುವ ಸಾಧ್ಯತೆ ಇದೆ.

ಪೇಜಾವರ ಮಠದಲ್ಲಿ ಮಂಗಳವಾರ ನಾಗರಿಕರ ದೇಣಿಗೆ ಸ್ವೀಕರಿಸಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಯಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ದಕ್ಷಿಣ ಭಾರತವಲ್ಲದೆ ಇಡೀ ದೇಶದಲ್ಲಿಯೇ ಸಿರಿವಂತರು, ನಾಡಿನ ಪ್ರಥಮ ಪ್ರಜೆಗಳಿಂದ ಹಿಡಿದು, ಜನಸಾಮಾನ್ಯರ ವರೆಗೆ, ಹಿಂದೂಗಳಲ್ಲದೆ ಇತರ ಮತೀಯ ರಿಂದಲೂ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದರು.

ಫೆ. 27ರ ವರೆಗೆ ನಿಧಿ ಸಂಗ್ರಹ ಅಭಿಯಾನ ಮುಂದುವರಿಯಲಿದೆ. ಕೇವಲ ರಾಮ ಮಂದಿರ ಮಾತ್ರವಲ್ಲದೆ ರಾಮರಾಜ್ಯ ಕಟ್ಟುವ ಗುರಿ ಇದೆ. ಹಣವನ್ನು ಹೇಗೆ ಬಳಸಬೇಕೆಂದು ಟ್ರಸ್ಟ್‌ ನಿರ್ಧರಿಸುತ್ತದೆ. ಈಗ ಉತVನನದ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಜಾತಿ ಮೀಸಲಾತಿ ಸರಿಯಲ್ಲ ಜಾತಿ ಮೀಸಲಾತಿ ಕುರಿತು ಕೇಳಿದ ಪ್ರಶ್ನೆಗೆ, “ಇದು ಮೂಲದಲ್ಲಿಯೇ ತಪ್ಪಾಗಿದೆ. ಜಾತಿ ಆಧಾರದಲ್ಲಿ ಮೀಸಲಾತಿ ಎಂದು ಯಾವಾಗ ಆರಂಭಿಸಿದರೋ ಅಲ್ಲಿಯೇ ತಪ್ಪಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಘೋಷಣೆ ಮಾಡಿದ್ದರೆ ಹೀಗೆ ಆಗಲು ಸಾಧ್ಯವೇ ಇರಲಿಲ್ಲ. ಸೌಲಭ್ಯ ಯಾರಿಗೆ ಬೇಡ? ಎಲ್ಲರಿಗೂ ಬೇಕು. ಮೀಸಲಾತಿ ಆದ ಬಳಿಕ ಒಳ ಮೀಸಲಾತಿ ಬೇಕೆಂಬ ಮತ್ತು ಅವರಿಗೆ ಬೇಡ, ಇವರಿಗೆ ಬೇಕು ಎಂಬಿತ್ಯಾದಿ ಮಾತುಗಳು ಆರಂಭವಾ ಗುತ್ತದೆ. ಈಗ ನಾವು ಸಾಕಷ್ಟು ಮುಂದೆ ಹೋಗಿಯಾಗಿದೆ. ಇದನ್ನು ಸರಿಪಡಿಸು ವುದು ಹೇಗೆ’ ಎಂದರು.

ರಾಮೋತ್ಸವ ಸಂಭ್ರಮ
ಮುಂಬಯಿ, ತಮಿಳುನಾಡು, ಕೇರಳ, ಕರ್ನಾಟಕದ ವಿವಿಧೆಡೆ ಸಂಚಾರ ಮಾಡಿದ್ದೇವೆ. ಇದರಲ್ಲಿ ಮುಖ್ಯವಾಗಿ ಬಸ್ತಿ ಪ್ರದೇಶಗಳಲ್ಲಿ ಪಾದಯಾತ್ರೆ ಮತ್ತು ಸಂತ ಸಮಾವೇಶಗಳಲ್ಲಿ ಪಾಲ್ಗೊಂಡಿರುವುದಾಗಿದೆ. ವಸತಿ ಪ್ರದೇಶಗಳಲ್ಲಿ ರಾಮೋತ್ಸವ ರೀತಿಯಲ್ಲಿ ಜನರು ಸಂಭ್ರಮಿಸುತ್ತಿದ್ದಾರೆ ಎಂದರು.

ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ಪಕ್ಷಾತೀತವಾಗಿ ರಾಮಭಕ್ತರಿಂದ ನಿಧಿ ಸಂಗ್ರಹ ನಡೆಯುತ್ತಿದೆ. ಇದು ಯಾವುದೇ ಸಂಘಟನೆಯವರು, ಪಕ್ಷದವರ ನಿರ್ದೇಶನವಲ್ಲ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಾನುಸಾರ ಮಂದಿರ ನಿರ್ಮಾಣ ನಡೆಯುತ್ತಿದೆ ಎಂದರು.

ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಆಂಧ್ರ ಪ್ರದೇಶದಲ್ಲಿ ಧ್ವಂಸಗೊಂಡ ದೇವಸ್ಥಾನ, ರಥವನ್ನು ಪುನರ್ನಿಮಿಸುತ್ತಿದ್ದೇವೆ ಎಂದು ಆಂಧ್ರಪ್ರದೇಶದ ಧಾರ್ಮಿಕ ದತ್ತಿ ಸಚಿವರು ನಮ್ಮಲ್ಲಿ ಬಂದು ತಿಳಿಸಿದರೆಂದರು. ರೈತರ ಹೆಸರಿನಲ್ಲಿ ಸಂವಿಧಾನಕ್ಕೆ ಅಪಚಾರವಾದರೆ ಸಲ್ಲದು. ಸರಕಾರ ಮಾತುಕತೆಗೆ ಸಿದ್ಧ ಎಂದರೂ ಹೋಗದೆ ಇದ್ದರೆ ಏನು ಮಾಡುವುದು? ಇದು ಇದ್ದಕ್ಕಿದ್ದಂತೆ ಮಾಡಿದ ಕಾನೂನು ಅಲ್ಲ ಎಂದು ಸರಕಾರವೇ ಹೇಳುತ್ತಿದೆಯಲ್ಲ ಎಂದರು.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.