ರಾಜ್ಯದ ಅಣೆಕಟ್ಟುಗಳ ಪುನಶ್ಚೇತನಕ್ಕೆ ಕೇಂದ್ರದಿಂದ 750 ಕೋಟಿ: ರಮೇಶ್ ಜಾರಕಿಹೊಳಿ
Team Udayavani, Nov 27, 2020, 8:51 PM IST
ಬೆಂಗಳೂರು: ರಾಜ್ಯದ ಅಣೆಕಟ್ಟುಗಳ ಪುನಶ್ಚೇತನ ಹಾಗೂ ಸುಧಾರಣಾ ಯೋಜನೆಗಳ ಅನುದಾನದಲ್ಲಿ ಕರ್ನಾಟಕದ ಹಲವು ಅಣೆಕಟ್ಟುಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ 750 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ಸೂಚಿಸಿದೆ.
ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಪ್ರಯತ್ನದಿಂದ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿದ್ದಾರೆ.
ಕೇಂದ್ರ ಜಲ ಶಕ್ತಿ ಆಯೋಗವು ದೇಶದ ಪ್ರಮುಖ ಆಣೆಕಟ್ಟುಗಳ ಸಬಲೀಕರಣಕ್ಕಾಗಿ ವಿಶ್ವ ಬ್ಯಾಂಕ್ ನೆರವಿನ ಡ್ರಿಪ್ ಯೋಜನೆ ಅಡಿಯಲ್ಲಿ ಗಾಯತ್ರಿ ಡ್ಯಾಂ, ತುಂಗಭದ್ರಾ ಡ್ಯಾಂ, ನಾರಾಯಣಪುರ ಮತ್ತು ಕೆಆರ್ಎಸ್ ಡ್ಯಾಂಗಳ ಸಬಲೀಕರಣ ಸೇರಿದಂತೆ 52 ಅಣೆಕಟ್ಟುಗಳ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ 150 ಕೋಟಿ ರೂ.ಗಳ ಬೇಡಿಕೆ ಇಟ್ಟಿತ್ತು.
ಇದನ್ನೂ ಓದಿ:ಪಬ್ ಜಿ ಹೊಸ ಆವೃತ್ತಿ ಭಾರತದಲ್ಲಿ ಈ ವರ್ಷಾಂತ್ಯ ಬಿಡುಗಡೆ ?: ಸಂಸ್ಥೆ ಹೇಳುವುದೇನು ?
ಶುಕ್ರವಾರ ನವದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾಕರಿಹೊಳಿ ಕೇಂದ್ರ ಸಚಿವರ ಗಮನ ಸೆಳೆದು 750 ಕೋಟಿ ರೂ. ಅನುದಾನ ಪಡೆಯಲು ಯಶಸ್ವಿಯಾಗಿದ್ದಾರೆ.
ಕೇಂದ್ರ ಸಚಿವರ ಸಭೆಯ ಬಳಿಕ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ರಾಜ್ಯದ ನೀರಾವರಿ ಯೋಜನೆಗಳನ್ನು ಕಾಲ ಮಿತಿಯಲ್ಲಿ ಅನುಷ್ಠಾನಗೊಳಿಸಲು ನಾವು ಬದ್ಧರಾಗಿದ್ದೇವೆ. ವಿಶ್ವ ಬ್ಯಾಂಕ್ ನೆರವಿನ ಯೋಜನೆಗಳ ಅನುದಾನಕ್ಕೆ ನಾವು ಮಾಡಿದ ಮನವಿಗೆ ಕೇಂದ್ರ ಸಚಿವರು ಸಮ್ಮತಿಸಿದದ್ದು, ಕಾರ್ಯಯೋಜನೆಯನ್ನು ಅಂತಿಮಗೊಳಿಸಿ ಅನುಮೋದನೆ ಪಡೆಯುತ್ತೇವೆ ಎಂದರು.
ಕೇಂದ್ರ ಸಚಿವರ ಜೊತೆ ನಡೆದ ಸಭೆಯಲ್ಲಿ ರಾಜ್ಯದ ಅಪರ್ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ ಉಪಸ್ಥಿತರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರೀಕ್ಷೆ ಪಾಸಾಯ್ತು ಹಾಕ್-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ
ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರ ನೇಮಕ: ಮೂಲ ಕಡತ ಹಾಜರುಪಡಿಸಲು ಹೈಕೋರ್ಟ್ ಸೂಚನೆ
ಅಕ್ರಮ ಕಸಾಯಿಖಾನೆಗೆ ಪೋಲೀಸರ ದಾಳಿ : ಓರ್ವನ ಬಂಧನ, ಗೋ ಮಾಂಸ ವಶ
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ತನ್ನನ್ನು ಧೋನಿ ಜೊತೆ ಹೋಲಿಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪಂತ್
ಪರೀಕ್ಷೆ ಪಾಸಾಯ್ತು ಹಾಕ್-ಐ ಯುದ್ಧ ವಿಮಾನ : ಒಡಿಶಾದ ಕರಾವಳಿಯಲ್ಲಿ ಯಶಸ್ವಿ ಪರೀಕ್ಷೆ
ರಾಜ್ಯ ವನ್ಯಜೀವಿ ಮಂಡಳಿಗೆ ಸದಸ್ಯರ ನೇಮಕ: ಮೂಲ ಕಡತ ಹಾಜರುಪಡಿಸಲು ಹೈಕೋರ್ಟ್ ಸೂಚನೆ
ಹಕ್ಕಿ ಜ್ವರದ ಹಿನ್ನೆಲೆ: ಅರ್ಧ ಬೇಯಿಸಿದ ಮೊಟ್ಟೆ ತಿನ್ನಬೇಡಿ ಎಂದ ಆಹಾರ ಪ್ರಾಧಿಕಾರ
ಅಕ್ರಮ ಕಸಾಯಿಖಾನೆಗೆ ಪೋಲೀಸರ ದಾಳಿ : ಓರ್ವನ ಬಂಧನ, ಗೋ ಮಾಂಸ ವಶ