ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ
Team Udayavani, Jun 20, 2021, 2:43 PM IST
ಬೆಳಗಾವಿ : ರಾಜ್ಯದ ಉಸ್ತುವಾರಿ ಅರುಣಸಿಂಗ್ ಬಂದು ಹೋದ ಮೇಲೆ ಬಿಜೆಪಿ ಯಲ್ಲಿ ಗೊಂದಲಗಳು ಬಗೆಹರಿದವು ಎನ್ನುವಾಗಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಭಾನುವಾರ ಮುಂಬೈಗೆ ತೆರಳಿರುವುದು ನಾನಾ ರೀತಿಯ ರಾಜಕೀಯ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಈ ಹಿಂದೆ ಮುಂಬೈದಲ್ಲೇ ಬೀಡುಬಿಟ್ಟು ಸಮ್ಮಿಶ್ರ ಸರಕಾರದ ಪತನಕ್ಕೆ ಕಾರಣರಾಗಿದ್ದ ರಮೇಶ ಜಾರಕಿಹೊಳಿ ಈಗ ಬಿ ಜೆ ಪಿ ವಿರುದ್ಧ ಸಹ ಇದೇ ರೀತಿಯ ಕಾರ್ಯತಂತ್ರ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳುತ್ತಿರುವಾಗಲೇ ದಿಢೀರನೆ ಮುಂಬೈಗೆ ಹಾರಿರುವದು ಈ ಅನುಮಾನಗಳಿಗೆ ಪುಷ್ಟಿ ನೀಡಿದೆ.
ಮೂಲಗಳ ಪ್ರಕಾರ ರಮೇಶ ಜಾರಕಿಹೊಳಿ ಜೊತೆ ಇನ್ನೂ ಐದಕ್ಕೂ ಹೆಚ್ಚು ಶಾಸಕರು ಮುಂಬೈಗೆ ತೆರಳಲಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಈ ಮೂಲಕ ಸರಕಾರದ ಮೇಲೆ ಸಂಪುಟ ಪುನಾರಚನೆ ಮಾಡುವಂತೆ ಒತ್ತಡ ಹೇರುವ ತಂತ್ರವೂ ಇದರ ಹಿಂದಿದೆ ಎನ್ನಲಾಗುತ್ತಿದೆ.
ತಮ್ಮ ವಿರುದ್ಧ ಸರಕಾರದಲ್ಲಿದ್ದವರೇ ಕುತಂತ್ರ ನಡೆಸಿದ್ದಾರೆ. ಅವರಿಂದಲೇ ತಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಅಸಮಾಧಾನ ಗೊಂಡಿರುವ ರಮೇಶ ಜಾರಕಿಹೊಳಿ ಈಗ ಮತ್ತೊಮ್ಮೆ ತಮ್ಮ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಪ್ರಸಂಗ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಗೋಕಾಕದಿಂದ ತಮ್ಮ ಪುತ್ರ ಅಮರನಾಥ ಅವರನ್ನು ಕಣಕ್ಕಿಳಿಸಲು ಸಹ ರಮೇಶ ಚಿಂತನೆ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ