ರಮೇಶ್ ಬಿಜೆಪಿ ಸೇರ್ಪಡೆ ಆಗುವುದರಿಂದ ಸರ್ಕಾರ ಬೀಳದು
Team Udayavani, Apr 24, 2019, 3:28 AM IST
ದಾವಣಗೆರೆ: ಶಾಸಕ ರಮೇಶ್ ಜಾರಕಿಹೊಳಿ ಪಕ್ಷ ಬಿಡುವುದರಿಂದ ಸರ್ಕಾರಕ್ಕೆ ಏನೂ ಆಗದು ಎಂದು ಹಿರಿಯ ಕಾಂಗ್ರೆಸ್ಸಿಗ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಯಾವಾಗಲಾದರೂ ಹೋಗಬೇಕಾದ ಖಾಯಂ ಗಿರಾಕಿ.
ಅಡ್ವಾನ್ಸ್ ತೆಗೆದುಕೊಂಡಿದ್ದಾರೆ. ಹಾಗಾಗಿ ಹೋಗಬೇಕು. ರಮೇಶ್ ಬಿಜೆಪಿಗೆ ಹೋಗುವುದರಿಂದ ಸರ್ಕಾರಕ್ಕೆ ಏನೂ ಆಗುವುದಿಲ್ಲ, ಮೈತ್ರಿ ಸರ್ಕಾರ 5 ವರ್ಷ ಇರಲಿದೆ ಎಂದರು. ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಕಾಂಗ್ರೆಸ್ ಸಮುದ್ರ ಇದ್ದಂತೆ. ಯಾರಾದರೂ ಬರಬಹುದು. ಯಾರಾದರೂ ಹೋಗಬಹುದು. ರಮೇಶ್ ಹೋಗುವುದರಿಂದ ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದಿದ್ದಾರೆ.
ನಾನೂ ಸಿಎಂ ಹುದ್ದೆ ಆಕಾಂಕ್ಷಿ: “ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದಿದ್ದಾರೆ. ನಾನೂ ಮುಖ್ಯಮಂತ್ರಿ ಆಗುತ್ತೇನೆ. ಅದರಲ್ಲಿ ತಪ್ಪೇನಿದೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದಿದ್ದಾರಲ್ಲ ಎಂಬ ಪ್ರಶ್ನೆಗೆ, “ಸಿದ್ದರಾಮಯ್ಯ ಅವರಂತೆ ನಾನೂ ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತೇನೆ. ತಪ್ಪೇನಿದೆ’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…