ಉಡುಪಿಗೊಂದು ರಂಗಾಯಣ: ಸಚಿವ ಕೋಟ
Team Udayavani, Feb 5, 2023, 6:20 AM IST
ಉಡುಪಿ: ಉಡುಪಿಯ ನಾಟಕ ತಂಡಗಳು, ಪೂರಕ ವಾತಾವರಣ, ಶಕ್ತಿ, ಪ್ರೋತ್ಸಾಹ ನೀಡುವವರ ಸಮೂಹ ಇತ್ಯಾದಿ ಕಂಡಾಗ ಜಿಲ್ಲೆಗೊಂದು ರಂಗಾಯಣದ ಆವಶ್ಯಕತೆಯಿದೆ ಎಂದೆನಿಸುತ್ತದೆ. ರಂಗಭೂಮಿ ಉಡುಪಿ ಇದನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ರಂಗಭೂಮಿ ಉಡುಪಿ ವತಿಯಿಂದ ನಡೆದ 43ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ ಶುಕ್ರವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹು ಮಾನ ವಿತರಿಸಿದರು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಾಟಕದಿಂದ ಆಗುವ ಸಮಾಜಿಕ ಬದಲಾವಣೆಯ ಬಗ್ಗೆ ತಿಳಿಸಿ, ಶುಭ ಹಾರೈಸಿದರು.
ರಂಗಭೂಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕುತ್ಪಾಡಿ ಕಾನಂಗಿ ದೇವಸ್ಥಾನದ ಮೊಕ್ತೇಸರ ಡಾ| ಕೆ.ಆರ್.ಕೆ.ಭಟ್, ರಂಗಭೂಮಿ ಉಡುಪಿ ಉಪಾಧ್ಯಕ್ಷ ಎನ್.ಆರ್.ಬಲ್ಲಾಳ್ ಉಪಸ್ಥಿತರಿದ್ದರು.
ರಂಗಭೂಮಿಯ ಪ್ರ.ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಸ್ವಾಗತಿಸಿ, ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು. ಕಲಾವಿದ ಶ್ರೀಪಾದ ಹೆಗಡೆ ಬಹುಮಾನಿತರ ಪಟ್ಟಿ ವಾಚಿಸಿದರು. ಪೂರ್ಣಿಮಾ ಸುರೇಶ್ ನಿರೂಪಿಸಿದರು.
ಬಹುಮಾನ ವಿವರ
ಹಾವೇರಿ ಶೇಷಗೀರಿ ಶ್ರೀ ಗಜಾನನ ಯುವಕ ಮಂಡಲ ತಂಡದ ವಾಲಿವಧೆ ನಾಟಕ ಪ್ರಥಮ, ತೀರ್ಥಹಳ್ಳಿಯ ನಟ ಮಿತ್ರರು ತಂಡದ ತುರುಬ ಕಟ್ಟುವ ಹದನ ದ್ವಿತೀಯ ಹಾಗೂ ಉಡುಪಿ ಬೈಕಾಡಿಯ ಮಂದಾರ ತಂಡದ ಕೊಳ್ಳಿ ನಾಟಕ ತೃತೀಯ ಬಹುಮಾನ ಪಡೆದುಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ