ರಣಜಿ: ಮುನ್ನಡೆ ಸಾಧಿಸಿದ ಕರ್ನಾಟಕ


Team Udayavani, Feb 20, 2022, 5:30 AM IST

ರಣಜಿ: ಮುನ್ನಡೆ ಸಾಧಿಸಿದ ಕರ್ನಾಟಕ

ಚೆನ್ನೈ: ರೈಲ್ವೇಸ್‌ ಎದುರಿನ ರಣಜಿ ಮುಖಾಮುಖಿಯಲ್ಲಿ ಕರ್ನಾಟಕ ಇನ್ನಿಂಗ್ಸ್‌ ಲೀಡ್‌ ಗಳಿಸುವಲ್ಲಿ ಯಶಸ್ವಿಯಾಗಿದೆ. 3ನೇ ದಿನದಾಟದ ಅಂತ್ಯಕ್ಕೆ ಒಟ್ಟು 118 ರನ್‌ ಮುನ್ನಡೆ ಹೊಂದಿದೆ. ಇನ್ನೂ 7 ವಿಕೆಟ್‌ಗಳನ್ನು ಕೈಲಿರಿಸಿಕೊಂಡಿದೆ.

ಕರ್ನಾಟಕದ 481 ರನ್ನುಗಳ ಮೊದಲ ಇನ್ನಿಂಗ್ಸ್‌ಗೆ ಉತ್ತರವಾಗಿ ದ್ವಿತೀಯ ದಿನ ದಾಟದ ಅಂತ್ಯಕ್ಕೆ ರೈಲ್ವೇಸ್‌ 3 ವಿಕೆಟಿಗೆ 213 ರನ್‌ ಗಳಿಸಿತ್ತು. ಶನಿವಾರದ ಆಟ ಮುಂದುವರಿಸಿ 426ಕ್ಕೆ ಆಲೌಟ್‌ ಆಯಿತು. 55 ರನ್‌ ಬಹುಮೂಲ್ಯ ಮುನ್ನಡೆ ಬಳಿಕ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ರಾಜ್ಯ ತಂಡ, ಪಡಿಕ್ಕಲ್‌(4) ವಿಕೆಟ್‌ ಕಳೆದುಕೊಂಡು 63 ರನ್‌ ಮಾಡಿದೆ.

78 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದು ಕೊಂಡಿದ್ದ ಅರಿಂದಮ್‌ ಘೋಷ್‌ ಶತಕ ಬಾರಿಸಿದ್ದು ರೈಲ್ವೇಸ್‌ ಸರದಿಯ ವಿಶೇಷವೆನಿಸಿತು. ಘೋಷ್‌ 105 ರನ್‌ ಕೊಡುಗೆ ಸಲ್ಲಿಸಿದರು (197 ಎಸೆತ, 12 ಬೌಂಡರಿ, 3 ಸಿಕ್ಸರ್‌). ಮೊಹಮ್ಮದ್‌ ಸೈಫ್ 84 ರನ್‌ ಹೊಡೆದರು. ಇವರಿಬ್ಬರ 4ನೇ ವಿಕೆಟ್‌ ಜತೆಯಾಟ 294 ರನ್‌ ತನಕ ಮುಂದುವರಿಯಿತು. ಆಗ ಘೋಷ್‌ ವಿಕೆಟ್‌ ಕಿತ್ತ ಶ್ರೇಯಸ್‌ ಗೋಪಾಲ್‌ ಕರ್ನಾಟಕಕ್ಕೆ ಮೇಲುಗೈ ಒದಗಿಸಿದರು.

ಕೃಷ್ಣಪ್ಪ ಗೌತಮ್‌ 4, ರೋನಿತ್‌ ಮೋರೆ 3, ವಿದ್ಯಾಧರ ಪಾಟೀಲ್‌ 2 ವಿಕೆಟ್‌ ಉರುಳಿಸಿದರು. ಕರ್ನಾಟಕದ ದ್ವಿತೀಯ ಸರದಿಯಲ್ಲಿ ಮಾಯಾಂಕ್‌ ಅಗರ್ವಾಲ್‌ 39, ಆರ್‌. ಸಮರ್ಥ್ 20 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ-481 ಮತ್ತು ಒಂದು ವಿಕೆಟಿಗೆ 63 (ಅಗರ್ವಾಲ್‌ ಬ್ಯಾಟಿಂಗ್‌ 39, ಸಮರ್ಥ್ ಬ್ಯಾಟಿಂಗ್‌ 20). ರೈಲ್ವೇಸ್‌- 426 (ಘೋಷ್‌ 105, ಸೈಫ್ 84, ವಿವೇಕ್‌ ಸಿಂಗ್‌ 59, ದೇವಧರ್‌ 56, ಗೌತಮ್‌ 27ಕ್ಕೆ 4, ಮೋರೆ 67ಕ್ಕೆ 3, ಪಾಟೀಲ್‌ 77ಕ್ಕೆ 2, ಶ್ರೇಯಸ್‌ ಗೋಪಾಲ್‌ 68ಕ್ಕೆ 1).

ಪೂಜಾರ ಸೊನ್ನೆ
ಅಹ್ಮದಾಬಾದ್‌: ಮುಂಬಯಿ ಎದುರಿನ “ಎಲೈಟ್‌ ಡಿ’ ವಿಭಾಗದ ರಣಜಿ ಪಂದ್ಯದಲ್ಲಿ ಸೌರಾಷ್ಟ್ರ ಫಾಲೋಆನ್‌ಗೆ ತುತ್ತಾಗಿದೆ. ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್‌ ಪೂಜಾರ ಸೊನ್ನೆ ಸುತ್ತಿದ್ದಾರೆ. ಈ ಬ್ಯಾಟಿಂಗ್‌ ವೈಫ‌ಲ್ಯದ ಬೆನ್ನಲ್ಲೇ ಪೂಜಾರ ಟೆಸ್ಟ್‌ ತಂಡದಿಂದ ಹೊರಬಿದ್ದರು.

ಮುಂಬಯಿ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟಿಗೆ 544 ರನ್‌ ಪೇರಿಸಿ ಡಿಕ್ಲೇರ್‌ ಮಾಡಿತು. ಜವಾಬಿತ್ತ ಸೌರಾಷ್ಟ್ರ 220ಕ್ಕೆ ಕುಸಿಯಿತು. ಫಾಲೋಆನ್‌ ಬಳಿಕ ವಿಕೆಟ್‌ ನಷ್ಟವಿಲ್ಲದೆ 105 ರನ್‌ ಮಾಡಿದೆ. ಇನ್ನಿಂಗ್ಸ್‌ ಸೋಲಿನಿಂದ ಪಾರಾಗಲು ಇನ್ನೂ 219 ರನ್‌ ಗಳಿಸಬೇಕಿದೆ.

ಸೌರಾಷ್ಟ್ರವನ್ನು ಕಾಡಿದ ಬೌಲರ್‌ಗಳೆಂದರೆ ಮೋಹಿತ್‌ ಅವಸ್ಥಿ ಮತ್ತು ಶಮ್ಸ್‌ ಮುಲಾನಿ. ಇಬ್ಬರೂ 4 ವಿಕೆಟ್‌ ಕೆಡವಿದರು.

 

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.