ರಣಜಿ ಟ್ರೋಫಿ ಸೆಮಿಫೈನಲ್‌: ಅಜೇಯ ಕರ್ನಾಟಕಕ್ಕೆ ಸೌರಾಷ್ಟ್ರ ಸವಾಲು

ಮಧ್ಯಪ್ರದೇಶ-ಬಂಗಾಲ ನಡುವೆ ಇನ್ನೊಂದು ಸೆಮಿಫೈನಲ್‌

Team Udayavani, Feb 8, 2023, 8:15 AM IST

ರಣಜಿ ಟ್ರೋಫಿ ಸೆಮಿಫೈನಲ್‌: ಅಜೇಯ ಕರ್ನಾಟಕಕ್ಕೆ ಸೌರಾಷ್ಟ್ರ ಸವಾಲು

ಬೆಂಗಳೂರು: ಪ್ರತಿಷ್ಠಿತ ದೇಶಿ ಕ್ರಿಕೆಟ್‌ ಪಂದ್ಯಾವಳಿಯಾಗಿರುವ ರಣಜಿ ಟ್ರೋಫಿ ಈಗ ಸೆಮಿಫೈನಲ್‌ನತ್ತ ಮುಖ ಮಾಡಿದೆ. ಬುಧವಾರ ಎರಡೂ ಪಂದ್ಯಗಳು ಆರಂಭವಾಗಲಿವೆ. 8 ಬಾರಿಯ ಚಾಂಪಿಯನ್‌ ಕರ್ನಾಟಕ ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಸೌರಾಷ್ಟ್ರವನ್ನು ಎದುರಿಸಲಿದೆ. ಇಂದೋರ್‌ನ “ಹೋಳ್ಕರ್‌ ಸ್ಟೇಡಿಯಂ’ನಲ್ಲಿ ಹಾಲಿ ಚಾಂಪಿಯನ್‌ ಮಧ್ಯಪ್ರದೇಶ ಮತ್ತು ಬಂಗಾಲ ಮುಖಾಮುಖಿ ಆಗಲಿವೆ.

ಮಾಯಾಂಕ್‌ ಅಗರ್ವಾಲ್‌ ಸಾರಥ್ಯದಲ್ಲಿ ಕಣಕ್ಕಿಳಿದಿರುವ ಕರ್ನಾಟಕ ಈ ಕೂಟದ ಅಜೇಯ ತಂಡವೆಂಬುದನ್ನು ಮರೆಯುವಂತಿಲ್ಲ. ಲೀಗ್‌ನಲ್ಲಿ ಅಧಿಕಾರಯುತ ಪ್ರದರ್ಶನ ನೀಡಿದೆ. 5 ಪಂದ್ಯಗಳಲ್ಲಿ ಜಯ ಸಾಧಿಸಿದೆ, ಮೂರರಲ್ಲಿ ಇನ್ನಿಂಗ್ಸ್‌ ಮುನ್ನಡೆ ಗಳಿಸುವಲ್ಲಿ ಯಶಸ್ವಿಯಾಗಿದೆ. ಕ್ವಾರ್ಟರ್‌ ಫೈನಲ್‌ನಲ್ಲಿ ದುರ್ಬಲ ಉತ್ತರಾಖಂಡ ಎದುರಾಗಿತ್ತಾದರೂ ಇನ್ನಿಂಗ್ಸ್‌ ಹಾಗೂ 281 ರನ್‌ ಜಯಭೇರಿ ಮೊಳಗಿಸಿ ಸೆಮಿಫೈನಲ್‌ಗೆ ಹುರಿಗೊಂಡಿದೆ.

ಅರ್ಪಿತ್‌ ವಸವಾಡ ನಾಯಕತ್ವದ ಸೌರಾಷ್ಟó ತಂಡ ಲೀಗ್‌ ಹಂತದಲ್ಲಿ ಎರಡು ಸೋಲನುಭವಿಸಿಯೂ ಉಪಾಂತ್ಯ ತಲುಪಿದ್ದೊಂದು ಅಚ್ಚರಿ. ಆಂಧ್ರಪ್ರದೇಶ ವಿರುದ್ಧ 150 ರನ್‌, ತಮಿಳುನಾಡು ವಿರುದ್ಧ 59 ರನ್‌ ಅಂತರದಿಂದ ಎಡವಿತ್ತು. ತಂಡಕ್ಕೆ ಮರಳಿದ ಆಲೌರೌಂಡರ್‌ ರವೀಂದ್ರ ಜಡೇಜ ತಮಿಳುನಾಡು ವಿರುದ್ಧ ಸೌರಾಷ್ಟ್ರ ನಾಯಕರಾಗಿದ್ದರು. ಪಂಜಾಬ್‌ ವಿರುದ್ಧದ ಕ್ವಾರ್ಟರ್‌ ಫೈನಲ್‌ ಕದನವನ್ನು ಸೌರಾಷ್ಟ್ರ 71 ರನ್ನುಗಳಿಂದ ಜಯಿಸಿದೆ. ಅಲ್ಲದೇ ಕರ್ನಾಟಕ ವಿರುದ್ಧ ಆಡಿದ ಕಳೆದ 5 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿದ ಆತ್ಮವಿಶ್ವಾಸ ಕೂಡ ಸೌರಾಷ್ಟ್ರಕ್ಕೆ ನೆರವಾಗುವ ಸಾಧ್ಯತೆ ಇಲ್ಲದಿಲ್ಲ.

ಕರ್ನಾಟಕ ಸ್ಥಿರ ಪ್ರದರ್ಶನ
ಕರ್ನಾಟಕ ತಂಡ ಪ್ರಸಕ್ತ ಋತುವಿನಲ್ಲಿ ಸ್ಥಿರವಾದ ಪ್ರದರ್ಶನ ಕಾಯ್ದುಕೊಂಡು ಬಂದಿದೆ. ಉತ್ತಮ ಆರಂಭ, ಭರವಸೆಯ ಮಧ್ಯಮ ಕ್ರಮಾಂಕ, ಬೌಲರ್‌ಗಳ ಪರಿಣಾಮಕಾರಿ ದಾಳಿ, ಆಲ್‌ರೌಂಡರ್‌ಗಳ ಅಮೋಘ ಆಟವೆಲ್ಲ ರಾಜ್ಯ ತಂಡವನ್ನು ಫೇವರಿಟ್‌ ಪಟ್ಟಕ್ಕೇರಿಸಿದೆ.

ಸೆಮಿಫೈನಲ್‌ ಕದನ ಬೆಂಗಳೂರಿನಲ್ಲೇ ನಡೆಯುವುದು ಕರ್ನಾಟಕ ಪಾಲಿಗೆ ಬೋನಸ್‌ ಎನ್ನಲಡ್ಡಿಯಿಲ್ಲ. ಆದರೆ ಕರ್ನಾಟಕಕ್ಕೆ ಲೀಗ್‌ ಹಂತದಲ್ಲಿ ಬಲಿಷ್ಠ ಎದುರಾಳಿಗಳೇ ಇರಲಿಲ್ಲ ಎಂಬುದನ್ನು ಒಪ್ಪಲೇಬೇಕಾಗುತ್ತದೆ. ಕ್ವಾರ್ಟರ್‌ ಫೈನಲ್‌ ಕೂಡ ಏಕಪಕ್ಷೀಯವಾಗಿತ್ತು. ಹೀಗಾಗಿ ಮಾಯಾಂಕ್‌ ಪಡೆಗೆ ಸೆಮಿಫೈನಲ್‌ ನಿಜವಾದ ಅಗ್ನಿಪರೀಕ್ಷೆ ಎನ್ನಲಡ್ಡಿಯಿಲ್ಲ.

“ಗ್ರೂಪ್‌ ವಿನ್ನರ್‌’ ಆಗಿರುವ ಕರ್ನಾಟಕಕ್ಕೆ ಆರ್‌. ಸಮರ್ಥ್-ಮಾಯಾಂಕ್‌ ಅಗರ್ವಾಲ್‌ ಸಮರ್ಥ ಆರಂಭಿಕ ಜೋಡಿ ಎಂಬುದರಲ್ಲಿ ಎರಡು ಮಾತಿಲ್ಲ. ಇಬ್ಬರೂ ಪ್ರಚಂಡ ಫಾರ್ಮ್ನಲ್ಲಿದ್ದಾರೆ. ಮಧ್ಯಮ ಕ್ರಮಾಂಕದ ಯುವ ಬ್ಯಾಟರ್‌ ನಿಕಿನ್‌ ಜೋಸ್‌ 420 ರನ್‌ ಬಾರಿಸಿ ಗಮನ ಸೆಳೆದಿದ್ದಾರೆ. ಅನುಭವಿಗಳಾದ ದೇವದತ್ತ ಪಡಿಕ್ಕಲ್‌, ಮನೀಷ್‌ ಪಾಂಡೆ ಕ್ರೀಸ್‌ ಆಕ್ರಮಿಸಿಕೊಳ್ಳುವ ಅಗತ್ಯವಿದೆ. ಅನಾರೋಗ್ಯದಿಂದಾಗಿ ಬಿ.ಆರ್‌. ಶರತ್‌ ಈ ಪಂದ್ಯದಲ್ಲಿ ಆಡುತ್ತಿಲ್ಲ. ಇವರ ಬದಲು ನಿಹಾಲ್‌ ಉಳ್ಳಾಲ್‌ ಸ್ಥಾನ ಪಡೆದಿದ್ದಾರೆ.

ಕರ್ನಾಟಕದ ಬೌಲಿಂಗ್‌ ಈ ಬಾರಿ ಹೆಚ್ಚು ಹರಿತವಾಗಿದೆ. ವಿದ್ವತ್‌ ಕಾವೇರಪ್ಪ, ವಿಜಯಕುಮಾರ್‌ ವೈಶಾಖ್‌, ಪದಾರ್ಪಣ ಪಂದ್ಯದಲ್ಲೇ 5 ವಿಕೆಟ್‌ ಕಿತ್ತ ಮುರಳೀಧರ್‌ ವೆಂಕಟೇಶ್‌ ವೇಗದ ಅಸ್ತ್ರಗಳು. ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ಗಳಾದ ಶ್ರೇಯಸ್‌ ಗೋಪಾಲ್‌, ಕೃಷ್ಣಪ್ಪ ಗೌತಮ್‌ ವಿಕೆಟ್‌ ಬೇಟೆಗೆ ಮುಂದಾದರೆ ಕರ್ನಾಟಕದ ಮೇಲುಗೈ ನಿರೀಕ್ಷಿಸಲಡ್ಡಿಯಿಲ್ಲ. ಶ್ರೇಯಸ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಅಜೇಯ 161 ರನ್‌ ಬಾರಿಸಿ ಮಿಂಚಿದ್ದರು.

ಮೂವರು ಪ್ರಮುಖರ ಗೈರು
ಸೌರಾಷ್ಟ್ರದ ಮೂವರು ಆಟಗಾರರು ಟೆಸ್ಟ್‌ ತಂಡದಲ್ಲಿರುವುದರಿಂದ ಅಷ್ಟರ ಮಟ್ಟಿಗೆ ತಂಡಕ್ಕೆ ಹಿನ್ನಡೆಯಾಗಲಿದೆ. ನಾಯಕ ಜೈದೇವ್‌ ಉನಾದ್ಕತ್‌, ಚೇತೇಶ್ವರ್‌ ಪೂಜಾರ, ರವೀಂದ್ರ ಜಡೇಜ ಗೈರಲ್ಲಿ ತಂಡ ಕಣಕ್ಕಿಳಿಯಬೇಕಿದೆ.
ಕ್ವಾರ್ಟರ್‌ ಫೈನಲ್‌ನಲ್ಲಿ ಆಲ್‌ರೌಂಡ್‌ ಪ್ರದರ್ಶನ ನೀಡಿದ ಪಾರ್ಥ ಭಟ್‌, ನಾಯಕ ಅರ್ಪಿತ್‌ ವಸವಾಡ, ಪ್ರೇರಕ್‌ ಮಂಕಡ್‌, ಚೇತನ್‌ ಸಕಾರಿಯ, ಹಾರ್ವಿಕ್‌ ದೇಸಾಯಿ, ಶೆಲ್ಡನ್‌ ಜಾಕ್ಸನ್‌ ಅವರನ್ನೊಳಗೊಂಡ ಸೌರಾಷ್ಟ ಎಷ್ಟರ ಮಟ್ಟಿಗೆ ಹೋರಾಟ ಸಂಘಟಿಸೀತು ಎಂಬುದೊಂದು ಕುತೂಹಲ.

ಕೊನೆಯ ಮುಖಾಮುಖಿ
ಕರ್ನಾಟಕ-ಸೌರಾಷ್ಟ್ರ ಕೊನೆಯ ಸಲ ಎದುರಾದದ್ದು 2020ರ ಲೀಗ್‌ ಹಂತದಲ್ಲಿ. ಪೂಜಾರ ಅವರ 248 ರನ್‌ ಸಾಹಸದಿಂದ 7ಕ್ಕೆ 581 ರನ್‌ ಪೇರಿಸಿದ ಸೌರಾಷ್ಟ್ರ, ಕರ್ನಾಟಕವನ್ನು ಪರಾಭವಗೊಳಿಸಿತ್ತು.

ಸಂಭಾವ್ಯ ತಂಡಗಳು
ಕರ್ನಾಟಕ: ಮಾಯಾಂಕ್‌ ಅಗರ್ವಾಲ್‌ (ನಾಯಕ), ಆರ್‌. ಸಮರ್ಥ್, ದೇವದತ್ತ ಪಡಿಕ್ಕಲ್‌, ನಿಕಿನ್‌ ಜೋಸ್‌, ಮನೀಷ್‌ ಪಾಂಡೆ, ಶ್ರೇಯಸ್‌ ಗೋಪಾಲ್‌, ಎಸ್‌. ಶರತ್‌ (ವಿ.ಕೀ.), ಕೆ. ಗೌತಮ್‌, ಎಂ. ವೆಂಕಟೇಶ್‌, ವಿದ್ವತ್‌ ಕಾವೇರಪ್ಪ, ವೈಶಾಖ್‌ ವಿಜಯ್‌ಕುಮಾರ್‌.

ಸೌರಾಷ್ಟ್ರ: ಹಾರ್ವಿಕ್‌ ದೇಸಾಯಿ (ವಿ.ಕೀ.), ಸ್ನೆಲ್‌ ಪಟೇಲ್‌, ವಿಶ್ವರಾಜ್‌ ಜಡೇಜ, ಶೆಲ್ಡನ್‌ ಜಾಕ್ಸನ್‌, ಅರ್ಪಿತ್‌ ವಸವಾಡ (ನಾಯಕ), ಚಿರಾಗ್‌ ಜಾನಿ, ಪ್ರೇರಕ್‌ ಮಂಕಡ್‌, ಧರ್ಮೇಂದ್ರಸಿನ್ಹ ಜಡೇಜ, ಪಾರ್ಥ್ ಭಟ್‌, ಚೇತನ್‌ ಸಕಾರಿಯ, ಯುವರಾಜ್‌ಸಿನ್‌ ದೋಡಿಯ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.