Scam: ಪಡಿತರ ಹಗರಣ- ಪ.ಬಂಗಾಲ ಸಚಿವ ಸೆರೆ
Team Udayavani, Oct 28, 2023, 12:22 AM IST
ಕೋಲ್ಕತಾ: ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾವಣೆ ಆರೋಪದ ಮೇರೆಗೆ ಪಶ್ಚಿಮ ಬಂಗಾಲದ ಸಚಿವ ಜ್ಯೋತಿ ಪ್ರಿಯಾ ಮಲ್ಲಿಕ್ ಅವರನ್ನು ಶುಕ್ರವಾರ ಮುಂಜಾನೆ ಬಂಧಿಸಲಾಗಿದೆ. ರಾಜ್ಯ ಅರಣ್ಯ ಸಚಿವರಾದ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯವು ಸ್ಥಳೀಯ ಕೋರ್ಟ್ಗೆ ಹಾಜರುಪಡಿಸಿದ್ದು, ಅವರನ್ನು 10 ದಿನಗಳ ಕಾಲ ಇ.ಡಿ. ವಶಕ್ಕೊಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಹಲವು ರೀತಿಯ ಕಾಯಿಲೆಗಳಿಂದ ಬಳಲುತ್ತಿರುವ ಮಲ್ಲಿಕ್ ಅವರು ವಿಚಾರಣೆ ವೇಳೆ ಕೋರ್ಟ್ ಕೊಠಡಿಯಲ್ಲೇ ಕುಸಿದುಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮುನ್ನ, “ನಾನು ವ್ಯವಸ್ಥಿತ ಸಂಚಿನ ಬಲಿ ಪಶು. ಬಿಜೆಪಿ ಮತ್ತು ಸುವೇಂದು ಅಧಿಕಾರಿ ಹೆಣೆದ ಸಂಚಿದು’ ಎಂದು ಅವರು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ