ಜಟ್ಟ ಗಿರಿರಾಜ್ ಚಿತ್ರದಲ್ಲಿ ರವಿಚಂದ್ರನ್
Team Udayavani, Jun 5, 2020, 4:18 AM IST
ರವಿಚಂದ್ರನ್ ಅವರ ಹೊಸ ಸಿನಿಮಾದ ಕುರಿತಾದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ ಜಟ್ಟ ಗಿರಿರಾಜ್ ನಿರ್ದೇಶನದಲ್ಲಿ ರವಿಚಂದ್ರನ್ ಅವರು ನಟಿಸಲಿದ್ದಾರಂತೆ. ಈಗಾ ಗಲೇ ಮಾತುಕತೆ ಕೂಡಾ ಮುಗಿದು ಹೋಗಿದೆ. ಇದು ಹೊಸ ಬಗೆಯ ಕಥೆಯಾಗಿದ್ದು, ರವಿ ಚಂದ್ರನ್ ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇದು 1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ನಂತರದ ಕಾಲಘಟ್ಟದಲ್ಲಿ ನಡೆಯುವ ಕಥೆಯಂತೆ.
ಹಾಗಾಗಿ ಈ ಚಿತ್ರದ ಕುರಿತು ಸಾಕಷ್ಟು ರೀಸರ್ಚ್ ಮಾಡುವ ಅಗತ್ಯವಿದೆ ಯಂತೆ. ಸದ್ಯ ಮಾತುಕತೆ ಅಂತಿಮವಾಗಿದ್ದು, ಸಿನಿಮಾ ಯಾವಾಗ ಶುರುವಾಗುತ್ತದೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಈ ನಡುವೆಯೇ ರವಿಚಂದ್ರನ್ ಅವರ ಪುತ್ರನ ಸಿನಿಮಾವನ್ನು ನಿರ್ದೇಶನ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ನಟ-ನಿರ್ದೇಶಕ-ನಿರ್ಮಾಪಕ, ಅಭಿಮಾನಿಗಳ ಕ್ರೇಜಿ ಸ್ಟಾರ್ ತಮ್ಮ ಪುತ್ರನಿಗಾಗಿ ಸ್ಕ್ರಿಪ್ಟ್ನ ತಯಾರಿ ನಡೆಸಲು ಲಾಕ್ಡೌನ್ ಸಮಯವನ್ನು ಬಳಸಿಕೊಂಡಿದ್ದಾರೆ.
ಈ ಚಿತ್ರದಲ್ಲಿ ರವಿಚಂದ್ರನ ಜತೆಗೆ ಅವರ ಎರಡನೇ ಮಗನಾದ ವಿಕ್ರಂ ರವಿಚಂದ್ರನ್ ತೆರೆಯ ಮೇಲೆ ಕಾಣಿಸಲಿದ್ದಾರೆ. ಲಾಕ್ಡೌನ್ ಸಮಯದಲ್ಲಿ ಎಡಿಟ್ ಡೆಸ್ಕ್ನಲ್ಲಿ ನಿರತರಾಗಿರುವ ಹಿರಿಯ ನಟ ಚಿತ್ರಕಥೆಯ ಬಗ್ಗೆ ಸುಳಿವು ನೀಡಿಲ್ಲ. ನಾನು ರವಿ ಬೋಪಣ್ಣ ಯೋಜನೆಯಲ್ಲಿ ಕೆಲಸ ಮಾಡು ತ್ತಿದ್ದೇನೆ ಮತ್ತು ಈ ನಡುವೆ ಮೂರು ಸ್ಕ್ರಿಪ್ಟ್ಗಳನ್ನು ಪೂರ್ಣಗೊಳಿಸಿದೆ. ಒಂದು ಚಿತ್ರದಲ್ಲಿ ತಂದೆ ಮತ್ತು ಮಗ ಒಟ್ಟಿಗೆ ಸೇರಲಿದ್ದೇವೆ.
ನಾನು ಹಾಗೂ ವಿಕ್ರಮ್ ಆ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು ಚಿತ್ರ ನಿರ್ದೇಶನ ನನ್ನದೇ ಆಗಿರಲಿದೆ ಎಂದಿದ್ದಾರೆ. “ಇದು ನನ್ನ ಕಡೆಯಿಂದ ಇನ್ನೊಂದು ವಿಶಿಷ್ಟ ಪ್ರಯತ್ನ ವಾಗಿದೆ. ವಿನೂತನ ಚಿತ್ರಕಥೆಯನ್ನಿದು ಹೊಂದಿರಲಿದೆ. ರಾಜ್ಯವು ಲಾಕ್ ಡೌನ್ ನಿಂದ ಹೊರಬಂದ ನಂತರ ನಾನು ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸುತ್ತೇನೆ” ಎಂದು ರವಿಚಂದ್ರನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ