ಪೊಲಿಟಿಕಲ್ ಡ್ರಾಮಾಕ್ಕೆ ಕ್ರೇಜಿಸ್ಟಾರ್ ನಿರ್ದೇಶನ
Team Udayavani, Jan 21, 2021, 11:33 AM IST
ಸದ್ಯ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ಕನ್ನಡಿಗ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಇತ್ತೀಚೆಗಷ್ಟೇ “ಕನ್ನಡಿಗ’ ಚಿತ್ರದ ಚಿತ್ರೀಕರಣ ರ್ಪೂಗೊಳಿಸಿರುವ ಚಿತ್ರತಂಡ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ. ಎಲ್ಲ ಅಂದುಕೊಂಡಂತೆ, ನಡೆದರೆ ಇದೇ ಏಪ್ರಿಲ್ ಎರಡನೇ ವಾರದ ಹೊತ್ತಿಗೆ “ಕನ್ನಡಿಗ’ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಇದರ ನಡುವೆಯೇ “ಕನ್ನಡಿಗ’ ಚಿತ್ರದ ನಿರ್ಮಾಪಕ ಎನ್.ಎಸ್. ರಾಜಕುಮಾರ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸಚಿತ್ರಕ್ಕೆ ರವಿಚಂದ್ರನ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಹೌದು, ಈ ಹಿಂದೆ “ಪೃಥ್ವಿ’, “ಜಟ್ಟಾ’, “ಮೈನಾ’, “ಮೈತ್ರಿ’ ಮೊದಲಾದ ಚಿತ್ರಗಳನ್ನು ನಿರ್ಮಿಸಿರುವ ಎನ್.ಎಸ್ ರಾಜಕುಮಾರ್ ಸದ್ಯ “ಕನ್ನಡಿಗ’ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದ ಬಿಡುಗಡೆಗೂ ಮೊದಲೇ ರವಿಚಂದ್ರನ್ ನಿರ್ದೇಶನದಲ್ಲಿ ಹೊಸ ಚಿತ್ರವನ್ನು ನಿರ್ಮಿಸುವ ಆಲೋಚನೆಯಲ್ಲಿದ್ದಾರೆ.
ಇದನ್ನೂ ಓದಿ:ಗೋವಾ ಚಿತ್ರೋತ್ಸವ: ಓಟಿಟಿ ಸಿನಿಮಾ ಮಂದಿರಗಳನ್ನು ಕೊಲ್ಲುತ್ತದೆಯೇ? ಒಂದು ಚರ್ಚೆ
ಈ ಬಗ್ಗೆ ಮಾತನಾಡುವ ನಿರ್ಮಾಪಕ ಎನ್.ಎಸ್ ರಾಜಕುಮಾರ್, “ರವಿಚಂದ್ರನ್ ಅವರ ನಿರ್ದೇಶನದಲ್ಲಿ ಹೊಸ ಚಿತ್ರವನ್ನು ನಿರ್ಮಿಸಲು ಯೋಚಿಸಲಾಗಿದೆ. ಈ ಚಿತ್ರವನ್ನು ನಿರ್ದೇಶಿಸಲು ರವಿಚಂದ್ರನ್ ಅವರ ಕಡೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸದ್ಯಕ್ಕೆ ಚಿತ್ರದ ಒನ್ಲೈನ್ ಸ್ಟೋರಿ ನಮಗೆ ಒಪ್ಪಿಗೆಯಾಗಿದ್ದು, ಅದರ ಮೇಲೆ ಸ್ಕ್ರಿಪ್ಟ್ ಕೆಲಸ ಕೂಡ ಶುರುವಾಗಿದೆ.
ಇದೊಂದು ಪೊಲಿಟಿಕಲ್ ಸಬ್ಜೆಕ್ಟ್ ಸಿನಿಮಾ. ಸದ್ಯಕ್ಕೆ ಈ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸ ಆರಂಭವಾಗಿದ್ದು, ಸಿನಿಮಾದ ಟೈಟಲ್, ಕಲಾವಿದರು ಮತ್ತು ತಂತ್ರಜ್ಞರು ಇನ್ನಷ್ಟೇ ಫೈನಲ್ ಆಗಬೇಕಿದೆ. ನಮ್ಮ ಪ್ಲಾನ್ ಪ್ರಕಾರ ಇದೇ ಏಪ್ರಿಲ್-ಮೇ ವೇಳೆಗೆ ಈ ಸಿನಿಮಾ ಶುರು ಮಾಡುವ ಪ್ಲಾನ್ ಇದೆ. ಆದಷ್ಟು ಬೇಗ ಈ ಸಿನಿಮಾವನ್ನು ಅಧಿಕೃತವಾಗಿ ಅನೌನ್ಸ್ ಮಾಡಲಿದ್ದೇವೆ’ ಎಂದಿದ್ದಾರೆ.
ಇನ್ನು ಸದ್ಯ ರವಿಚಂದ್ರನ್ “ಕನ್ನಡಿಗ’ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಒಂದೆಡೆಯಾಗಿದ್ದರೆ, ಅವರ ನಿರ್ದೇಶನದ “ರಾಜೇಂದ್ರ ಪೊನ್ನಪ್ಪ’, “ರವಿ ಭೋಪಣ್ಣ’ ಸಿನಿಮಾಗಳು ರಿಲೀಸ್ ಆಗಬೇಕಿದೆ. ಆ ಸಿನಿಮಾಗಳು ಬಿಡುಗಡೆಯಾದ ಮೇಲೆ ಈ ಚಿತ್ರ ಶುರುವಾಗಲಿದೆಯಾ, ಅಥವಾ ಅದಕ್ಕೂ ಮುನ್ನವೇ ಶುರುವಾಗಲಿದೆಯಾ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ. ಒಟ್ಟಾರೆ ರವಿಚಂದ್ರನ್ ನಿರ್ದೇಶನದ ಈ ಚಿತ್ರ ಸುದ್ದಿ ಅವರ ಅಭಿಮಾನಿಗಳಲ್ಲಿ ಒಂದಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಚಿತ್ರದ ಬಗ್ಗೆ ಹೆಚ್ಚಿನ ಅಪ್ಡೇಟ್ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು