ಒಳಚರಂಡಿ ಕೆಲಸ ಮರು ಆರಂಭ: ವಾರದಲ್ಲಿ ನಿರ್ಧಾರ


Team Udayavani, Mar 23, 2021, 4:20 AM IST

ಒಳಚರಂಡಿ ಕೆಲಸ ಮರು ಆರಂಭ: ವಾರದಲ್ಲಿ ನಿರ್ಧಾರ

ಕುಂದಾಪುರ: ನಗರದಲ್ಲಿ ಬಾಕಿಯಾದ ಒಳಚರಂಡಿ ಕಾಮಗಾರಿ ಆರಂಭ ಕುರಿತು 1 ವಾರದಲ್ಲಿ ಸ್ಪಷ್ಟಚಿತ್ರಣ ದೊರೆಯಲಿದೆ. ವೆಟ್‌ವೆಲ್‌ ಮಾಡಲು ಬೇಕಾದ ಎಲ್ಲ ಸಿದ್ಧತೆಗಳನ್ನೂ ಪುರಸಭೆ ಮಾಡಿದ್ದು ಕಾಮಗಾರಿ ಬಿಟ್ಟು ಹೋದ ಗುತ್ತಿಗೆದಾರರನ್ನು ಕರೆಸಿ ಹಳೆಯ ದರದಲ್ಲಿಯೇ ಕಾಮಗಾರಿ ಮುಂದುವರಿ ಸುತ್ತಾರಾ ಎಂದು ಕೇಳಿ ಖಚಿತಪಡಿಸಿಕೊಳ್ಳುವುದಷ್ಟೇ ಬಾಕಿ ಇದೆ. ಹಳೆಯ ದರಕ್ಕೆ ಒಪ್ಪದಿದ್ದರೆ ಗುತ್ತಿಗೆ ರದ್ದುಪಡಿಸಿ 3 ತಿಂಗಳೊಳಗೆ ಹೊಸ ಗುತ್ತಿಗೆ ನೀಡಬೇಕಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಎಂಜಿನಿಯರ್‌ ಚಂದ್ರಶೇಖರ್‌ ಸ್ಪಷ್ಟಪಡಿಸಿದರು.

ಸೋಮವಾರ ಇಲ್ಲಿನ ಪುರಸಭೆಯಲ್ಲಿ ಒಳಚರಂಡಿ ಕುರಿತಾಗಿ ನಡೆದ ವಿಶೇಷ ಸಭೆಯಲ್ಲಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ. ಕೆ. ಭಟ್‌ ಅವರು ಕಾಮಗಾರಿ ಬೇಗನೇ ಮುಗಿಸುವಂತೆ ಸೂಚಿಸಿ, ಪುರಸಭೆಯಿಂದ ಹಸ್ತಾಂತರಕ್ಕೆ ಬಾಕಿ ಇರುವ ಭೂಮಿಯನ್ನು ನೀಡಲು ಸಹಕರಿಸಿದರೆ ಮಂಡಳಿ ವತಿಯಿಂದ ಪೂರ್ಣ ಸಹಕಾರ ನೀಡಲಾಗುವುದು. ನನೆಗುದಿಗೆ ಬಿದ್ದ ಕಾಮಗಾರಿಯ ವಿವರಗಳನ್ನು ನೋಡಿದ್ದು ವೆಟ್‌ವೆಲ್‌ಗ‌ಳ ರಚನೆ ಸ್ಥಳ ಪರಿಶೀಲನೆ ನಡೆಸಿದ್ದೇನೆ ಎಂದರು.

ತಪ್ಪು ಮಾಹಿತಿ ಬೇಡ
ಮೋಹನದಾಸ ಶೆಣೈ ಮಾತನಾಡಿ, 10 ದಿನಗಳಲ್ಲಿ ಭೂಮಿ ದೊರೆಯತ್ತದೆ ಎಂದು ಹೇಳಿ ತಿಂಗಳುಗಳೇ ಕಳೆದರೂ ಹಸ್ತಾಂತರಿಸಿಲ್ಲ. ಬಾಕಿಯಾದ ಕಾಮಗಾರಿ ಆರಂಭವಾಗಿಲ್ಲ. ಹೊಸ ಕಾಮಗಾರಿಯೂ ನಡೆದಿಲ್ಲ. ಇಂತಹ ತಪ್ಪು ಮಾಹಿತಿ ಯಾರು ನೀಡುತ್ತಾರೆ ಎಂದಾಗಬೇಕು. 23 ಕೋ.ರೂ.ಗಳ ಕಾಮಗಾರಿ ಆಗಿದ್ದರೂ ಆದ ಕಾಮಗಾರಿ ಕುರಿತು ಋಣಾತ್ಮಕ ಮಾತುಗಳೇ ಜನವಲಯದಲ್ಲಿ ಕೇಳಿ ಬರುತ್ತಿವೆೆ. ಯುಜಿಡಿ ಜನರಿಗೆ ಶಾಪವಾಗದೇ ಪ್ರಯೋಜನಕಾರಿ ಆಗಲಿ ಎಂದರು.

ಹೊಳೆಗೆ ತ್ಯಾಜ್ಯ
ಸುಲೋಚನಾ ಜಿ.ಕೆ. ಭಟ್‌ ಮಾತನಾಡಿ, ಹೊಳೆಗೆ ನೇರ ತ್ಯಾಜ್ಯ ನೀರು ಹರಿಯಬಿಡುವುದನ್ನು ನೋಡಿ ಬಂದೆ. ಸ್ವತ್ಛ ಪರಿಸರ ಸರಕಾರದ ಧ್ಯೇಯ. ಆದ್ದರಿಂದ ಕಾಮಗಾರಿ ಬೇಗ ಪೂರ್ಣಗೊಳ್ಳಲು ಪುರಸಭೆ ಆಡಳಿತ ಮಂಡಳಿಯ ಸಹಕಾರ ಬೇಕು. ಪುರಸಭೆ ತ್ಯಾಜ್ಯ ಜಲ ಘಟಕಕ್ಕೆ ಜಾಗ ಹಸ್ತಾಂತರಿಸದ ಹೊರತು ಕಾಮಗಾರಿ ಪುನರಾರಂಭದ ದಿನಾಂಕ ನಿರ್ಣಯಿಸಲಾಗದು. ಯೋಜನಾ ವೆಚ್ಚ ಹೆಚ್ಚುತ್ತಿದೆ. ಆದರೂ ಹಣಕಾಸಿನ ಕೊರತೆ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳ ಜತೆ ಮಂಡಳಿಯಿಂದ ಪತ್ರ ವ್ಯವಹಾರ ಮಾಡಲಾಗುವುದು ಎಂದರು.

ಕಾಮಗಾರಿಗೆ ಯಾರ ಒತ್ತಡ
ಚಂದ್ರಶೇಖರ ಖಾರ್ವಿ ಮಾತನಾಡಿ, ನಿರಾಕ್ಷೇಪಣೆ ಪತ್ರ ಇಲ್ಲದೇ, ಜಾಗ ದೊರೆಯದೇ ಯಾರ ಒತ್ತಡದಿಂದ ಕಾಮಗಾರಿ ಆರಂಭಿಸಲಾಗಿದೆ. ಡಿಪಿಆರ್‌ನಲ್ಲಿ ಸಿಆರ್‌ಝಡ್‌ ವಲಯ ಇದ್ದುದನ್ನು ಗಮನಿಸಲಿಲ್ಲ ಯಾಕೆ. ರಿಂಗ್‌ರೋಡ್‌ನ್ನು ಪ್ರಸ್ತಾವನೆಯಲ್ಲಿ ಇನ್ನೂ ಸೇರಿಸಿಲ್ಲ ಯಾಕೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಮಗಾರಿ ವಿಚಾರ ಏನಾಯಿತು ಎಂದು ಪ್ರಶ್ನಿಸಿದರು.

ದಾಖಲಾತಿ ಸಿದ್ಧ
ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, 5 ವೆಟ್‌ವೆಲ್‌ಗ‌ಳ ಪೈಕಿ 3 ವೆಟ್‌ವೆಲ್‌ಗ‌ಳ ಭೂಮಿಯ ಎಲ್ಲ ದಾಖಲಾತಿ ಸಿದ್ಧವಾಗಿದೆ. ಡಿಸಿ ಅನುಮತಿಯೂ ದೊರೆತಿದೆ. 1 ಕಡೆ ಆಕ್ಷೇಪವಿದ್ದು ಸಭೆ ನಡೆಸಬೇಕಿದೆ. ಇನ್ನೊಂದು ಜಾಗ 43 ಸೆಂಟ್ಸ್‌ಗೆ ಒಪ್ಪಿಗೆ ಬಾಕಿ ಇದೆ. ಎಸ್‌ಟಿಪಿಗೆ ಜಾಗ ಇದ್ದು ದಾರಿ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು. ಕಾಮಗಾರಿ ಆರಂಭಿಸಲು ಯಾವುದೇ ಅಡೆತಡೆಗಳಿಲ್ಲ. ವೆಟ್‌ವೆಲ್‌ಗೆ ಟೆಂಡರ್‌ ಕರೆಯಬೇಕಿಲ್ಲ. ಎಸ್‌ಟಿಪಿಗೆ ಮಾತ್ರ ಟೆಂಡರ್‌ ಕರೆಯಬೇಕಿದ್ದು ಅಷ್ಟರಲ್ಲಿ ದಾರಿ ಸಮಸ್ಯೆ ಪರಿಹಾರವಾಗಲಿದೆ ಎಂದರು.

ಟಾಪ್ ನ್ಯೂಸ್

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.