Election: ಕಣಿವೆಯಲ್ಲಿ ಚುನಾವಣೆ ನಡೆಸಲು ಸಿದ್ದ : ಕೇಂದ್ರ
-ರಾಜ್ಯದ ಸ್ಥಾನಮಾನವನ್ನು ತಕ್ಷಣವೇ ಮರಳಿಸಲು ಸಾಧ್ಯವಿಲ್ಲ: ಸುಪ್ರೀಂಗೆ ಮಾಹಿತಿ
Team Udayavani, Aug 31, 2023, 7:32 PM IST
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಯಾವುದೇ ಸಮಯದಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಈ ಕುರಿತಂತೆ ನಿರ್ಣಯ ತೆಗೆದುಕೊಳ್ಳುವುದು ಚುನಾವಣೆ ಆಯೋಗ ಹಾಗೂ ರಾಜ್ಯ ಚುನಾವಣೆ ಸಮಿತಿಗೆ ಬಿಟ್ಟ ವಿಚಾರವೆಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಗುರುವಾರ ಮಾಹಿತಿ ನೀಡಿದೆ.
370ನೇ ವಿಧಿ ರದ್ದು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸಿಜೆಐ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠದ ಮುಂದೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಣಿವೆಯಲ್ಲಿ ಮೂರು ಹಂತದ ಚುನಾವಣೆಗಳನ್ನು ನಡೆಸಲು ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದ್ದಾರೆ.
ಮಂಗಳವಾರದ ವಿಚಾರಣೆಯಲ್ಲಿ ನ್ಯಾಯಪೀಠವು ಚುನಾಯಿತ ಸರ್ಕಾರದ ಅಗತ್ಯವಿರುವ ಕಾರಣ, ರಾಜ್ಯ ಸ್ಥಾನಮಾನ ಪುನಃಸ್ಥಾಪನೆ ಕೋರಿ ಸಲ್ಲಿಕೆಯಾಗಿದ್ದ ಮನವಿಗಳನ್ನು ಆಲಿಸಿ, ಕೇಂದ್ರದ ಪ್ರತಿಕ್ರಿಯೆ ಕೇಳಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಮೆಹ್ತಾ ಅವರು ಪ್ರತಿಕ್ರಿಯೆ ನೀಡಿ ಜಮ್ಮುಕಾಶ್ಮೀರಕ್ಕೆ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ಶಾಶ್ವತ ಅಲ್ಲ. ಆದರೆ, ಇನ್ನೂ ಕೆಲವು ಸಮಯ ಕಣಿವೆ ಕೇಂದ್ರದ ಅಧೀನದಲ್ಲಿ ಇರುವ ಅಗತ್ಯವಿದೆ. ರಾಜ್ಯ ಸ್ಥಾನಮಾನ ಪುನಃಸ್ಥಾಪನೆ ಬಗ್ಗೆ ಈಗಲೇ ನಿಖರ ಗಡುವು ನೀಡಲು ಸಾಧ್ಯವಿಲ್ಲ. ಆದರೆ, ಈ ನಿಟ್ಟಿನಲ್ಲಿ ಗಣನೀಯ ಪ್ರಗತಿಯನ್ನಂತೂ ಸಾಧಿಸಲಾಗಿದೆ ಎಂದಿದ್ದಾರೆ.
ಸಿಬಲ್-ಮೆಹ್ತಾ ನಡುವೆ ತೀವ್ರ ವಾಗ್ವಾದ
ಕಣಿವೆಯಲ್ಲಿ 370ನೇ ವಿಧಿ ರದ್ದು ಬಳಿಕ ಬಂದ್, ಮುಷ್ಕರಗಳು ಕಡಿಮೆ ಆಗಿವೆ ಎಂದು ಮೆಹ್ತಾ ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಈ ವೇಳೆ ಅರ್ಜಿದಾರರ ಪರ ಹಿರಿ ವಕೀಲ ಕಪಿಲ್ ಸಿಬಲ್ ಆಕ್ಷೇಪ ವ್ಯಕ್ತಪಡಿಸಿದರು. ಪರಿಣಾಮ ಮೆಹ್ತಾ ಮತ್ತು ಸಿಬಿಲ್ ಅವರ ನಡುವೆ ತೀವ್ರ ವಾಗ್ವಾದಗಳು ನಡೆದಿವೆ. ಜನರನ್ನು ಗೃಹ ಬಂಧನದಲ್ಲಿರಿಸಿ, ಸೆಕ್ಷನ್ 144 ಜಾರಿಗೊಳಿಸಿ, ಅಂತರ್ಜಾಲ ಸೇವೆ ಕಡಿತಗೊಳಿಸಿ ಈಗ ಬಂದ್ ನಡೆದಿಲ್ಲವೆಂದು ಕೇಂದ್ರ ಹೇಳುತ್ತಿದೆ. 5,000 ಮಂದಿಯನ್ನೂ ಕೂಡಿ ಹಾಕಿದರೆ ಬಂದ್ ನಡೆಯುವುದಾದರೂ ಹೇಗೆ? ಕೇಂದ್ರದ ವರದಿಗಳು ಪ್ರಜಾಪ್ರಭುತ್ವವನ್ನೇ ಅಪಹಾಸ್ಯ ಮಾಡುತ್ತಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ