Tulu: ಹೆಚ್ಚುವರಿ ಭಾಷೆಯಾಗಿ ತುಳುವಿಗೆ ಮಾನ್ಯತೆ- ಕಂಬಳ ಉದ್ಘಾಟಿಸಿ ಸಿಎಂ
Team Udayavani, Nov 26, 2023, 12:46 AM IST
ಬೆಂಗಳೂರು: ತುಳು ಭಾಷೆಗೆ ರಾಜ್ಯದ ಹೆಚ್ಚುವರಿ ಭಾಷೆಯಾಗಿ ಮಾನ್ಯತೆ ಒದಗಿಸಲು ಪ್ರಯತ್ನಿಸುತ್ತೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತುಳುವರಿಗೆ ಅವರ ಮಾತೃಭಾಷೆಯ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ತುಳುವಿಗೆ ರಾಜ್ಯದ ಹೆಚ್ಚುವರಿ ಭಾಷೆಯಾಗಿ ಮಾನ್ಯತೆ ನೀಡುವ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಜತೆಗೆ ಮಾತನಾಡಿ ಪ್ರಯತ್ನಿಸುತ್ತೇವೆ ಎಂದರು.
ನಿವೇಶನದ ಭರವಸೆ
ಕಂಬಳ ಸಮಿತಿಯವರು ಬಿಡಿಎ ಯಿಂದ ಸಿ.ಎ. ನಿವೇಶನ ಕೊಡಿಸ ಬೇಕೆಂದು ವಿನಂತಿಸಿದ್ದಾರೆ. ಎಲ್ಲಿ ನಿವೇಶನ ಬೇಕು ಎಂದು ಅರ್ಜಿ ಸಲ್ಲಿಸಿದರೆ ಅಲ್ಲಿ ನಿವೇಶನ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಪ್ರತೀವರ್ಷ ನವೆಂಬರ್, ಡಿಸೆಂಬರ್ನಲ್ಲಿ ಬೆಂಗಳೂರು ಕಂಬಳ ಆಯೋಜಿಸಿ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.
ಅಧ್ಯಾದೇಶ ಹೊರಡಿಸಿದ್ದೆ
ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ನ್ಯಾಯಾಲಯ ಕಂಬಳ, ಜಲ್ಲಿಕಟ್ಟು ಮಾಡಬಾರದು ಎಂದಿತ್ತು. ಆದರೆ ಸಾಮಾನ್ಯ ಜನರ ಕ್ರೀಡೆ ಎಂದು ಪರಿಗಣಿಸಿ ಕಂಬಳ ಕ್ರೀಡೆ ಬೆಳೆಯಬೇಕು, ಉಳಿಯಬೇಕು ಎಂಬ ಉದ್ದೇಶದಿಂದ ನಾನು ಅಧ್ಯಾದೇಶ ಹೊರಡಿಸಿದ್ದೆ. ಹಾಗಾಗಿ ಈಗ ಕಂಬಳ ಕ್ರೀಡೆ ಉಳಿದುಕೊಂಡಿದೆ. ಇದನ್ನು ಬೆಳೆಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ