UPA ಗಿಂತ ಮೋದಿ ಹೆಚ್ಚು ಅನುದಾನ ನೀಡಿದ್ದರೆ ದಾಖಲೆ ಕೊಡಲಿ: ಆರ್.ಬಿ. ತಿಮ್ಮಾಪುರ
Team Udayavani, Feb 3, 2024, 11:00 PM IST
ಬಾಗಲಕೋಟೆ: ಹಿಂದಿನ ಯುಪಿಎ ಸರಕಾರಕ್ಕಿಂತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯಕ್ಕೆ ಹೆಚ್ಚಿನ ಅನುದಾನ ಕೊಟ್ಟಿದ್ದರೆ ಅದರ ದಾಖಲೆ ಬಿಡುಗಡೆಗೊಳಿಸಲಿ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ಹೆಚ್ಚಿನ ಅನುದಾನ ಕೊಟ್ಟಿದ್ದರೆ ಅಂಕಿಅಂಶ ಸಹಿತ ತಿಳಿಸಲಿ. ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರದಿಂದ ಈವರೆಗೆ ನಯಾಪೈಸೆ ಕೊಟ್ಟಿಲ್ಲ. ಜಿಎಸ್ಟಿ ಹಣ ನಮಗೆ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದರು.
ಸಂಸದ ಡಿ.ಕೆ. ಸುರೇಶ್ ಹೇಳಿಕೆಯನ್ನು ಬೇರೆ ರೀತಿ ಅರ್ಥೈಸಲಾಗುತ್ತಿದೆ. ನಮ್ಮ ಭಾಗದಲ್ಲಿ ಅಭಿವೃದ್ಧಿ ಕುಂಠಿತ ಆಗುತ್ತಿವೆ. ಒಂದೇ ಭಾಗಕ್ಕೆ ಹೆಚ್ಚಿನ ಅನುದಾನ ಕೊಡುತ್ತಿದ್ದಾರೆ. ಹೀಗಾದರೆ ಬೇರೆ ರಾಷ್ಟ್ರ ಬೇಕು ಎಂದು ಜನ ದಂಗೆ ಏಳಬಹುದು ಎಂಬ ದಾಟಿಯಲ್ಲಿ ಅವರು ಹೇಳಿದ್ದಾರೆ. ಪ್ರತ್ಯೇಕ ರಾಷ್ಟ್ರ ಆಗಬೇಕೆಂದು ಹೇಳಿಲ್ಲ. ಅವರ ಹೇಳಿಕೆ ತಿರುಚುವುದು ಸರಿಯಲ್ಲ ಎಂದು ಹೇಳಿದರು.
ಮದ್ಯದ ದರ ಹೆಚ್ಚಳ ಇಲ್ಲ
ರಾಜ್ಯದಲ್ಲಿ ಮದ್ಯದ ದರವನ್ನು ಹೆಚ್ಚಿಸಿಲ್ಲ. ಅಂಥ ಯೋಚನೆಯೂ ಇಲ್ಲ. ಮದ್ಯದ ದರ ಹೆಚ್ಚಿಸುವುದಾದರೆ ಮೊದಲೇ ಹೇಳುತ್ತೇವೆ. ಸದ್ಯ ಶೇ.10ರಷ್ಟು ಬಿಯರ್ ಬೆಲೆ ಹೆಚ್ಚಾಗಿದೆ. ಅಬಕಾರಿ ಇಲಾಖೆಗೆ ಯಾವುದೇ ಟಾರ್ಗೆಟ್ ಕೊಟ್ಟಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್