ಕೆಂಪು ಕಲ್ಲು ಗಣಿಗಾರಿಕೆ : ಮೂಡುಗಲ್ಲು ‘ಗುಹಾಂತರ’ ದೇಗುಲಕ್ಕೆ ಆಪತ್ತು


Team Udayavani, Mar 10, 2022, 12:25 PM IST

ಕೆಂಪು ಕಲ್ಲು ಗಣಿಗಾರಿಕೆ : ಮೂಡುಗಲ್ಲು “ಗುಹಾಂತರ’ ದೇಗುಲಕ್ಕೆ ಆಪತ್ತು

ಕುಂದಾಪುರ : ಕೆರಾಡಿ ಗ್ರಾಮದ ಮೂಡುಗಲ್ಲು ಎಂಬಲ್ಲಿ ಗುಹಾಂತರ ದೇಗುಲವಿದ್ದು ಕೆಂಪು ಕಲ್ಲು ಗಣಿಗಾರಿಕೆಯಿಂದ ದೇಗು ಲಕ್ಕೆ ಆಪತ್ತು ಎದು ರಾಗಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ.

ಪ್ರಕೃತಿಯ ವಿಸ್ಮಯದಂತೆ ಕಂಡು ಬರುವ ಈ ಸಹಜ, ಸುಂದರ ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೂ ಈಗ ಕಂಟಕ ಎದುರಾದಂತಿದೆ. ಈ ದೇವಸ್ಥಾನದ ತುಸು ದೂರದಲ್ಲಿಯೇ ಭಾರೀ ಪ್ರಮಾಣದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ಈ ಗಣಿಗಾರಿಕೆ ನಡೆಯುತ್ತಿದೆ.

ಅಕ್ರಮವೋ? ಸಕ್ರಮವೋ?: ಇದು ಅಕ್ರಮವೋ ಅಥವಾ ಸಕ್ರಮವೋ ಎನ್ನುವ ಬಗ್ಗೆ ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಲ್ಲಿ ಮಾಹಿತಿ ಕೇಳಿದಾಗ, ಕಳೆದ ವರ್ಷ ಇಲ್ಲಿ
ಪಟ್ಟ ಜಾಗದಲ್ಲಿ ಕೃಷಿ ಉದ್ದೇಶಕ್ಕಾಗಿ ಮಾತ್ರ ಅನುಮತಿ ನೀಡಲಾಗಿದೆ. ಅದು ಒಂದು ಅಡಿ ಕಲ್ಲು ತೆಗೆದು, ಕೃಷಿ ಮಾಡಲು ಅವಕಾಶ ನೀಡಲಾಗಿದೆ.

ಆದರೆ ಇಲ್ಲಿ ಈಗ ಹಲವರ ಜಾಗದಲ್ಲಿ ಗಣಿಗಾರಿಕೆ ನಡೆಯುತ್ತಿದೆ. ಮತ್ತೂಂದು ಮುಖ್ಯವಾದ ವಿಚಾರವೆಂದರೆ ಈಗ ಗಣಿಗಾರಿಕೆ ನಡೆಯುತ್ತಿರುವ ಬಹುಪಾಲು ಜಾಗಗಳಿಗೆ ಅವರ ಹೆಸರಲ್ಲಿ ದಾಖಲೆಯೇ ಇಲ್ಲ. ಅಂದರೆ ಅದು ಖಾಸಗಿ ಜಾಗವಲ್ಲ. ಸರಕಾರಿ ಅಧೀನದ ಜಾಗ. ಹಾಗಾದರೆ ಇದು ಹೇಗೆ ಸಕ್ರಮ ಆಗುತ್ತದೆ. ಇದು ಅಕ್ರಮ ಅಲ್ಲವಾ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ಡಿಸಿ ಕಣ್ಣು, ಮುಚ್ಚಿ ಕುಳಿತಿದ್ದಾರೆಯೇ ಎನ್ನುವುದು ದೇಗುಲದ ಭಕ್ತರ ಪ್ರಶ್ನೆ.

ಅಧಿಕಾರಿಗಳುಕೃಷಿ ಅಭಿವೃದ್ಧಿಗಾಗಿ ಇಲ್ಲಿ ಒಂದಡಿ ಕಲ್ಲು ತೆಗೆಯಲು ಮಾತ್ರ ಅನುಮತಿನೀಡಿರುವುದು. ಆದರೆ ಇಲ್ಲಿ ಒಂದಲ್ಲ, 10ಕ್ಕಿಂತ ಹೆಚ್ಚು ಅಡಿಗಳವರೆಗೆ ಕಲ್ಲುಗಳನ್ನು ತೆಗೆದು, ಸಾಗಿಸಲಾಗಿದೆ. ಅದು ಒಂದೇ ಜಾಗ ಮಾತ್ರವಲ್ಲ, ಎಕರೆಗಟ್ಟಲೆ ಜಾಗದಿಂದ ಕೆಂಪು ಕಲ್ಲು ತೆಗೆಯಲಾಗಿದೆ.

ರಸ್ತೆ ಧೂಳುಮಯ: ಈ ದೇವಸ್ಥಾನವನ್ನು ಸಂಪರ್ಕಿಸುವ ಸುಮಾರು 3 ಕಿ.ಮೀ. ದೂರದ ಮಣ್ಣಿನ ರಸ್ತೆಯು ನಿತ್ಯ ಸಂಚರಿಸುವ ಹತ್ತಾರು ಕೆಂಪು ಕಲ್ಲು ಸಾಗಾಟದ ವಾಹನಗಳಿಂದಾಗಿ ಸಂಪೂರ್ಣ ಧೂಳುಮಯವಾಗಿದೆ.

ಇದನ್ನೂ ಓದಿ : ಕಾರ್ಕಳ ಉತ್ಸವಕ್ಕೆ ಇಂದು ಚಾಲನೆ, ಸಾಂಸ್ಕೃತಿಕ ಲೋಕ ಅನಾವರಣ

ಅನುಮತಿ ಕೊಟ್ಟದ್ದು ಹೇಗೆ
ರಸ್ತೆ ಅಭಿವೃದ್ಧಿಯ ಜತೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ, ಮೀಸಲು ಅರಣ್ಯ ಪ್ರದೇಶ ನಿಯಮ ಎನ್ನುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಅಡ್ಡಗಾಲು ಹಾಕುತ್ತಾರೆ. ನಿಯಮದ ಪ್ರಕಾರ ಮೀಸಲು ಅರಣ್ಯದ 10 ಕಿ.ಮೀ. ದೂರದವರೆಗೆ ಗಣಿಗಾರಿಕೆಗೆ ಅನುಮತಿಯಿಲ್ಲ. ಹಾಗಾದರೆ ಇಲ್ಲಿ ಅದು ಹೇಗೆ ಕೆಂಪು ಕಲ್ಲು ಗಣಿಗಾರಿಕೆಗೆ ಅನುಮತಿ ಸಿಕ್ಕಿದೆ. ತತ್‌ಕ್ಷಣ ಗಣಿಗಾರಿಕೆ ನಿಲ್ಲಿಸಿ, ದೇವಸ್ಥಾನವನ್ನು ಕಾಪಾಡಿ ಎನ್ನುವುದು ಊರವರ ಆಗ್ರಹವಾಗಿದೆ.

ದೇವಸ್ಥಾನಕ್ಕೆ ಹೇಗೆ ತೊಂದರೆ?
ಇಲ್ಲಿ ಈಶ್ವರ ಲಿಂಗಕ್ಕೆ ಕಲ್ಲಿನಿಂದ ನಿರ್ಮಿತವಾದ ಗುಹೆಯೇ ಆಲಯ. ಗುಹೆಯೊಳಗೆ ಸುಮಾರು 20 ಅಡಿಗಳಷ್ಟು ವಿಶಾಲ ಜಾಗದಲ್ಲಿ ಎಲ್ಲ ಕಾಲದಲ್ಲಿಯೂ ಮೊಣಕಾಲಿನಷ್ಟು ಪನ್ನೀರಿನಂತಹ ನೀರು ಇಲ್ಲಿ ಹರಿಯುತ್ತಿರುತ್ತದೆ. ಇಲ್ಲಿನ ಹಿರಿಯರೊಬ್ಬರು ಹೇಳುವ ಪ್ರಕಾರ ಇದು ಇಡೀ ಮೂಡಗಲ್ಲು ಪರಿಸರದಾದ್ಯಂತ ಏಕ ಶಿಲೆಯಾಗಿದೆ. ಸುಮಾರು ದೂರದವರೆಗೆ ಈ ಕಲ್ಲು ವ್ಯಾಪಿಸಿದೆ. ಈಗ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶದಲ್ಲಿ 30-40 ಅಡಿ ಆಳದವರೆಗೆ ಹೊಂಡ ಮಾಡಿದರೆ, ದೇವಸ್ಥಾನದಲ್ಲಿರುವ ನೀರು ಬತ್ತುವ ಸಾಧ್ಯತೆಗಳು ಇವೆ. ಅಲ್ಲಿ ಆಳವಾದಷ್ಟು, ದೇಗುಲದ ನೀರಿನ ಮಟ್ಟ ಆಳಕ್ಕೆ ಇಳಿದು, ಮುಂದೊಂದು ದಿನ ನೀರು ಸಂಪೂರ್ಣ ಬತ್ತಿ ಹೋಗುವ ಅಪಾಯವೂ ಇದೆ ಎನ್ನುವ ಆತಂಕ ಭಕ್ತರದು.

ವರದಿ ತರಿಸಿಕೊಂಡು ಕ್ರಮ
ಮೂಡುಗಲ್ಲು ಗಣಿಗಾರಿಕೆ ಬಗ್ಗೆ ಮಾಹಿತಿ ಬಂದಿದೆ. ಈಗಾಗಲೇ ಸಂಬಂಧಪಟ್ಟ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆಗೆ ಕಳುಹಿಸಲಾಗಿದೆ. ಅವರಿಂದ ವರದಿ ತರಿಸಿಕೊಂಡು, ಸೂಕ್ತ ಕ್ರಮಕೈಗೊಳ್ಳಲಾಗುವುದು. ಅಲ್ಲಿ ಕೃಷಿ ಉದ್ದೇಶಕ್ಕೆ ಷರತ್ತುಗಳನ್ವಯ ಖಾಸಗಿ ಜಾಗದಲ್ಲಿ ಮಾತ್ರ ಅನುಮತಿ ನೀಡಲಾಗಿದೆ. ದೇವಸ್ಥಾನಕ್ಕೆ ತೊಂದರೆಯಾಗುವ ಬಗ್ಗೆ ಪರಿಶೀಲನೆ ನಡೆಸಿ, ಅಗತ್ಯ ಕ್ರಮಕೈಗೊಳ್ಳಲಾಗುವುದು.
– ಕೂರ್ಮಾ ರಾವ್‌ ಎಂ., ಉಡುಪಿ ಜಿಲ್ಲಾಧಿಕಾರಿ

– ಪ್ರಶಾಂತ್ ಪಾದೆ

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.