ರೆಗ್ಯುಲರ್‌ ಸಂಚಾರ ಮುಂದಿನ ತಿಂಗಳು?

ಪ್ರಯಾಣಿಕರ ಕೊರತೆ: ಬಸ್‌ನಲ್ಲಿ ಸಾಮಾಜಿಕ ಅಂತರ

Team Udayavani, May 17, 2020, 6:00 AM IST

ರೆಗ್ಯುಲರ್‌ ಸಂಚಾರ ಮುಂದಿನ ತಿಂಗಳು?

ಉಡುಪಿ: ಜಿಲ್ಲಾಡಳಿತ ಬಸ್ಸುಗಳನ್ನು ಓಡಿಸಲು ಅನುವು ಮಾಡಿಕೊಟ್ಟರೂ ಪ್ರಯಾಣಿಕರ ಕೊರತೆ ಇರುವುದರಿಂದ ಆರಂಭಗೊಂಡ ಬೆರಳೆಣಿಕೆ ಬಸ್ಸುಗಳು ಸಂಚರಿಸುತ್ತಿದ್ದು ಹೊಸ ಬಸ್ಸುಗಳು ರಸ್ತೆಗಿಳಿದಿಲ್ಲ.

ಕೆಎಸ್ಸಾರ್ಟಿಸಿ ಬಸ್ಸುಗಳು ಉಡುಪಿ- ಕುಂದಾಪುರ, ಕುಂದಾಪುರ-ಬೈಂದೂರು, ಉಡುಪಿ- ಜಿಲ್ಲಾಧಿಕಾರಿ ಕಚೇರಿ ನಡುವೆ ಸಂಚರಿಸುತ್ತಿವೆ. ಇದೀಗ ಉಡುಪಿ- ಹೆಜಮಾಡಿ ನಡುವೆ ಓಡಾಡಿವೆ.

ಪ್ರಯಾಣಿಕರಿಲ್ಲದಿದ್ದರೆ ಬಸ್ಸುಗಳನ್ನು ಓಡಿಸಿಯೂ ಪ್ರಯೋಜನವಿಲ್ಲ ಎಂದು ಕೆಎಸ್ಸಾರ್ಟಿಸಿ ಉಡುಪಿ ಡಿಪೋ ಮೆನೇಜರ್‌ ಉದಯಕುಮಾರ್‌ ಶೆಟ್ಟಿ ತಿಳಿಸಿದರು.

ಕರಾವಳಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್‌ ಮಾಲಕತ್ವದ ಭಾರತೀ ಮೋಟಾರ್ ಉಡುಪಿ- ಕುಂದಾಪುರ ನಡುವೆ ಮಾತ್ರ ಸಂಚರಿಸುತ್ತಿವೆ. “ಕೊಲ್ಲೂರಿಗೆ ನಾವು ಬಸ್ಸುಗಳನ್ನು ಓಡಿಸಬಹುದಾದರೂ ಕೊಲ್ಲೂರು ದೇವಸ್ಥಾನ ತೆರೆಯದಿದ್ದರೆ ಅಲ್ಲಿಗೆ ಯಾರೂ ಹೋಗುವುದಿಲ್ಲ. ಹೀಗಾಗಿ ನಾವು ಅಲ್ಲಿಗೆ ಬಸ್‌ಗಳನ್ನು ಓಡಿಸುತ್ತಿಲ್ಲ. ಇನ್ನು ಉಡುಪಿ-ಕುಂದಾಪುರ ನಡುವೆಯೂ ನಿರೀಕ್ಷಿತ ಪ್ರಮಾಣದಲ್ಲಿ ಪ್ರಯಾಣಿಕರಿಲ್ಲ’ ಎಂದು ರಾಘವೇಂದ್ರ ಭಟ್‌ ತಿಳಿಸಿದರು.

ಕೋವಿಡ್ 19 ಹಿನ್ನೆಲೆಯಲ್ಲಿ ಮಾಸ್ಕ್ ಧಾರಣೆ ಕಡ್ಡಾಯವಾಗಿದೆ. ಸ್ಯಾನಿಟೈಸರ್‌ ಬಳಸುತ್ತಿದ್ದಾರೆ. ಪ್ರಯಾಣಿಕರು ಕಡಿಮೆ ಇರುವುದರಿಂದ ಸಹಜವಾಗಿಯೇ ಸಾಮಾಜಿಕ ಅಂತರ ಕಾಪಾಡಲಾಗುತ್ತಿದೆ.

ಬಸ್ಸುಗಳನ್ನು ರಸ್ತೆಗಿಳಿಸಲು ಬಸ್‌ ಮಾಲಕರು ಹಿಂದೇಟು ಹಾಕಲು ಇನ್ನೊಂದು ಕಾರಣ ಹಣಕಾಸು ಸಂಸ್ಥೆಗಳು ಕಂತುಗಳನ್ನು ಕಟ್ಟಲು ಒತ್ತಾಯಿಸುವುದು.

ಬಸ್ಸುಗಳು ನಷ್ಟದಲ್ಲಿ ಓಡುತ್ತಿರುವುದರಿಂದ ಈ ಮಾಸಾಂತ್ಯದ ವರೆಗೂ ಪರಿಸ್ಥಿತಿ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ.

“ಬೇಡಿಕೆ ಈಡೇರಿಸಲು ಮೀನಮೇಷ’
ಸರಂಡರ್‌ ಮಾಡದ ಬಸ್ಸುಗಳಿಗೆ ಎಪ್ರಿಲ್‌, ಮೇ, ಜೂನ್‌ ತಿಂಗಳ ತೆರಿಗೆಯನ್ನು ರಿಯಾಯಿತಿ ಮಾಡಲು ಕೋರಿದ್ದೇವೆ. ಸರಂಡರ್‌ ಮಾಡದ ಇರುವುದು ಕೇವಲ ಶೇ.15ರಷ್ಟು ಬಸ್ಸುಗಳು. ಒಡಿಶಾ, ಪಂಜಾಬ್‌ನಲ್ಲಿ ಎರಡು ಪಟ್ಟು ದರ ಹೆಚ್ಚಳ ಮಾಡಲು ಅನುಮತಿ ಕೊಟ್ಟಿದ್ದಾರೆ. ಜನರನ್ನು ಕಡಿಮೆ ಸಂಖ್ಯೆಯಲ್ಲಿ ಕರೆದೊಯ್ಯಬೇಕಾದರೆ ಈಗಿನ ದರದಲ್ಲಿ ಸಾಧ್ಯವಿಲ್ಲ. ನಾವು ಒಂದೂವರೆ ಪಟ್ಟು ಹೆಚ್ಚಿಗೆ ಮಾಡಲು ಕೇಳಿದ್ದೇವೆ. ಜುಲೈ, ಆಗಸ್ಟ್‌, ಸೆಪ್ಟಂಬರ್‌ ತಿಂಗಳ ತೆರಿಗೆಯನ್ನು ವರ್ಷಾಂತ್ಯಕ್ಕೆ ಪಾವತಿಸುವುದಾಗಿ ತಿಳಿಸಿದ್ದೇವೆ.

ಎರಡು ತಿಂಗಳ ವಿಮೆ ಸೌಲಭ್ಯವನ್ನು ವಿಸ್ತರಿಸಲು ಕೇಂದ್ರ ಸರಕಾರಕ್ಕೆ ಕೇಳಿದ್ದೇವೆ. ಇವೆಲ್ಲದಕ್ಕೂ ತಾತ್ವಿಕ ಒಪ್ಪಿಗೆ ದೊರಕಿದೆಯೇ ವಿನಾ ಆದೇಶವಿನ್ನೂ ಬಂದಿಲ್ಲ. ಪ್ರಾಯಃ ಮುಂದಿನ ತಿಂಗಳು ಬಸ್ಸುಗಳನ್ನು ಆರಂಭಿಸಬಹುದು ಎಂಬ ಅಭಿಪ್ರಾಯ ಉಡುಪಿ ಸಿಟಿ ಬಸ್‌ ಮಾಲಕರ ಸಂಘದ ಅಧ್ಯಕ್ಷ ಕೆ. ಸುರೇಶ ನಾಯಕ್‌ ಅವರದು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.