ನಿಯಂತ್ರಣ ಸರಿ, ದುರ್ಬಳಕೆ ಸಲ್ಲದು


Team Udayavani, Feb 26, 2021, 6:15 AM IST

ನಿಯಂತ್ರಣ ಸರಿ, ದುರ್ಬಳಕೆ ಸಲ್ಲದು

ಸಾಮಾಜಿಕ ಜಾಲತಾಣಗಳು, ನ್ಯೂಸ್‌ ವೆಬ್‌ಸೈಟ್ಗಳು, ಒಟಿಟಿ ವೇದಿಕೆಗಳ ಮೇಲೆ ನಿಯಂತ್ರಣ ಹೇರುವ ಸಲುವಾಗಿ ಕೇಂದ್ರ ಸರಕಾರ‌ ಕರಡು ನಿಯಮಗಳನ್ನು ಪ್ರಕಟಿಸಿದ್ದು, ಇದು ಚರ್ಚೆಗೂ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳು, ನ್ಯೂಸ್‌ ವೆಬ್‌ ಸೈಟ್‌ಗಳು ಮತ್ತು ಒಟಿಟಿಗಳ ಮೇಲೆ ನಿಯಂತ್ರಣ ಹೇರುವುದರಿಂದ, ಜನರ ಮೂಲಭೂತ ಹಕ್ಕನ್ನೇ ಕಸಿದುಕೊಂಡಂತೆ ಆಗುವುದಿಲ್ಲವೇ ಎಂಬ ಪ್ರಶ್ನೆಗಳೂ ಎದುರಾಗಿವೆ. ಆದರೆ ಇದಕ್ಕೆ ಕೇಂದ್ರ ಸರಕಾರವೂ ಸಮರ್ಥನೆ ನೀಡಿದ್ದು, ಮೂಲಭೂತ ಹಕ್ಕು ಎಂಬುದು ಎಲ್ಲರಿಗೂ ಅನ್ವಯವಾಗಲಿದ್ದು, ಒಬ್ಬರ ಸ್ವಾತಂತ್ರ್ಯ ಬಲಿಕೊಟ್ಟು, ಮತ್ತೂಬ್ಬರ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಸಾಧ್ಯವಿಲ್ಲ ಎಂಬರ್ಥದಲ್ಲಿ ಮಾತನಾಡಿದೆ.

ಹೌದು ಇದುವರೆಗೆ ದೇಶದಲ್ಲಿ ಸಾಮಾಜಿಕ ಜಾಲತಾಣಗಳು, ನ್ಯೂಸ್‌ ವೆಬ್‌ಸೈಟ್ಗಳು ಮತ್ತು ಒಟಿಟಿ ವೇದಿಕೆಗಳನ್ನು ನಿಯಂತ್ರಣ ಇಡುವ ಯಾವುದೇ ಮಾನದಂಡಗಳಿರಲಿಲ್ಲ. ಇದು ಯಾವ ಮಟ್ಟದಲ್ಲಿ ಅಂದರೆ ವೈಯಕ್ತಿಕ ಸ್ವಾತಂತ್ರ್ಯವಿದ್ದು, ನಾನು ಏನು ಬೇಕಾದರೂ ಮಾಡುತ್ತೇನೆ ಎಂಬರ್ಥದಲ್ಲಿ ಸೋಶಿಯಲ್‌ ಮೀಡಿಯಾಗಳಲ್ಲಿ ವ್ಯಕ್ತಿಗಳ ವೈಯಕ್ತಿಕ ಸ್ವಾತಂತ್ರ್ಯ ಹರಣವೂ ಆಗುತ್ತಿತ್ತು.

ಈಗ ತಂದಿರುವ ಹೊಸ ನಿಯಮಗಳು ಈ ವೈಯಕ್ತಿಕ ಸ್ವಾತಂತ್ರ್ಯ ಹರಣಕ್ಕೆ ಕೊಕ್ಕೆ ಹಾಕಲಿದೆ. ಬೇರೊಬ್ಬ ಹಾಕಿದ ಪೋಸ್ಟ್‌, ಮತ್ತೂಬ್ಬರ ವ್ಯಕ್ತಿಗತ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಅಥವಾ ಆತನ ಚಾರಿತ್ರ್ಯಹರಣವಾಗುತ್ತಿದೆ ಎಂದಾದಲ್ಲಿ, ಈ ಬಗ್ಗೆ ದೂರು ನೀಡಿದರೆ 36 ಗಂಟೆಗಳ ಒಳಗೆ ಆ ಪೋಸ್ಟ್‌ ಅನ್ನು ತೆಗೆದುಹಾಕಬೇಕು. ಇದು ಸರಿಯಾದ ವಿಚಾರವೇ. ಏಕೆಂದರೆ ಎಷ್ಟೋ ಬಾರಿ ಅಪ್ರಾಪ್ತ ವಯಸ್ಸಿನ ಮಕ್ಕಳು ಈ ಸಾಮಾಜಿಕ ಜಾಲತಾಣದ ಗೀಳಿಗೆ ಬಿದ್ದು, ತಮ್ಮ ಖಾಸಗಿ ಮಾಹಿತಿಯನ್ನು ಬೇರೊಬ್ಬರ ಜತೆ ಹಂಚಿಕೊಂಡು, ಬಳಿಕ ಅವು ಇದೇ ಸಾಮಾಜಿಕ ಜಾಲತಾಣಗಳ ಮೂಲಕ ಜಗಜ್ಜಾಹೀರಾಗಿ ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳೂ ಇವೆ. ಆದರೆ ಯಾವ ಪೋಸ್ಟ್ ಗಳನ್ನು ತೆಗೆದುಹಾಕಬೇಕು, ಯಾವುದನ್ನು ತೆಗೆದುಹಾಕಬಾರದು ಎಂಬುದು ಜಿಜ್ಞಾಸೆಯಲ್ಲಿ ಉಳಿದಿದೆ. ವೈಯಕ್ತಿಕ ಸ್ವಾತಂತ್ರ್ಯ ಹರಣ ಸರಿ, ಆದರೆ ಸರಕಾರಗಳನ್ನು ಟೀಕಿಸಿದರೆ ಅಂಥ ಪೋಸ್ಟ್‌ಗಳನ್ನು ತೆಗೆದುಹಾಕಬೇಕಾ? ಜನರಿಗೆ ಟೀಕಿಸುವ ಸ್ವಾತಂತ್ರ್ಯವೂ ಇಲ್ಲವೇ ಎಂಬ ಪ್ರಶ್ನೆ ಉದ್ಭವಿಸುತ್ತವೆ. ಇದು ಇತ್ತೀಚಿನ ಟ್ವಿಟರ್‌ ಮತ್ತು ಕೇಂದ್ರ ಸರಕಾರದ ನಡುವಿನ ಸಂಘರ್ಷದಲ್ಲಿ ಬಹಿರಂಗವಾಗಿದೆ.

ಇನ್ನು ಒಟಿಟಿಗಳ ಮೇಲೆ ನಿಯಂತ್ರಣ ಮತ್ತು ಯಾವ ಕಂಟೆಂಟ್‌ ಅನ್ನು ಯಾವ ವಯಸ್ಸಿನವರು ನೋಡಬಹುದು ಎಂಬ ವರ್ಗೀಕರಣ ಉತ್ತಮವಾದದ್ದೇ. ಆದರೆ ಸರಕಾರ‌ ನಿಯಮ ಮಾಡಿದರೂ ಇದರ ಪಾಲನೆ ಮೊಬೈಲ್‌ ಬಳಕೆ ಮಾಡುವವರದ್ದೇ ಆಗಿದೆ. ಒಂದು ವೇಳೆ ಮಕ್ಕಳ ಕೈಗೆ ಮೊಬೈಲ್‌ ಕೊಡುವುದೇ ಆದರೆ ಪೋಷಕರೇ ಪೆರೆಂಟಲ್‌ ಕಂಟ್ರೋಲ್‌ ಅಳವಡಿಸಬೇಕು. ಏಕೆಂದರೆ ಒಟಿಟಿ ವೇದಿಕೆ ತೆರೆಯುವ ಪ್ರತಿಯೊಬ್ಬರೂ ತನ್ನ ವಯಸ್ಸು 18 ಮೀರಿದೆ ಎಂದೇ ಹೇಳಿಕೊಳ್ಳುತ್ತಾನೆ.

ಇದರ ಜತೆಗೆ ನ್ಯೂಸ್‌ ವೆಬ್‌ಸೈಟ್‌ಗಳೂ ಅಷ್ಟೇ. ಸುಳ್ಳು ಸುದ್ದಿ ಹಬ್ಬಿಸುವ ವೆಬ್ಸೈಟ್‌ಗಳ ಮೇಲೆ ಗಮನವೇನೋ ಸರಿ, ಆದರೆ ನಿಜಕ್ಕೂ ಸರಿಯಾದ ಸುದ್ದಿ ನೀಡುವವನಿಗೆ ಇದರಿಂದ ತೊಂದರೆಯಾಗಬಾರದು ಅಷ್ಟೇ. ಜತೆಗೆ ವೆಬ್‌ಸೈಟ್‌ಗಳ ನೋಂದಣಿ ಮಾಡಿಸಿಕೊಳ್ಳಬೇಕು ಎಂಬ ವಿಚಾರ ಸಣ್ಣ ಪುಟ್ಟ ವೆಬ್‌ಸೈಟ್ಗಳ ಮಾಲಕರಿಗೆ ತೊಂದರೆಯಾಗಬಹುದು. ಈ ನಿಟ್ಟಿನಲ್ಲಿ ಯೋಚಿಸಬೇಕು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.