ಜಾತಿ ಗಣತಿ ಬಿಡುಗಡೆ ಮಾಡಿದರೆ ಕಾಂಗ್ರೆಸ್ಗೆ ಹಿನ್ನಡೆ: ಶಾಮನೂರು ಶಿವಶಂಕರಪ್ಪ ಎಚ್ಚರಿಕೆ
Team Udayavani, Nov 25, 2023, 11:14 PM IST
ಬೆಂಗಳೂರು: ಒಂದು ವೇಳೆ ಜಾತಿ ಜನಗಣತಿ ವರದಿಯನ್ನು ಸ್ವೀಕಾರ ಮತ್ತು ಬಿಡುಗಡೆ ಮಾಡಿದರೆ, ಈ ಹಿಂದೆ ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಾದಂತೆಯೇ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುವುದು ಶತಃಸಿದ್ಧ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಎಚ್ಚರಿಸಿದರು.
ಜಾತಿ ಗಣತಿ ವರದಿ ಲೋಪದಿಂದ ಕೂಡಿದೆ ಎಂಬ ಕಾರಣಕ್ಕಾಗಿಯೇ ನಾವು ವಿರೋಧ ಮಾಡುತ್ತಿದ್ದೇವೆ. ವರದಿಯಲ್ಲಿ ಏನಿದೆ ಎಂಬುದು ಈಗಾಗಲೇ ಸೋರಿಕೆಯಾಗಿದೆ. ಬಹುತೇಕರು ಲಿಂಗಾಯತ- ವೀರಶೈವ ಅಂತ ಬರೆದುಕೊಂಡಿಲ್ಲ. ಇಂತಹ ಅನೇಕ ಲೋಪದೋಷಗಳು ಎದ್ದು ಕಾಣುತ್ತಿವೆ. ಹಾಗಾಗಿ, ಸಮೀಕ್ಷೆಯ ವರದಿಗೆ ಎಲ್ಲರ ವಿರೋಧವಿದೆ. ವಿರೋಧದ ನಡುವೆಯೂ ಮುಂದುವರಿದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗುವುದು ಖಚಿತ ಎಂದು ಹೇಳಿದರು.
ಒಕ್ಕಲಿಗರ ಸಮುದಾಯದ ರೀತಿಯೇ ಸಹಿ ಮಾಡಿ ವಿರೋಧ ವ್ಯಕ್ತಪಡಿಸುತ್ತೇವೆ. ಬಿಜೆಪಿ, ಜೆಡಿಎಸ್ ಕೂಡ ವಿರೋಧಿಸುತ್ತಿವೆ. ಈಗಾಗಲೇ ಮೌಖೀಕವಾಗಿ ಮುಖ್ಯಮಂತ್ರಿ ಬಳಿ ಚರ್ಚಿಸಲಾಗಿದೆ. “ನೋಡೋಣ ತಡಿಯಪ್ಪ’ ಅಂತ ಮುಖ್ಯಮಂತ್ರಿ ಹೇಳಿದ್ದಾರೆ ಎಂದರು.
ಗೊಂದಲದ ಹೇಳಿಕೆಗಳು
ಅಷ್ಟಕ್ಕೂ ಜಾತಿ ಜನಗಣತಿ ವರದಿ ಸರಿ ಇಲ್ಲ. ವೈಜ್ಞಾನಿಕವಾಗಿ ಸಮೀಕ್ಷೆ ಆಗಬೇಕು ಎಂದು ಆಗ್ರಹಿಸಿದ ಶಾಮನೂರು, ಮೂಲ ವರದಿ ನಾಪತ್ತೆ ಆಗಿದೆ. ನಾನು ಕೊಟ್ಟಿದ್ದೇನೆ ಅಂತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಹೇಳುತ್ತಿದ್ದಾರೆ. ಈ ನಡುವೆ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆ ಆಗಿದೆ. ಇದು ನೋಡೋಕೆ ಮಜಾ ಇದೆ. ಇಷ್ಟೆಲ್ಲ ಗೊಂದಲಗಳ ನಡುವೆ ಸರಕಾರ ಏನು ಮಾಡುತ್ತದೆ ಎಂಬುದನ್ನು ಕಾದುನೋಡಬೇಕಿದೆ. ಅವರು ತೆಗೆದುಕೊಂಡ ಬಳಿಕ ಏನು ಮಾಡುವುದು ಅಂತ ತೀರ್ಮಾನ ಮಾಡುತ್ತೇವೆ’ ಎಂದರು.
ಗಣತಿ ಮಾಡಿ, ಮನೆ ಮನೆಗೆ ಹೋಗಿ ಸಮಿಕ್ಷೆ ಮಾಡಲಿ. ಎಲ್ಲೋ ಕುಳಿತು ಗಣತಿ ಮಾಡುವುದಲ್ಲ ಎಂದು ತೀಕ್ಷ್ಣವಾಗಿ ಹೇಳಿದ ಅವರು, ಒಕ್ಕಲಿಗ ಸಮುದಾಯದ ಮುಖಂಡರು ಮುಖ್ಯಮಂತ್ರಿಯನ್ನು ಭೇಟಿಯಾದಂತೆ ನಾವೂ ಭೇಟಿ ಮಾಡಿ ವರದಿ ಸ್ವೀಕರಿಸದಂತೆ ಮನವಿ ಸಲ್ಲಿಸುತ್ತೇವೆ.
ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರು ಸಂಪುಟದಿಂದ ಹೊರಗಿರುವ ಕಾರಣಕ್ಕೆ ಏನೇನೊ ಮಾತನಾಡುತ್ತಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಅಂತ ಹೋದವರೆಲ್ಲ ಸೋತರು. ಬರೀ ಲಿಂಗಾಯತ ಅಂತ ಹೋದವರೆಲ್ಲ ಮಣ್ಣು ಮುಕ್ಕಿದರು ಎಂದು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ