ಯಕ್ಷಗಾನ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ: ಜಿ. ಎಲ್. ಹೆಗಡೆ

ಅಣ್ಣ ಮಹಾಬಲ ಕೃತಿ ಬಿಡುಗಡೆ

Team Udayavani, Apr 9, 2022, 6:46 PM IST

1-wqwewqe

ಪ್ರಥಮ ಪ್ರತಿಯನ್ನು ಎಂ.ಎ.ಹೆಗಡೆ ಅವರ ಶ್ರೀಮತಿ ಅವರಿಗೆ ನೀಡಿದರು

ಶಿರಸಿ:  ಯಕ್ಷಗಾನ ಸಾಹಿತ್ಯ ಸಮ್ಮೇಳನಕ್ಕೆ ಹಣ  ಬಿಡುಗಡೆ ಆಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಕುಮಟಾ ಹೇಳಿದರು.

ಶನಿವಾರ ನಗರದ ರೋಟರಿ ಸೆಂಟರನಲ್ಲಿ ರಾಜಶೇಖರ ಜೋಗಿನ್ಮನೆ ಅವರು ಪ್ರೋ.ಎಂ.ಎ.ಹೆಗಡೆ ಅವರ ಕುರಿತು ಬರೆದ ”ಅಣ್ಣ ಮಹಾಬಲ” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕನ್ನಡ‌ ಉಳಿಯಬೇಕು ಎಂದರೆ ಯಕ್ಷಗಾನ ಉಳಿಸಬೇಕು. ಅದಕ್ಕಾಗಿ ಯಕ್ಷಗಾನ ಸಾಹಿತ್ಯ ಸಮ್ಮೇಳನ ಆಗಬೇಕು. ಯಕ್ಷಗಾನ ಅನ್ನಪೂರ್ಣೆಶ್ವರಿ. ಸಾವಿರಾರು ಜನರಿಗೆ ಅನ್ನ ಕೊಡುತ್ತದೆ. ನಾಡಿನ ಮುದ್ರೆ ಯಕ್ಷಗಾನಕ್ಕೆ ಬೀಳಬೇಕು. ಅಂಥ ಕೆಲಸ‌ ಮಾಡಬೇಕು ಎಂದು ಹೊರಟಿದ್ದೇವೆ ಎಂದ ಅವರು, ಸರಕಾರ‌ ಯಕ್ಷಗಾನ ಸಮ್ಮೇಳನ ಆರೆಂಟು ತಿಂಗಳಲ್ಲಿ ಆಗಲಿದೆ ಎಂದರು.

ಇದನ್ನೂ ಓದಿ : ದುರ್ಗಪ್ಪ ಗುಡಿಗಾರ ಓರ್ವ ಅಪ್ರತಿಮ ಕಲಾಕಾರ: ಜಿ.ಎಲ್. ಹೆಗಡೆ

ಅಕಾಡೆಮಿಯ ಅಧ್ಯಕ್ಷರಾಗಿ ಎಂ.ಎ.ಹೆಗಡೆ ಅವರು ಮಾಡಿದ ಸಾಧನೆ ದೊಡ್ಡದು. ಅವರು‌ ಕುಳಿತ ಖುರ್ಚಿಯಲ್ಲಿ ಕುಳಿತು ಕೆಲಸ ಮಾಡುವದೂ ಸುಲಭದ್ದಲ್ಲ. ಕೇವಲ ಅಕಾಡೆಮಿ ಅಧ್ಯಕ್ಷರು ಎಂದು ಗುರುತಿಸದೇ ಅಕಾಡೆಮಿ‌ ಕೂಡ ಇದೆ ಎಂದು ತೋರಿದ್ದಾರೆ.

ಸೆಲ್ಕೋ ಇಂಡಿಯಾದ ಸಿಇಓ ಮೋಹನ ಭಾಸ್ಕರ ಹೆಗಡೆ, ಒಬ್ಬ ಸಾಧಕನ ಕುರಿತು‌ ಕುಟುಂಬ ಹಾಗೂ ಸಮಾಜ‌ ಒಟ್ಟೊಟ್ಟಿಗೆ ಬರುವದು ಅಪರೂಪ. ಆದರೆ, ಎಂ.ಎ.ಹೆಗಡೆ ಅವರ ಕುರಿತು ಎರಡೂ ಒಟ್ಟೊಟ್ಟಿಗೆ ಬಂದಿದೆ. ಪ್ರಖರತೆ, ನಿಖರತೆ ಒಳಗೊಂಡವರು. ಹರಿತ ಹಾಗೂ ಹರಿತ ಆಗುತ್ತಲೂ ಇರಬೇಕು ಎಂದರು.

ಕೃತಿ ಪರಿಚಯಿಸಿದ ಸುಬ್ರಾಯ‌ ಮತ್ತೀಹಳ್ಳಿ, ಅವರ ಪದ್ಯದ ಒಳಗೆ ಸಂಸ್ಕೃತಿ, ಆಧ್ಯಾತ್ಮಿಕತೆ ಸೇರಿ ವಿಶಿಷ್ಟ ಸ್ವಾದ ಪಡೆದಿದೆ. ಹೊಸ ಕಾಲದ ಸವಾಲುಗಳನ್ನೂ ಪುರಣದ ಅರ್ಥದಲ್ಲಿ ಶೋಧಿಸಿದವರು‌. ಅಂಥ ಸಾಧಕ ಎಂ.ಎ.ಹೆಗಡೆ ಅವರ‌ ತಾಳಮದ್ದಲೆ,ಸಂಸ್ಕೃತ, ಯಕ್ಷಗಾನ ಸೂಕ್ಷ್ಮತೆ ‌ಮೆಲಕು ಹಾಕಿಸಿಕೊಳ್ಳಬೇಕಾಗಿದೆ ಎಂದರು.

ಕೃತಿಕಾರ ರಾಜಶೇಖರ ಜೋಗಿನ್ಮನೆ, ಎಂ.ಎ.ಹೆಗಡೆ ಅಥವಾ ಅವರಂಥ ವಿದ್ವಾಂಸರ ಕುರಿತು ದಾಖಲಿಸಬೇಕಾದ ಅನಿವಾರ್ಯ ಆಗಿದೆ ಎಂದರು.
ಅಧ್ಯಕ್ಷತೆವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಜಿ.ಸುಬ್ರಾಯ ಭಟ್ಟ ಬಕ್ಕಳ ಮಾತನಾಡಿದರು.
ಕೆ.ಎನ್.ಹೊಸಮನಿ ಸ್ವಾಗತಿಸಿದರು. ನಾಗರಾಜ್ ಜೋಶಿ ನಿರ್ವಹಿಸಿದರು.

ನಮ್ಮ‌ ನೆಲದ‌ ಸಾಧಕರ‌ ಕುರಿತು ಪರಿಚಯಿಸುವ ಕೆಲಸ ಆಗುತ್ತಿಲ್ಲ. ಅಂಥ ಕಾರ್ಯ ಆಗಬೇಕು. ಇಂಥ ಬೇಲಿ‌ ಮುರಿದು ಮುಂದಿನ ತಲೆಮಾರಿಗೆ ಕೊಡುಗೆ ಕೊಡಬೇಕು.
– ಮೋಹನ ಭಾಸ್ಕರ ಹೆಗಡೆ‌, ಸಿಇಓ ಸೆಲ್ಕೋ ಇಂಡಿಯಾ

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.