Telangana: ವಿಮೋಚನ ದಿನಾಚರಣೆಗೆ ಕೆಲವು ರಾಜಕೀಯ ಪಕ್ಷಗಳ ಹಿಂದೇಟು: ಅಮಿತ್ ಶಾ
Team Udayavani, Sep 17, 2023, 11:27 PM IST
ಹೈದರಾಬಾದ್: ತೆಲಂಗಾಣ ರಾಜ್ಯ ಸ್ಥಾಪನೆಯಾದ ನಂತರವೂ ಕೂಡ ರಾಜಕೀಯ ಪಕ್ಷಗಳು ಮತ ಬ್ಯಾಂಕ್ ರಾಜಕೀಯಕ್ಕಾಗಿ “ಹೈದರಾಬಾದ್ ವಿಮೋಚನಾ ದಿನ’ ಆಚರಿಸಲು ಹಿಂಜರಿಯುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರಿದರು.
“ಹೈದರಾಬಾದ್ ವಿಮೋಚನಾ ದಿನ’ ಅಂಗವಾಗಿ ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರ ಧ್ವಜ ಹಾರಿಸಿ ಹಾಗೂ ಗೌರವ ವಂದನೆ ಸ್ವೀಕರಿಸಿದ ನಂತರ ಅವರು ಮಾತನಾಡಿದರು.
ಇಂದಿನ ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳು ಸೇರಿದ್ದ ಅಂದಿನ ಹೈದರಾಬಾದ್ ರಾಜ್ಯದಲ್ಲಿ ನಿಜಾಮರ ಶಸ್ತ್ರಸಜ್ಜಿತ ಬೆಂಬಲಿಗರಾದ ರಜಾಕರು ನಡೆಸಿದ್ದ ದೌರ್ಜನ್ಯಗಳನ್ನು ಇದೇ ವೇಳೆ ಅಮಿತ್ ಶಾ ನೆನಪಿಸಿದರು.
ಅಭಿವೃದ್ಧಿಗೆ ತೆಲಂಗಾಣ ಮಾದರಿ: ಸಿಎಂ ಕೆಸಿಆರ್
ಹೈದರಾಬಾದ್ ರಾಜ್ಯವು ಭಾರತದ ಒಕ್ಕೂಟಕ್ಕೆ ಸೇರ್ಪಡೆ ಯಾದ ದಿನವನ್ನು ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ ಸರಕಾರವು “ರಾಷ್ಟ್ರೀಯ ಸಮಗ್ರತೆ ದಿನ’ ಎಂದು ಆಚರಿಸಿದೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್ನಲ್ಲಿ ರಾಷ್ಟ್ರ ಧ್ವಜಾ ರೋಹಣ ನೆರವೇರಿಸಿದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಮಾತನಾಡಿ, ತೆಲಂ ಗಾಣವು ಅಭಿವೃದ್ಧಿಯಲ್ಲಿ ದೇಶಕ್ಕೇ ಮಾದರಿ ಯಾಗಿದೆ. ನಮ್ಮ ಸರಕಾರದ ಯೋಜನೆಯ ಲಾಭ ಪಡೆಯದ ಒಂದೇ ಒಂದು ಕುಟುಂಬವೂ ರಾಜ್ಯದಲ್ಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!