Coastal: ಕಾರ್ಲ್ಯಾಂಡ್ ಯೋಜನೆ ಅನುದಾನಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಆಗ್ರಹ
Team Udayavani, Feb 14, 2024, 10:56 PM IST
ಬೆಂಗಳೂರು: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕಾಪು, ಕೈಪುಂಜಾಲು, ಉಳಿಯಾರಗೋಳಿ, ಮಟ್ಟು, ಅಳಿಂಜೆ, ತೆಂಕು ಕೊಪ್ಪಳ, ಬಡಗು ಕೊಪ್ಪಳ, ಕಲ್ತಟ್ಟ, ದಡ್ಡಿ, ಪಾಂಗಾಳ ಗುಡ್ಡೆ ಪರಿಸರದಲ್ಲಿ ಪಾಂಗಾಳ ನದಿ ದಂಡೆಯ ಕೊರೆತಕ್ಕೊಳಗಾದ ಆಯ್ದ ಭಾಗಗಳಲ್ಲಿ ಕಾರ್ಲ್ಯಾಂಡ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲು ಅನುದಾನ ಮಂಜೂರು ಮಾಡುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ವಿಧಾನಸಭೆಯಲ್ಲಿ ಸದನದ ಗಮನ ಸೆಳೆದರು.
ಇಲ್ಲಿನ ನೂರಾರು ಕುಟುಂಬಗಳು ಉಡುಪಿ ಶ್ರೀ ಕೃಷ್ಣಮಠದ ಯತಿಗಳಾದ ಶ್ರೀ ಸೋದೆ ವಾದಿರಾಜ ಸ್ವಾಮೀಜಿ ಯವರು ಪ್ರಸಾದ ರೂಪದಲ್ಲಿ ನೀಡಿದ ಬೀಜವನ್ನು ಬಿತ್ತಿ ಮಟ್ಟುಗುಳ್ಳವನ್ನು ಬೆಳೆಯುತ್ತಿದ್ದು, ಮಟ್ಟುಗುಳ್ಳ ಇಲ್ಲಿನ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಜಿ.ಐ. ಟ್ಯಾಗ್ ಮಾನ್ಯತೆ ಹೊಂದಿದ ಮಟ್ಟುಗುಳ್ಳ ವಿಭಿನ್ನ ತರಕಾರಿ ಬೆಳೆಯಾಗಿದ್ದು, ಇದಕ್ಕೆ ದೇಶ-ವಿದೇಶಗಳಲ್ಲಿ ಬಹು ಬೇಡಿಕೆಯಿದೆ. ಈ ಭಾಗದಲ್ಲಿ ಮಟ್ಟುಗುಳ್ಳ ಮಾತ್ರವಲ್ಲದೇ ಭತ್ತ, ತರಕಾರಿ ಸಹಿತ ಧವಸ ಧಾನ್ಯ ಹಾಗೂ ತೆಂಗು ಬೆಳೆಯನ್ನು ಬೆಳೆಸುತ್ತಿದ್ದು ಉಪ್ಪು ನೀರಿನ ಹಾವಳಿಯಿಂದಾಗಿ ನಿರಂತರವಾಗಿ ಬೆಳೆಹಾನಿ ಯುಂಟಾ ಗುತ್ತಿದೆ. ಆದ್ದರಿಂದ ಈ ಪ್ರದೇಶಗಳಲ್ಲಿ ಹರಿಯುವ ಪಾಂಗಾಳ ನದಿಗೆ ಕಾರ್ಲ್ಯಾಂಡ್ ಯೋಜನೆ ಯಡಿಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಅನುದಾನ ಮಂಜೂರು ಮಾಡುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಸದನದ ಗಮನ ಸೆಳೆದರು.
ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಂಬಂಧಪಟ್ಟ ಸಚಿವರು ಕಾಪು ಶಾಸಕರಿಗೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ?
IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ
ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?
DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
MUST WATCH
ಹೊಸ ಸೇರ್ಪಡೆ
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!