ಕುರ್ಕಾಲು ಹೊಳೆಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರ ತಂಡ


Team Udayavani, Aug 6, 2021, 6:37 PM IST

ಕುರ್ಕಾಲು ಹೊಳೆಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಿಸಿದ ಯುವಕರ ತಂಡ

ಕಾಪು: ಕುರ್ಕಾಲು ಹೊಳೆಗೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಈಶ್ವರ್ ಮಲ್ಪೆ ಹಾಗೂ ಸತ್ಯದ ತುಳುವೆರ್ ತಂಡದ ಸದಸ್ಯರು ಪ್ರಾಣಭಯ ಮರೆತು ರಕ್ಷಿಸಿದ ಘಟನೆ ಶುಕ್ರವಾರ ಮುಂಜಾನೆ ಮಣಿಪುರದಲ್ಲಿ ನಡೆದಿದೆ.

ಉಡುಪಿ ಕುಕ್ಕಿಕಟ್ಟೆ ನಿವಾಸಿ ಬಾಲಕೃಷ್ಣ ಭಟ್ ರಕ್ಷಿಸಲ್ಪಟ್ಟ ವ್ಯಕ್ತಿಯಾಗಿದ್ದು, ಸುಮಾರು 5 ಗಂಟೆಗಳ ಕಾಲ ಅಪಾಯದ ಸುಳಿಗೆ ಸಿಲುಕಿದ್ದ ಅವರನ್ನು ರಕ್ಷಿಸಿ, ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ರಥಬೀದಿಯಲ್ಲಿ ಶಾರದಾ ವೆಜ್ ಹೊಟೇಲ್ ನ್ನು ನಡೆಸುತ್ತಿರುವ ಅವರು, ವ್ಯಾಪಾರದಲ್ಲಿನ ನಷ್ಟ ಮತ್ತು ಮಗಳ ಮದುವೆಯ ಚಿಂತೆಯಿಂದ ಕೊರಗಿ ಆತ್ಮಹತ್ಯೆ ಗೆ ಯತ್ನಿಸಿದ್ದರು ಎನ್ನಲಾಗಿದೆ.

ಗುರುವಾರ ಮಧ್ಯರಾತ್ರಿ 11 ಗಂಟೆಗೆ ಮಣಿಪುರ ಹೊಳೆ ಬಳಿಗೆ ಬಂದು, ಸ್ಕೂಟಿಯನ್ನು ಸೇತುವೆ ಪಕ್ಕದಲ್ಲಿ ಇರಿಸಿ, ಅವರು ಸೇತುವೆಯಿಂದ ಕೆಳಕ್ಕೆ‌ ಧುಮುಕಿದ್ದರು. ಹೊಳೆಯಲ್ಲಿ ಕೊಚ್ಚಿ ಹೋಗುವ ಭೀತಿಯಲ್ಲಿದ್ದ ಅವರು, ನೀರಿನಲ್ಲಿ ಕೊಚ್ಚಿ ಹೋಗುವ ವೇಳೆ ಪವಾಢ ಸದೃಶ ರೀತಿಯಲ್ಲಿ ದಂಡೆಯನ್ನು ಹಿಡಿದು ನಿಂತುಕೊಂಡಿದ್ದರು.

ಇದನ್ನೂ ಓದಿ :ಆಸ್ತಿ ಗಳಿಕೆ ವಿಚಾರವಾಗಿ ಐಟಿ ಬದಲು ಇಡಿ ತನಿಖೆ ಆಶ್ಚರ್ಯ ಮೂಡಿಸಿದೆ: ಡಿಕೆಶಿ

ಶುಕ್ರವಾರ ಮುಂಜಾನೆ 4.30 ರ ವೇಳೆಗೆ ಮಣಿಪಾಲದಿಂದ ಕೆಲಸ‌ ಮುಗಿಸಿ ಬರುತ್ತಿದ್ದ ಯುವಕನೋರ್ವ ರಸ್ತೆ ಬದಿಯಲ್ಲಿ ಬಿದ್ದಿದ್ದ ಸ್ಕೂಟಿಯನ್ನು ನೋಡಿ, ಸಂಶಯದ ಮೇರೆಗೆ ಸ್ಥಳಕ್ಕೆ ಹೋಗಿ ಪರಶೀಲಿಸಿದಾಗ ಹೊಳೆಯಲ್ಲಿ ವ್ಯಕ್ತಿಯೋರ್ವರು ಬೊಬ್ಬೆ ಹೊಡೆಯುವ ಸದ್ದು ಕೇಳಿದ್ದರು.

ತತ್ ಕ್ಷಣ ಅದನ್ನು ಗಮನಿಸಿದ ಯುವಕರು ಬಳಿಕ ಸತ್ಯದ ತುಳುವೆರ್ ತಂಡದ ಮುಖ್ಯಸ್ಥ ಪ್ರವೀಣ್ ಕುರ್ಕಾಲು ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅವರು, ಮಲ್ಪೆಯ‌ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರಿಗೆ ಮಾಹಿತಿ ನಡೆಸಿ, ಅವರ ಮೂಲಕ ಅಪಾಯಕ್ಕೆ ಸಿಲುಕಿದ್ದ ಬಾಲಕೃಷ್ಣ ಭಟ್ ಅವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಳಿ – ಮಳೆ ಸಹಿತವಾದ ಗಂಭೀರ ಪ್ರತಿಕೂಲದ ವಾತಾವರಣದ ನಡುವೆಯೂ ಮುಳುಗು ತಜ್ಞ ಈಶ್ವರ್ ಮಲ್ಪೆ, ಪ್ರವೀಣ್ ಕುರ್ಕಾಲ್ ನೇತೃತ್ವದಲ್ಲಿ ಸತ್ಯದ ತುಳುವೆರ್, ಹಾಗು ಮೇನ್ನಲ ಯುವಕರು ನೀರಿನ‌ ಸೆಳೆತಕ್ಕೆ ಕೊಚ್ಚಿ ಹೋಗಬೇಕಿದ್ದ ವ್ಯಕ್ತಿಯನ್ನು ರಕ್ಷಿಸುವ ಮೂಲಕ ಶ್ಲಾಘನೆಗೆ ಕಾರಣರಾಗಿದ್ದಾರೆ.

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.