ಸಾಗರ : ಜೀತದಾಳುಗಳಾಗಿ ಬಂಧಿಯಾಗಿದ್ದ ಛತ್ತಿಸಗಢದ 19 ಜನರ ರಕ್ಷಣೆ


Team Udayavani, Mar 10, 2022, 4:11 PM IST

ಸಾಗರ : ಜೀತದಾಳುಗಳಾಗಿ ಬಂಧಿಯಾಗಿದ್ದ ಛತ್ತಿಸಗಢದ 19 ಜನರ ರಕ್ಷಣೆ

ಸಾಗರ : ತಾಲೂಕಿನ ಆವಿನಹಳ್ಳಿಯ ಅಟಲ್ ಬಿಹಾರಿ ವಸತಿ ಶಾಲೆ ನಿರ್ಮಾಣದಲ್ಲಿ ಜೀತದಾಳುಗಳಾಗಿ ಬಂಧಿಯಾಗಿದ್ದ ಛತ್ತಿಸಗಢ ರಾಜ್ಯದ 19 ಜನರನ್ನು ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್. ನೇತೃತ್ವದ ತಂಡ ರಕ್ಷಣೆ ಮಾಡಿ ಬುಧವಾರ ರಾತ್ರಿ ಸರ್ಕಾರಿ ಬಸ್‌ನಲ್ಲಿ ಅವರ ರಾಜ್ಯಕ್ಕೆ ವಾಪಾಸ್ ಕಳಿಸಿಕೊಡಲಾಗಿದೆ.

ಶಾಲೆ ನಿರ್ಮಾಣ ಕಾರ್ಯಕ್ಕೆ ಛತ್ತಿಸಗಢದ ಸುಖ್ಮಾ ಜಿಲ್ಲೆಯ ಈ 19 ಜನರನ್ನು ಕೆಲಸಕ್ಕೆ ಕರೆ ತರಲಾಗಿತ್ತು. ಈ ಕಾರ್ಮಿಕರಿಗೆ ಊಟ ವಸತಿ, ಸಂಬಳವನ್ನು ಸಹ ಕೊಡದೆ, ಅವರ ಊರಿಗೂ ಕಳಿಸದೆ ಇಲ್ಲಿ ಬಂಧಿಯಾಗಿರಿಸಿಕೊಂಡು ಕೂಲಿ ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಎಸಿ ಸೂಚನೆಯನ್ವಯ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿ ಎಲ್ಲ ಜೀತಾದಾಳುಗಳನ್ನು ಬಂಧಮುಕ್ತಗೊಳಿಸಲಾಗಿದೆ. ಈ ಸಂಬಂಧ ನಾಲ್ಕು ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ವಿಚಾರಣೆಗೆ ಕರೆಯಲಾಗಿದೆ.

ಜೀತದಾಳುಗಳ ಪೈಕಿ ಆರು ಜನ ಮಹಿಳೆಯರು, ಐವರು ಬಾಲ ಕಾರ್ಮಿಕರು ಮತ್ತು 8 ಜನ ಪುರುಷರು ಇದ್ದಾರೆ. ಸುಖ್ಮಾ ಜಿಲ್ಲೆಯ ಉಪ ತಹಶೀಲ್ದಾರ್ ಮತ್ತು ಕಾರ್ಮಿಕ ನಿರೀಕ್ಷಕರ ನೇತೃತ್ವದಲ್ಲಿ ಜೀತಕಾರ್ಮಿಕರನ್ನು ಹಸ್ತಾಂತರಿಸಿ, ಛತ್ತಿಸಗಢಕ್ಕೆ ಕರೆದುಕೊಂಡು ಹೋಗಲು ತಾಲೂಕು ಆಡಳಿತದಿಂದ ಬಸ್ ಸೌಲಭ್ಯ ಒದಗಿಸಲಾಗಿದೆ.

ಇದನ್ನೂ ಓದಿ : ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ : ರಾಹುಲ್ ಗಾಂಧಿ

ಈ ಕುರಿತು ಮಾತನಾಡಿದ ಎಸಿ ಡಾ. ನಾಗರಾಜ್, ಈ ಬಗ್ಗೆ ಚಿತ್ರದುರ್ಗ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೆಲಸಕ್ಕಾಗಿ ಕರೆದುಕೊಂಡು ಬಂದ ಕಾರ್ಮಿಕರಿಗೆ ಸಂಬಳ ಕೊಡದೆ, ಹಳಸಿದ ಊಟವನ್ನು ನೀಡಿ, ಊರಿಗೂ ಹೋಗಲು ಬಿಡುತ್ತಿಲ್ಲ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಮಾ. ೫ರಂದು ಸುಖ್ಮಾ ಉಪ ತಹಶೀಲ್ದಾರ್ ಮತ್ತು ಕಾರ್ಮಿಕ ನಿರೀಕ್ಷಕರು ಸಾಗರಕ್ಕೆ ಬಂದಿದ್ದಾರೆ. ಜೀತದಾಳುಗಳನ್ನು ಗುತ್ತಿಗೆ ಕಾರ್ಮಿಕರನ್ನಾಗಿ ಕಳಿಸಿದ್ದು ರಾಮಕಿಶನ್ ಎಂಬ ಬೆಂಗಳೂರಿನ ವ್ಯಕ್ತಿ, ಮ್ಯಾನ್‌ಪವರ್ ಏಜೆನ್ಸಿಯ ಬಾಬು, ರಾಮಕೃಷ್ಣ ಮತ್ತು ತಿರುಪತಿ ಅವರ ಮೇಲೆ ಬಾಲಕಾರ್ಮಿಕರ ಅಪರಾಧ ಕಾಯ್ದೆ, ಜೀತಪದ್ಧತಿ ಅಡಿ ಪ್ರಕರಣ ದಾಖಲಿಸಲಾಗಿದೆ. ಜೀತದಾಳುಗಳಾಗಿ ದುಡಿಯುತ್ತಿದ್ದ ೧೯ ಜನರಿಗೆ ಊಟ ವಸತಿ ನೀಡಿ, ಬಿಡುಗಡೆ ಪತ್ರವನ್ನು ಕೊಟ್ಟು ಅಲ್ಲಿನ ಅಧಿಕಾರಿಗಳಿಗೆ ಹಸ್ತಾಂತರಿಸಿ, ಛತ್ತಿಸಗಢಕ್ಕೆ ಸರ್ಕಾರಕ್ಕೆ ಕಳಿಸುತ್ತಿದ್ದೇವೆ. ಜೀತದಾಳುಗಳಿಗೆ ಸಂಬಳ ಕೊಡುವುದು ಬಾಕಿ ಇದ್ದು, ಇದನ್ನು ಸಂಬಂಧಪಟ್ಟ ಗುತ್ತಿಗೆದಾರರಿಂದ ವಸೂಲಿ ಮಾಡಿ ಅವರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಸುಖ್ಮಾ ಜಿಲ್ಲೆಯ ಉಪ ತಹಶೀಲ್ದಾರ್ ಸತಾನಂದನಾಗ್, ಕಾರ್ಮಿಕ ನಿರೀಕ್ಷಕ ಜೆ.ಎಲ್. ದೇವಾಂಗನ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.