ವಸತಿ ಶಾಲೆಗಳೂ ಎಸೆಸೆಲ್ಸಿ ಫ‌ಲಿತಾಂಶದಲ್ಲಿ ಮುಂದೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಅತ್ಯುತ್ತಮ ಫ‌ಲಿತಾಂಶ

Team Udayavani, May 22, 2024, 11:34 PM IST

ವಸತಿ ಶಾಲೆಗಳೂ ಎಸೆಸೆಲ್ಸಿ ಫ‌ಲಿತಾಂಶದಲ್ಲಿ ಮುಂದೆ

ಕುಂದಾಪುರ: ಎಸೆಸೆಲ್ಸಿ ಫಲಿತಾಂಶ ಬಂದಾಗ ಪೂರ್ಣಾಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಅಂಕಿತಾ ಮೇಲೆ ಎಲ್ಲರ ಗಮನ ಹರಿಯಿತು. ಸಹಜವಾಗಿ ಆಕೆ ಓದಿದ ಶಾಲೆ ಮೇಲೂ. ಅಂದ ಹಾಗೆ ರಾಜ್ಯದಲ್ಲಿ ಸರಕಾರಿ ವಸತಿ ಶಾಲೆಗಳು ಶೇ. 96ರಷ್ಟು ಫಲಿತಾಂಶ ದಾಖಲಿಸಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಅತ್ಯುತ್ತಮ ಸಾಧನೆ ಮಾಡಿವೆ.

ದ.ಕ. ಜಿಲ್ಲೆಯಲ್ಲಿ 11 ವಸತಿ ಶಾಲೆಗಳ ಪೈಕಿ ಹತ್ತರಲ್ಲಿ ಶೇ. 100 ಫಲಿತಾಂಶ ದಾಖಲಿಸಿವೆ. 475 ಮಂದಿ ಪರೀಕ್ಷೆಗೆ ಹಾಜರಾಗಿ 474 ಮಂದಿ ತೇರ್ಗಡೆ ಯಾಗಿದ್ದಾರೆ. ಉಡುಪಿ ಜಿಲ್ಲೆಯ 8 ಶಾಲೆಗಳಲ್ಲಿ 331 ಮಂದಿ ಪರೀಕ್ಷೆಗೆ ಹಾಜರಾಗಿ ಅಷ್ಟೂ ಮಂದಿ ತೇರ್ಗಡೆಯಾಗಿದ್ದಾರೆ.

ಕಳೆದ ವರ್ಷ ರಾಜ್ಯದ ವಸತಿ ಶಾಲೆಗಳ ಫಲಿತಾಂಶಕ್ಕೆ ಹೋಲಿಸಿದರೆ ಈ ವರ್ಷ ಸ್ವಲ್ಪ ಕುಸಿದಿದೆ. ಕಳೆದ ವರ್ಷ ಶೇ.99 ಬಂದಿದ್ದರೆ, ಈ ವರ್ಷ ಶೇ. 95.75 ಬಂದಿದೆ. ರಾಜ್ಯದಲ್ಲಿ 758 ವಸತಿ ಶಾಲೆಗಳಲ್ಲಿ 35,303 ಮಂದಿ ಪರೀಕ್ಷೆಗೆ ಹಾಜರಾಗಿದ್ದು 33,803 ಮಂದಿ ತೇರ್ಗಡೆಯಾಗಿದ್ದಾರೆ. ರಾಜ್ಯದಲ್ಲಿ 830 ವಸತಿ ಶಾಲೆಗಳಿದ್ದು 758 ಶಾಲೆಗಳಲ್ಲಿ ಎಸೆಸೆಲ್ಸಿ ಇದೆ. ಈ ಪೈಕಿ 358 ಶಾಲೆಗಳಲ್ಲಿ ಶೇ.100 ಫಲಿತಾಂಶ ಬಂದಿದೆ.

ಯಾವೆಲ್ಲ ಶಾಲೆ
ವಸತಿ ಶಾಲೆಗಳೆಂದರೆ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ| ಬಿ.ಆರ್‌. ಅಂಬೇಡ್ಕರ್‌, ಅಟಲ್‌ಬಿಹಾರಿ ವಾಜಪೇಯಿ, ನಾರಾಯಣ ಗುರು, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು. ಈ ಪೈಕಿ ನಾರಾಯಣ ಗುರು ಶಾಲೆಯಲ್ಲಿ ಎಸೆಸೆಲ್ಸಿಗೆ ಇನ್ನಷ್ಟೇ ಅವಕಾಶ ಸಿಗಬೇಕಿದೆ.

ಪ್ರವೇಶ ಹೇಗೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಸತಿ ಶಾಲೆಗಳ ಸೇರ್ಪಡೆಗೆ ಪ್ರವೇಶ ಪರೀಕ್ಷೆ ನಡೆಸುತ್ತದೆ. 4,5 ತರಗತಿಯ ಪಠ್ಯಗಳನ್ನು ಆಧರಿಸಿದ ಪ್ರಶ್ನೆ ಪತ್ರಿಕೆ ಇರುತ್ತದೆ. ಈಚೆಗೆ ಎರಡು ವರ್ಷದಿಂದ ನಿಯಮಗಳಲ್ಲಿ ತಿದ್ದುಪಡಿಯಾಗಿದ್ದು ಸ್ಥಳೀಯ ಜಿಲ್ಲೆಯಲ್ಲಿ ಕಲಿಯುತ್ತಿರುವವರಿಗೇ ಆದ್ಯತೆ ನೀಡಲಾಗುತ್ತದೆ. ಹಿಂದುಳಿದ ವರ್ಗಗಳ ಶಾಲೆಯಲ್ಲಿ ಶೇ. 75 ಸೀಟು ಹಿಂದುಳಿದ ವರ್ಗದವರಿಗೆ, ಶೇ.25 ಸೀಟುಗಳು ಪ.ಜಾ.ಪ.ವರ್ಗದವರಿಗೆ, ಸಮಾಜ ಕಲ್ಯಾಣ ಇಲಾಖೆ ಶಾಲೆಗಳಲ್ಲಿ ಶೇ.75ರಷ್ಟು ಪ.ಜಾ.ಪ.ವರ್ಗದವರಿಗೆ, ಶೇ.25 ಸೀಟುಗಳು ಹಿಂದುಳಿದ ವರ್ಗದವರಿಗೆ, ಪ.ವರ್ಗಗಳ ಕಲ್ಯಾಣ ಶಾಲೆಗಳಲ್ಲಿ ಶೇ.75 ಪ.ವರ್ಗದವರಿಗೆ, ಶೇ.25 ಪ.ಜಾತಿಯವರಿಗೆ ಎಂಬಂತಹ ನಿಯಮಗಳಿವೆ. ಮೊರಾರ್ಜಿ ವಸತಿ ಶಾಲೆಯ ಪಿಯುಸಿ ಸೇರ್ಪಡೆಗೆ ಆಯಾ ಜಿಲ್ಲಾ ಮೊರಾರ್ಜಿ ಶಾಲೆಯಲ್ಲಿ ಕಲಿತವರಿಗೆ ಮೊದಲ ಆದ್ಯತೆ ಇರುತ್ತದೆ. ಅದೆಷ್ಟೇ ಹೆಚ್ಚು ಅಂಕದವರು ಹೊರಗಿನವರು ಇದ್ದರೂ ಮೊರಾರ್ಜಿ ಶಾಲೆಯಲ್ಲಿ ಕಲಿತು ಕಡಿಮೆ ಅಂಕ ಪಡೆದರೂ ಪ್ರವೇಶ ಅವಕಾಶವಿರಲಿದೆ.

ಐದು ವರ್ಷಗಳ ಅವಧಿಯ ಉಚಿತ ಶಿಕ್ಷಣ ಇದಾಗಿದ್ದು,. ವಸತಿ, ಊಟ, ಬಟ್ಟೆ ಎಲ್ಲ ಸೌಲಭ್ಯಗಳೂ ಸಿಗಲಿವೆ.

ಬಾಳ ಬೆಳಕು
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದ ವಜ್ಜರಮಟ್ಟಿಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಪಡೆದರು. ಮಧ್ಯಮ ವರ್ಗದ ಕುಟುಂಬದ ರೈತರಾದ ಬಸಪ್ಪ ಹಾಗೂ ಗೀತಾ ಕೊಣ್ಣೂರ ದಂಪತಿಯ ಮೊದಲ ಪುತ್ರಿ ಅಂಕಿತಾ 6ನೇ ತರಗತಿಯಿಂದ ಆ ಶಾಲೆಯಲ್ಲಿ ಕಲಿಯತೊಡಗಿದ್ದರು.

ಟಾಪ್ ನ್ಯೂಸ್

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Udayavani Campaign-ನಮಗೆ ಬಸ್‌ ಬೇಕೇ ಬೇಕು: ಹೇಳಿ, ನಮ್ಮೂರಿಗೆ ಬಸ್‌ ಯಾಕೆ ಬರುವುದಿಲ್ಲ?

Udayavani Campaign-ನಮಗೆ ಬಸ್‌ ಬೇಕೇ ಬೇಕು: ಹೇಳಿ, ನಮ್ಮೂರಿಗೆ ಬಸ್‌ ಯಾಕೆ ಬರುವುದಿಲ್ಲ?

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

1-asdsdasdas-d

South Africa 30 ವರ್ಷದಲ್ಲಿ ಮೊದಲ ಬಾರಿಗೆ ಸಮ್ಮಿಶ್ರ ಸರಕಾರ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.