ಸೇನೆಯಿಂದ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಭಾಸ್ಕರ ಕಾರಿಂಜರಿಗೆ ಸನ್ಮಾನ
Team Udayavani, Dec 5, 2021, 5:13 PM IST
ಅರಂತೋಡು: ಕನಕಮಜಲು ಗ್ರಾಮದ ಭಾಸ್ಕರ ಕಾರಿಂಜರವರು ಅರೆಸೇನಾ ಪಡೆಯ ಸೆಂಟ್ರಲ್ ರಿಸರ್ವ್ಡ್ ಪೋಲಿಸ್ ಫೋರ್ಸ್ನಲ್ಲಿ ಸೇವೆ ಸಲ್ಲಿಸಿ ಡಿ. 1 ರಂದು ನಿವೃತ್ತರಾಗಿದ್ದು, ಡಿ. 5 ರಂದು ತನ್ನ ಹುಟ್ಟೂರು ಕನಕಮಜಲಿನ ಕಾರಿಂಜಕ್ಕೆ ಆಗಮಿಸಿದರು. ತರವಾಡು ದೈವಸ್ಥಾನದ ಆಶೀರ್ವಾದ ಪಡೆದ ನಂತರ ತನ್ನ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾದ ನಂತರ ಕಾರಿಂಜ ಕುಟುಂಬಸ್ಥರ ಪರವಾಗಿ ಸನ್ಮಾನ ಕಾರ್ಯಕ್ರಮ ನಡೆಯಿತು.
ನಿವೃತ್ತ ಹಿರಿಯ ಶಿಕ್ಷಕ ಕೇಪು ಸುಂದರ್ ಮಾಸ್ತರ್ ಅವರು ನಿವೃತ್ತ ಸೈನಿಕ ದಂಪತಿಗಳನ್ನು ಸನ್ಮಾನಿಸಿ ಶುಭ ಹಾರೈಸಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ನ. ಸೀತಾರಾಮ, ಕಾರಿಂಜ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕುಶಾಲಪ್ಪ ಕಾರಿಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರಿಂಜ ಬಾಲಕೃಷ್ಣ ಗೌಡ ದಂಪತಿಗಳು, ಲೋಲಾಕ್ಷ ಕಾರಿಂಜ, ಉಮೇಶ್ ಕಾರಿಂಜ, ಭಾಸ್ಕರ ಕಾರಿಂಜರ ಧರ್ಮಪತ್ನಿ ಶ್ರೀಮತಿ ಆರತಿ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಬಂಧು ಮಿತ್ರರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಸೀತಾರಾಮ ಬುಡ್ಲೆಗುತ್ತು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಜಯಪ್ರಸಾದ್ ಕಾರಿಂಜ ವಂದಿಸಿದರು. ಇದೇ ಸಂದರ್ಭ ಹಿರಿಯ ನಿವೃತ್ತ ಶಿಕ್ಷಕ ಕೇಪು ಸುಂದರ್ ಮಾಸ್ತರ್ ಅವರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಮಂಗಳ ನಿಧಿಯನ್ನು ಸಮರ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ