Education: ಗ್ರಹಣ ಹಿಡಿದಿದ್ದ ಆತ್ಮರಕ್ಷಣೆ ಕಲೆಗೆ ಮರುಜೀವ!

ಶಾಲಾ ಬಾಲಕಿಯರಿಗೆೆ ಕರಾಟೆ ತರಬೇತಿ - ತರಬೇತಿ ಅವಧಿ ವಿಸ್ತರಣೆಗೆ ಆಗ್ರಹ

Team Udayavani, Nov 17, 2023, 1:31 AM IST

kar

ಕಾರ್ಕಳ: ಸರಕಾರಿ ಪ್ರೌಢಶಾಲೆಗಳಲ್ಲಿ ಜಾರಿಯಲ್ಲಿದ್ದು ನಾಲ್ಕು ವರ್ಷಗಳಿಂದ ಗ್ರಹಣ ಹಿಡಿದಿದ್ದ ಬಾಲಕಿಯರ ಆತ್ಮರಕ್ಷಣೆ ಕಲೆ (ಕರಾಟೆ)ಗೆ ಮರುಜೀವ ಸಿಕ್ಕಿದೆ.

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು 2023-24ನೇ ಸಾಲಿನಲ್ಲಿ ರಾಜ್ಯದ ಸರಕಾರಿ ಪ್ರೌಢಶಾಲೆಗಳ 9ನೇ ತರಗತಿ ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆ ಕಲೆ ತರಬೇತಿ ನೀಡಲು ಪ್ರತೀ ಶಾಲೆಗೆ ಘಟಕ ವೆಚ್ಚ 3 ಸಾವಿರ ರೂ.ಗಳಂತೆ ಎಲ್ಲ ಜಿಲ್ಲೆಗಳ 5,307 ಶಾಲೆಗಳಿಗೆ ಸುಮಾರು 1.59 ಕೋಟಿ ರೂ.ಗಳನ್ನು ಸರಕಾರ ಮಂಜೂರುಗೊಳಿಸಿದೆ.

2013-14ರಲ್ಲಿ ರಾಜ್ಯ ಸರಕಾರ ಯೋಜನೆಯನ್ನು ಜಾರಿಗೆ ತಂದಿತ್ತು. ವಾರಕ್ಕೆ 2 ಅವಧಿಯಂತೆ 3ರಿಂದ 4 ತಿಂಗಳಲ್ಲಿ 24 ಅವಧಿ ಬೋಧನೆ ಮಾಡಲಾಗುತ್ತಿತ್ತು. ಆದರೆ 2017ರ ಸೆಪ್ಟಂ ಬರ್‌ನಲ್ಲಿ ತರಬೇತಿ ಸ್ಥಗಿತಗೊಂಡಿತ್ತು.

ಆರಂಭದಲ್ಲಿ 3 ತಿಂಗಳ ಒಟ್ಟು ಬೋಧನಾ ಅವಧಿಗೆ 2,400 ರೂ. ಗೌರವಧನ ನೀಡಲಾಗುತ್ತಿತ್ತು. 2017-18ರಲ್ಲಿ 9 ಸಾವಿರ ರೂ.ಗಳಿಗೆ ಏರಿಕೆಯಾಗಿತ್ತು. 600ಕ್ಕೂ ಅಧಿಕ ಕರಾಟೆ ಶಿಕ್ಷಕರು ನೋಂದಾಯಿಸಿಕೊಂಡಿದ್ದು, 2-3 ಶಾಲೆಗಳಲ್ಲಿ ತರಬೇತಿ ನೀಡುತ್ತ ಬದುಕು ಕಟ್ಟಿಕೊಂಡಿ ದ್ದರು. ಯೋಜನೆ ಯೋಜನೆ ನನೆ ಗುದಿಗೆ ಬಿದ್ದ ಬಳಿಕ ಅವರ ಬದುಕು ಅತಂತ್ರವಾಗಿತ್ತು.

ಅನುಷ್ಠಾನ ಹೇಗೆ?
ನವೆಂಬರ್‌ ಅಂತ್ಯದೊಳಗೆ ಆರ್ಹ ತರಬೇತುದಾ ರರನ್ನು ಆಯ್ಕೆ ಮಾಡಿ ಎಸ್‌ಡಿಎಂಸಿ ಸಭೆ ಕರೆದು ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿನಿಯರ ಹಿತರಕ್ಷಣೆ ಕೇಂದ್ರವಾಗಿಟ್ಟುಕೊಂಡು ದೂರು ಬರದಂತೆ ಪರಿಣಾಮಕಾರಿ ಯಾಗಿ ತರಬೇತಿ ನೀಡಬೇಕಿದೆ. ತರಬೇತಿ ವೇಳೆ ದೈಹಿಕ ಶಿಕ್ಷಣ ಶಿಕ್ಷಕರ ಉಪಸ್ಥಿತಿ ಕಡ್ಡಾಯ.

ಕೇವಲ 7 ತಾಸು!
ಮರಳಿ ಆರಂಭಿಸಿದ ಆತ್ಮರಕ್ಷಣೆ ಕಲೆ ತರಬೇತಿಯ ಒಟ್ಟು ಅವಧಿ ಕೇವಲ 7 ತಾಸು. ಇದರಿಂದ ಹೆಚ್ಚಿನ ಪ್ರಯೋಜನವಾಗದು ಎನ್ನುವ ಅಭಿಪ್ರಾಯ ಪೋಷಕರದು. ಕಡಿಮೆ ಅವಧಿಯಾದ್ದರಿಂದ ಕರಾಟೆ ಶಿಕ್ಷಕರು ತರಬೇತಿ ನೀಡಲು ಹಿಂದೇಟು ಹಾಕುವ ಸಂಭವವೇ ಹೆಚ್ಚು. ಕನಿಷ್ಠ 3ರಿಂದ 4 ತಿಂಗಳ ಅವಧಿಗೆ ನಿಗದಿಪಡಿಸಿದ್ದರೆ ಹಳ್ಳಿಯ ಮಕ್ಕಳಿಗೆ ಅನುಕೂಲವಾಗುತ್ತಿತ್ತು ಎಂದು ರಾಜ್ಯ ಕರಾಟೆ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್‌ ಪೂಜಾರಿ ಬೆಳ್ಮಣ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾಲಕಿಯರ ಆತ್ಮರಕ್ಷಣೆ ಕಲೆ ಯೋಜನೆ ಮರು ಜಾರಿಯಾಗಲಿದ್ದು, ನವೆಂಬರ್‌ – ಡಿಸೆಂಬರ್‌ ಅವಧಿಯಲ್ಲಿ ತರಬೇತಿ ನೀಡಲಾಗುವುದು. ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.
– ಗಣಪತಿ, ದಯಾನಂದ ನಾಯಕ್‌ ಡಿಡಿಪಿಐಗಳು, ಉಡುಪಿ, ದಕ್ಷಿಣ ಕನ್ನಡ

ಹೆಣ್ಣು ಮಕ್ಕಳ ರಕ್ಷಣೆ ತರಬೇತಿಯ ಉದ್ದೇಶ. ಆದರೆ ಅಲ್ಪಾವಧಿಯ ತರಬೇತಿಯಿಂದ ವಿಶೇಷ ಪ್ರಯೋಜನವಾಗದು. ಪುನಾರಂಭಿಸಿದ್ದರೂ ಆರ್ಥಿಕ ಭಾರದ ನೆಪವೊಡ್ಡಿ ಕಡಿಮೆ ಅವಧಿಗೆ ಇಳಿಸಲಾಗಿದೆ. ಅವಧಿ ಹೆಚ್ಚಿಸುವಂತೆ ಮನವಿ ಸಲ್ಲಿಸಲಾಗುವುದು.
– ನದೀಮ್‌, ಅಧ್ಯಕ್ಷ, ರಾಜ್ಯ ಕೀಡಾ ಕರಾಟೆ ಶಿಕ್ಷಕರ ಸಂಘ ಬೆಂಗಳೂರು

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.