ರಿಯಾಜ್‌ ಭಟ್ಕಳ್‌ ಸಹಚರ ಉಗ್ರನ ತೀವ್ರ ವಿಚಾರಣೆ!


Team Udayavani, Sep 26, 2019, 11:00 PM IST

riyaz

ಬೆಂಗಳೂರು: ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್‌ ಓಬಾಮಾ 2015ರ ಗಣರಾಜ್ಯೋತ್ಸವಕ್ಕೆ ಭಾರತಕ್ಕೆ ಆಗಮಿಸಿದ್ದ ವೇಳೆ ದೇಶದ ಹಲವೆಡೆ ಬಾಂಬ್‌ಸ್ಫೋಟ ನಡೆಸಲು ರೂಪಿಸಿದ್ದ ಸಂಚಿನ ಮಾಸ್ಟರ್‌ವೆುçಂಡ್‌, ಇಂಡಿಯನ್‌ ಮುಜಾಹಿದ್ದೀನ್‌ (ಐಎಂ) ಉಗ್ರ ಭಟ್ಕಳ ಮೂಲದ ಜೈನುಲ್ಲಾಬ್ಬೀನ್‌ ಎಂಬ ಮಾಹಿತಿ ಹೊರಬಿದ್ದಿದೆ.

ಈ ಸಂಚು ರೂಪಿಸಿದ ಆರೋಪ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಶಂಕಿತ ಉಗ್ರರು ವಿಚಾರಣೆ ವೇಳೆ ನೀಡಿದ್ದ ಮಾಹಿತಿ ಆಧರಿಸಿ ಮುಂಬೈನ ಆರ್ಥರ್‌ ಜೈಲಿನಲ್ಲಿದ್ದ ಉಗ್ರ ಜೈನುಲ್ಲಾಬ್ಬೀನ್‌ ಎಂಬಾತನನ್ನು ವಶಕ್ಕೆ ಪಡೆದು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಆತನ ವಿಚಾರಣೆಯಿಂದ ದೇಶದಲ್ಲಿ ಅಲ್ಲಲ್ಲಿ ನಡೆದಿದ್ದ ಐಎಂ ಸಂಘಟನೆ ನಡೆಸಿದ ಸ್ಫೋಟಕ ಕೃತ್ಯಗಳಲ್ಲಿ ಜೈನಾಲ್ಲಾದ್ದೀನ್‌ ಮಾಸ್ಟರ್‌ ಮೈಂಡ್‌ ಎಂದು ಮೂಲಗಳು ತಿಳಿಸಿವೆ. ಆತನ ವಿಚಾರಣೆಯಿಂದ ದಕ್ಷಿಣ ಭಾರತದಲ್ಲಿ, ಪ್ರಮುಖವಾಗಿ ಕರ್ನಾಟಕದಲ್ಲಿ ನಡೆಸಿರುವ ಸ್ಫೋಟಕ ಕೃತ್ಯಗಳ ಮಾಹಿತಿ ದೊರೆಯಬಹುದು ಎಂದು ಹೇಳಲಾಗಿದೆ.

2015ರ ಜನವರಿಯಲ್ಲಿ ಕಾರ್ಯಚರಣೆ ನಡೆಸಿದ್ದ ಸಿಸಿಬಿ ಪೊಲೀಸರು ದೇಶದ ವಿವಿಧ ಭಾಗಗಳಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಕೃತ್ಯಗಳಿಗೆ ಸ್ಫೋಟಕ ಸರಬರಾಜು ಮಾಡಿದ, ಸ್ಫೋಟಕ ಸಂಗ್ರಹಿಸಿದ್ದ ಭಟ್ಕಳ ಮೂಲದ ಸೈಯದ್‌ ಇಸ್ಮಾಯಿಲ್‌ ಅಫಾಕ್‌, ಅಬ್ದುಲ್‌ ಸಬೂರ್‌, ಸದ್ದಾಂ ಹುಸೇನ್‌, ರಿಯಾಜ್‌ ಅಹಮದ್‌ ಸೈಯದಿ ಎಂಬುವವರನ್ನು ಬಂಧಿಸಿದ್ದರು. ಅಷ್ಟೇ ಅಲ್ಲದೆ ಫ್ರೆಜರ್‌ಟೌನ್‌ನ ಮನೆಯೊಂದರಲ್ಲಿ ಸಂಗ್ರಹಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ಜಪ್ತಿ ಮಾಡಿಕೊಂಡಿದ್ದರು.

ಆರೋಪಿಗಳಿಗೂ ಹಾಗೂ ಜೈನುಲ್ಲಾಬ್ಬೀನ್‌ಗೆ ಸಂಪರ್ಕವಿದ್ದ ಬಗ್ಗೆ ಸಂಪರ್ಕ ಇರುವುದು ತನಿಖೆಯಲ್ಲಿ ಗೊತ್ತಾಗಿತ್ತು. ಅಲ್ಲದೆ, ಜೈನುಲ್ಲಾಬ್ಬೀನ್‌ ಸೂಚನೆ ಮೇರೆಗೆ ಕೃತ್ಯಗಳಲ್ಲಿ ಭಾಗಿಯಾಗಿದ್ದ ಸಂಗತಿಯೂ ಗೊತ್ತಾಗಿತ್ತು. ಆದರೆ, ಆತ ಎಲ್ಲಿದ್ದಾನೆ ಎಂಬುದುರ ಬಗ್ಗೆ ಸುಳಿವು ನೀಡಿರಲಿಲ್ಲ. ಆತನ ಪತ್ತೆಗೆ ಶೋಧ ಮುಂದುವರಿದಿತ್ತು.

ಈ ಬೆನ್ನಲ್ಲೇ ಜೈನುಲ್ಲಾಬ್ಬೀನ್‌ ಮುಂಬೈನಲ್ಲಿ 2011ರಲ್ಲಿ ಜವೇರಿಬಜಾರ್‌, ಖಬೂತರ್‌ ಖಾನಾ ಸೇರಿ ಮೂರು ಕಡೆ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಅರ್ಥರ್‌ ರಸ್ತೆ ಜೈಲಿನಲ್ಲಿರುವ ಬಗ್ಗೆ ಮಾಹಿತಿ ಖಚಿತವಾಗಿತ್ತು. ಈ ಮಾಹಿತಿ ಆಧರಿಸಿ ನ್ಯಾಯಾಲಯಕ್ಕೆ ಬಾಡಿವಾರೆಂಟ್‌ ಸಲ್ಲಿಸಿ ಆತನನ್ನು ವಶಕ್ಕೆ ಪಡೆದು ಕರೆತರಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಐಎಂ ಸಂಘಟನೆಯ ಸ್ಥಾಪಕ ರಿಯಾಜ್‌ ಭಟ್‌Rಳನ ಆಪ್ತನಾಗಿರುವ ಜೈನುಲ್ಲಾಬ್ಬೀನ್‌ ಆತನ ಸೂಚನೆ ಮೇರೆಗೆ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಐಎಂ ಸಂಘಟನೆ ಬಲಗೊಳಿಸುತ್ತಿದ್ದ. 2011ರಿಂದ 2014ರವರೆಗೆ ದೇಶದಲ್ಲಿ ನಡೆದ ಬಾಂಬ್‌ ಸ್ಫೋಟ ಕೃತ್ಯಗಳಿಗೆ ಸಹಚರರ ಮೂಲಕ ಸ್ಫೋಟಕ ರವಾನಿಸಿದ್ದಾನೆ. ಅಷ್ಟೇ ಅಲ್ಲದೆ, ಫ್ರೆಜರ್‌ಟೌನ್‌ನಲ್ಲಿ ಬಂಧಿತರಾದ ಆರೋಪಿಗಳ ಜತೆ ನೇರ ಸಂಪರ್ಕ ಹೊಂದಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

“”ಮಹಾರಾಷ್ಟ್ರ ಜೈಲಿನಲ್ಲಿದ್ದ ಐಎಂ ಸಂಘಟನೆಯ ಸದಸ್ಯ ಜೈನುಲ್ಲಾಬ್ಬೀನ್‌ನನ್ನು ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನಗಳ ಕಾಲ ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ”
– ಕುಲದೀಪ್‌ ಕುಮಾರ್‌ ಜೈನ್‌,ಡಿಸಿಪಿ, ಸಿಸಿಬಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.