ಇಂಡೋನೇಷ್ಯಾದಲ್ಲಿ ಎಟಿಎಂನಲ್ಲಿ ಸಿಗುತ್ತದೆ ಅಕ್ಕಿ


Team Udayavani, May 14, 2020, 6:04 PM IST

ಇಂಡೋನೇಷ್ಯಾದಲ್ಲಿ ಎಟಿಎಂನಲ್ಲಿ ಸಿಗುತ್ತದೆ ಅಕ್ಕಿ

ಮಣಿಪಾಲ : ಕೆಲವು ಬಡ ರಾಷ್ಟ್ರಗಳ ಮೇಲೆ ಕೋವಿಡ್ ಬೀರಿದ ಪರಿಣಾಮ ಅಪಾರ. ಇಲ್ಲಿ ಚಿಕಿತ್ಸೆಗಿಂತಲೂ ಜನರಿಗೆ ಹೊಟ್ಟೆ ತುಂಬ ಊಟ ಸಿಗದಿರುವುದೇ ದೊಡ್ಡ ಸಮಸ್ಯೆ. ಇಂಥ ದೇಶಗಳ ಪೈಕಿ ಇಂಡೋನೇಷ್ಯಾವೂ ಇದೆ. ಹಾಗೆಂದು ಕೈಕಟ್ಟಿ ಕುಳಿತುಕೊಳ್ಳದ ಅಧಿಕಾರಿಗಳು ಹಸಿವಿನಿಂದ ಬಳಲುತ್ತಿರುವ ಕುಟುಂಬಗಳಿಗೆ ಆಹಾರ ಹಂಚಲು ವಿಭಿನ್ನ ಮಾರ್ಗವನ್ನು ಕಂಡುಕೊಂಡಿದ್ದಾರೆ.

ಹೌದು 14,000ಕ್ಕೂ ಹೆಚ್ಚು ಸೋಂಕಿತ ಇರುವ ಇಂಡೋನೇಷ್ಯಾದಲ್ಲಿ ಈಗಾಗಲೇ ಸುಮಾರು 1,000 ಮಂದಿ ಬಲಿಯಾಗಿದ್ದಾರೆ. ಚೀನದ ಪೂರ್ವ ಏಷ್ಯಾ ಭಾಗದಲೇ ಅತಿ ಹೆಚ್ಚಿನ ಸಾವಿನ ಪ್ರಮಾಣವನ್ನು ಹೊಂದಿರುವ ಈ ರಾಷ್ಟ್ರ ಸೋಂಕು ನಿಯಂತ್ರಣಕ್ಕಾಗಿ ವ್ಯಾಪಾರ ವಹಿವಾಟನ್ನು ಬಂದ್‌ ಮಾಡಿದ ಕಾರಣ ಅನೇಕ ಮಂದಿ ನಿರುದ್ಯೋಗಿಗಳಾಗಿದ್ದಾರೆ.ಅವರ ಕುಟುಂಬಗಳು ಹಸಿವಿನಿಂದ ಕಂಗೆಟ್ಟಿವೆ.

ಅಕ್ಕಿ ವಿತರಣೆಗೆ ಎಟಿಎಂ
ಆದಾಯವಿಲ್ಲದ ಜನರಿಗೆ ಅಧಿಕಾರಿಗಳು ಸಹಾಯ ಹಸ್ತ ಚಾಚಿದ್ದು, ಇಂಡೋನೇಷ್ಯಾದ ಹಲವಾರು ನಗರಗಳಲ್ಲಿ ಉಚಿತ ಅಕ್ಕಿಯನ್ನು ವಿತರಿಸುವ ಎಟಿಎಂ ಯಂತ್ರಗಳನ್ನು ಸ್ಥಾಪಿಸಿದ್ದಾರೆ.

ಸ್ವಯಂ ಚಾಲಿತ ಯಂತ್ರ
ವಿಶೇಷವೆಂದರೆ ಈ ಯಂತ್ರ ಸ್ವಯಂ ಚಾಲಿತವಾಗಿದ್ದು, ಮ್ಯಾಗ್ನೆಟಿಕ್‌ ಕಾರ್ಡ್‌ ಸಹಾಯದಿಂದ ಕಾರ್ಯ ನಿರ್ವಹಿಸುತ್ತದೆ.ಹಣ ಕೊಡುವ ಎಟಿಎಂ ಯಂತ್ರದಂತೆ ಇದನ್ನು ರೂಪಿಸಲಾಗಿದೆ. ಹಣದ ಬದಲು ಅಕ್ಕಿ ಹೊರ ಬರುವ ತಂತ್ರಗಾರಿಕೆಯನ್ನು ಅಳವಡಿಸಲಾಗಿದೆ.

ಈ ವ್ಯವಸ್ಥೆಯ ಕುರಿತು ಅಲ್ಲಿನ ಸ್ಥಳೀಯ ನಿವಾಸಿ ಲಿಂಡಾ ಸಯಾಫ್ರಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಲಾಕ್‌ಡೌನ್‌ನಿಂದಾಗಿ ಕಳೆದ ವಾರ ನನ್ನನ್ನು ಮತ್ತು ನನ್ನ ಪತಿಯನ್ನು ಕಂಪೆನಿ ಸಂಬಳ ನೀಡದೆ ನೌಕರಿಯಿಂದ ವಜಾಗೊಳಿಸಿದೆ. ಇದರಿಂದಾಗಿ ಹಣಕಾಸಿನ ತೊಂದರೆ ಎದುರಾಗಿದ್ದು, ಆಹಾರ ಸಾಮಾಗ್ರಿಗಳಿಗೆ ಪರದಾಡುವ ಪರಿಸ್ಥಿತಿಯಿದೆ. ಅಕ್ಕಿ ಎಟಿಎಂನಿಂದ ತುಂಬಾ ಸಹಾಯವಾಗಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.