ರಿಮ್ಸ್‌ನಲ್ಲಿ ಕೋವಿಡ್ ಪರೀಕ್ಷೆ ಸಾಮರ್ಥ್ಯ ದ್ವಿಗುಣ ! ನಿತ್ಯ 950 ಮಾದರಿಗಳ ಪರೀಕ್ಷೆ ಗುರಿ


Team Udayavani, Oct 1, 2020, 4:34 PM IST

ರಿಮ್ಸ್‌ನಲ್ಲಿ ಕೋವಿಡ್ ಪರೀಕ್ಷೆ ಸಾಮರ್ಥ್ಯ ದ್ವಿಗುಣ ! ನಿತ್ಯ 950 ಮಾದರಿಗಳ ಪರೀಕ್ಷೆ ಗುರಿ

ರಾಯಚೂರು: ಜನರಲ್ಲಿ ಕಾಲಕ್ರಮೇಣ ಕೋವಿಡ್ ಸೋಂಕಿನ ಬಗೆಗಿನ ಗಂಭೀರತೆ ಕುಗ್ಗುತ್ತಿದ್ದರೂ, ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳು ಹೆಚ್ಚಾಗುತ್ತಿವೆ. ಈಗ ಇಲ್ಲಿನ ರಾಯಚೂರು ವೈದ್ಯಕೀಯ ವಿಜ್ಞಾನ ಕೇಂದ್ರ (ರಿಮ್ಸ್‌) ಕೊರೊನಾ ಪರೀಕ್ಷೆ ಸಾಮರ್ಥ್ಯವನ್ನು ಎರಡು ಪಟ್ಟು ಹೆಚ್ಚಿಸಿಕೊಂಡಿದೆ.

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ಸೋಂಕಿತರ ಸಂಖ್ಯೆ ನಿತ್ಯ 100ರ ಗಡಿ ದಾಟುತ್ತಲೇ ಬಂದಿದೆ. ಕೆಲವೊಮ್ಮೆ ಆ ಸಂಖ್ಯೆ 200ರ ಗಡಿ ದಾಟಿದೆ. ಇಂಥ ವೇಳೆ ಸೋಂಕಿನ ಪತ್ತೆ ಹಚ್ಚುವ ಸಾಮರ್ಥ್ಯ ಕೂಡ ಹೆಚ್ಚಿಸುವ ಅನಿವಾರ್ಯತೆ ಇತ್ತು. ಇದಕ್ಕೆ ಪೂರಕ ಎನ್ನುವಂತೆ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ರಿಮ್ಸ್‌ಗೆ ಮತ್ತೂಂದು ಅಟೋಮ್ಯಾಟಿಕ್‌ ಆರ್‌ಎನ್‌ ಎಕ್ಸಾಕ್ಟರ್‌ ಹಾಗೂ ಪಿಸಿಆರ್‌ ಯಂತ್ರಗಳನ್ನು ದೇಣಿಗೆ ನೀಡಿದೆ.

ಇದರಿಂದ ಪರೀಕ್ಷಾ ಸಾಮರ್ಥ್ಯ ಈಗ ದುಪ್ಪಟ್ಟಾಗಿದೆ. ಈ ಯಂತ್ರಗಳು ಅಂದಾಜು 35-40 ಲಕ್ಷ ರೂ. ಮೌಲ್ಯದ್ದಾಗಿರಬಹುದು ಎಂದು ಅಂದಾಜಿಸಲಾಗಿದೆ.

180 ಮಾದರಿ ಪರೀಕ್ಷೆ: ರಿಮ್ಸ್‌ನಲ್ಲಿ ಈವರೆಗೆ 35,068 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಕೆಲವೊಂದನ್ನು ಬಳ್ಳಾರಿ, ಇನ್ನೂ ಕೆಲ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಆರೋಗ್ಯ ಇಲಾಖೆ ರ್ಯಾಪಿಡ್‌ ಆಂಟಿಜನ್‌ ಪರೀಕ್ಷೆ ಮಾಡುತ್ತಿದ್ದರೂ ನಿತ್ಯ ನೂರಾರು ಮಾದರಿಗಳನ್ನು ಪರೀಕ್ಷೆ ಮಾಡಬೇಕಾದ ಅನಿವಾರ್ಯತೆ ಇದೆ. ಸೋಂಕು ಸಂಪರ್ಕದಿಂದ ಹರಡುವುದರಿಂದ ಆದಷ್ಟು ತ್ವರಿತಗತಿಯಲ್ಲಿ ವೈರಸ್‌ ಪತ್ತೆ ಹಚ್ಚುವುದು ಜಿಲ್ಲಾಡಳಿತದ ಮುಂದಿದ್ದ ಸವಾಲಾಗಿತ್ತು. ಈ ಮುಂಚೆ ಏಕಕಾಲಕ್ಕೆ 90-100 ಮಾದರಿಗಳನ್ನು ಮಾತ್ರ ಪರೀಕ್ಷೆ ಮಾಡಲಾಗುತ್ತಿತ್ತು. ಇಡೀ ದಿನ ನಿರಂತರ ಪರೀಕ್ಷೆ ಮಾಡಿದರೂ 300-350 ಮಾದರಿಗಳನ್ನು ಪರೀಕ್ಷಿಸಬಹುದಿತ್ತು.

ಆದರೆ, ಕಳೆದ 10 ದಿನಗಳಿಂದ ರಿಮ್ಸ್‌ನಲ್ಲಿ ಏಕಕಾಲಕ್ಕೆ 180 ಮಾದರಿಗಳನ್ನು ಪರೀಕ್ಷೆ ಮಾಡಲಾಗುತ್ತಿದೆ. ಈಗ 950 ಗುರಿ ನೀಡಿದ್ದು, ಎರಡು ಯಂತ್ರಗಳು ಇರುವ ಕಾರಣ ಮಾಡಬಹುದು ಎನ್ನುತ್ತಾರೆ ರಿಮ್ಸ್‌ ವೈದ್ಯಕೀಯ ಸಿಬ್ಬಂದಿ.

ಪರೀಕ್ಷೆ ಹೆಚ್ಚಿಸಲು ಡಿಸಿ ಸೂಚನೆ: ಈಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂವಾದ ನಡೆಸಿ ಮುಂದಿನ ಮೂರು ತಿಂಗಳು ಕೊರೊನಾ ವಿಚಾರದಲ್ಲಿ ಕಟ್ಟೆಚ್ಚರ ವಹಿಸಬೇಕಿದೆ. ಆಯಾ ಜಿಲ್ಲಾಡಳಿತಗಳು ಹೆಚ್ಚು ಜಾಗೃತಿ ವಹಿಸಬೇಕು ಎಂದು ಸೂಚಿಸಿದ್ದರು. ಇದೇ ವಿಚಾರವಾಗಿ ಜಿಲ್ಲೆಯ ಎಲ್ಲ ಅ ಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದ ಡಿಸಿ ಆರ್‌. ವೆಂಕಟೇಶಕುಮಾರ, ಕೊರೊನಾ ಮಾದರಿಗಳ ಪರೀಕ್ಷೆ ಮೂರು ಪಟ್ಟು ಹೆಚ್ಚಿಸುವಂತೆ ತಿಳಿಸಿದ್ದರು. ಪ್ರಾಥಮಿಕ ಪತ್ತೆ ಕಾರ್ಯ ಚುರುಕುಗೊಳ್ಳಬೇಕು. ಶಂಕಿತರ ಪರೀಕ್ಷೆ ಹೆಚ್ಚಾದಾಗ ಮಾತ್ರ ಸೋಂಕಿನ ನಿಯಂತ್ರಣ ಸಾಧ್ಯ ಎಂದು ತಿಳಿಸಿದ್ದರು. ಅದರಂತೆ ಈಗ ರಿಮ್ಸ್‌ನಲ್ಲಿ ಪರೀಕ್ಷೆ ಪ್ರಮಾಣ ಹೆಚ್ಚಾಗಿದೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.