D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ ನಲ್ಲಿ 6 ಬೆಡ್ ಮೀಸಲು
Team Udayavani, May 7, 2024, 6:51 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನದಲ್ಲಿ ಏರಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ ಒಂದು ಹಾಸಿಗೆ, ಸಮುದಾಯ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ತಲಾ 2 ಹಾಸಿಗೆ ಮತ್ತು ವೆನ್ಲಾಕ್ ಆಸ್ಪತ್ರೆಯಲ್ಲಿ 6 ಬೆಡ್ಗಳನ್ನು ಬಿಸಿಲಿಗೆ ಸಂಬಂಧಿಸಿ ಸಮಸ್ಯೆಯಾದವರಿಗೆ ಚಿಕಿತ್ಸೆಗೆಂದು ಸಿದ್ಧವಾಗಿ ಇಟ್ಟುಕೊಳ್ಳಲಾಗಿದೆ. ಆಸ್ಪತ್ರೆಯ ಸಿಬಂದಿಗೂ ವಿವಿಧ ಹಂತದ ತರಬೇತಿ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ತಿಮ್ಮಯ್ಯ ಹೇಳಿದರು.
ಸೋಮವಾರ ಪತ್ರಿಕಾಭವನದಲ್ಲಿ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ದ.ಕ.ದಲ್ಲಿ ಈ ಬಾರಿ ತಾಪಮಾನದಲ್ಲಿ ಅತೀ ಹೆಚ್ಚಿನ ಏರಿಕೆ ಕಂಡು ಬಂದಿದ್ದು, ಕೆಲವು ಕಡೆಗಳಲ್ಲಿ 5 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾಗಿದೆ.
ಇದರಿಂದಾಗಿ ದೇಹದ ತಾಪಮಾನದಲ್ಲಿಯೂ ವ್ಯತ್ಯಯವಾಗಿ ವಿಪರೀತ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆ ಹಿನ್ನೆಲೆಯಲ್ಲಿ ಮುಂದಿನ ಮಳೆಗಾಲದ ವರೆಗೆ ಸಾರ್ವಜನಿಕರು ಸಾಕಷ್ಟು ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ. ನಿರ್ದಿಷ್ಟ ಉಷ್ಣಾಂಶಕ್ಕೆ ಒಗ್ಗಿ ಹೋಗಿದ್ದ ದೇಹದಲ್ಲಿ ಪ್ರಸ್ತುತ ಅಧಿಕ ತಾಪಮಾನದಿಂದ ಚರ್ಮದಲ್ಲಿ ತುರಿಕೆ, ಸುಸ್ತು, ನಿಶ್ಶಕ್ತಿ, ಕುಸಿದು ಬೀಳುವುದು, ಚರ್ಮದಲ್ಲಿ ಗಿಳ್ಳೆ, ಕಾಲುಗಳಲ್ಲಿ ಬಾವು, ಸೆಳೆತ, ತಲೆಸುತ್ತು ಬರುವುದು, ವಾಂತಿ, ಅತಿಯಾದ ದಣಿವು ಮೊದಲಾದವುಗಳು ಉಂಟಾಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆಯ ಅಗತ್ಯವಿದೆ ಎಂದರು.
ಹೀಟ್ಸ್ಟ್ರೋಕ್
ವರದಿಯಾಗಿಲ್ಲ
ಜಿಲ್ಲೆಯಲ್ಲಿ ಇಲ್ಲಿಯ ವರೆಗೆ ಹೀಟ್ಸ್ಟ್ರೋಕ್ನ ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆವರುಸಾಲೆ, ಕೈಗಳಲ್ಲಿ ಬಾವು, ಸುಸ್ತು ಮೊದಲಾದ ಸಮಸ್ಯೆಗಳಿಗೆ ಕೆಲವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪೂರ್ವಾಹ್ನ 11.30ರಿಂದ ಅಪರಾಹ್ನ 3 ಗಂಟೆಯ ವರೆಗಿನ ಬಿಸಿಲಿನ ಓಡಾಟ ತಪ್ಪಿಸಬೇಕು. ಛತ್ರಿ, ಟೋಪಿ, ಕಣ್ಣಿಗೆ ಕಪ್ಪು ಕನ್ನಡಕ, ಹತ್ತಿಯ ಸಡಿಲವಾದ ಬಟ್ಟೆಯನ್ನು ಧರಿಸುವುದು ಉತ್ತಮ ಎಂದು ಡಿಎಚ್ಒ ಸಲಹೆ ನೀಡಿದರು. ಪಾನಕ, ಮಜ್ಜಿಗೆ, ಎಳನೀರು ಸೇವನೆ ಉತ್ತಮ ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ನವೀನ್ಚಂದ್ರ ಕುಲಾಲ್ ಮಾತನಾಡಿ, ಬಿಸಿಲಿನ ನೀರು ಕಡಿಮೆಯಾಗುವುದರಿಂದ ನೀರನ್ನು ಸಂಗ್ರಹಿಸಿ ಇಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಬಹುದು. ಆದ್ದರಿಂದ ನೀರು ಸಂಗ್ರಹಿಸಿ ಇಡುವವರು ಎಚ್ಚರಿಕೆ ವಹಿಸಬೇಕು. ಸದ್ಯ ಜಿಲ್ಲೆಯಲ್ಲಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು
Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ
Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು
Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ