ಶಿವಾಜಿನಗರದಲ್ಲಿ ರಿಜ್ವಾನ್ ಗೆದ್ದರೂ ಪರಿಷತ್ ಸ್ಥಾನ ಕಳೆದುಕೊಳ್ಳಲಿರುವ ಕಾಂಗ್ರೆಸ್
ಮೇಲ್ಮನೆ ಸ್ಥಾನ ಕಳೆದುಕೊಳ್ಳಲಿರುವ ಕಾಂಗ್ರೆಸ್!
Team Udayavani, Dec 9, 2019, 6:24 PM IST
ಬೆಂಗಳೂರು: ಉಪ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ನ ರಿಜ್ವಾನ್ ಅರ್ಷದ್ ಗೆಲುವು ಸಾಧಿಸಿದ್ದರೂ ಅವರಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನ ಕಾಂಗ್ರೆಸ್ಗೆ ಸಿಗುವುದಿಲ್ಲ.
ಕಾಂಗ್ರೆಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಶನ್ ಬೇಗ್ ವಿರುದ್ಧ ಸೇಡು ತೀರಿಸಿಕೊಳ್ಳಲು ವಿರೋಧದ ನಡುವೆಯೂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಅವರು ರಿಜ್ವಾನ್ ಅರ್ಷದ್ಗೆ ಟಿಕೆಟ್ ಕೊಡಿಸಿದ್ದರು. ಮಾಜಿ ಸಚಿವರಾದ ಜಮೀರ್ ಅಹ್ಮದ್, ನಸೀರ್ ಅಹ್ಮದ್ ಸಹಿತ ಎಲ್ಲರೂ ಒಟ್ಟಾಗಿ ಮುಸ್ಲಿಂ ಸಮುದಾಯದ ಮತ ಕಾಂಗ್ರೆಸ್ಗೆ ಬೀಳುವಂತೆ ಮಾಡಿ ಜತೆಗೆ ಹಿಂದೂ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿ ರಿಜ್ವಾನ್ ಅರ್ಷದ್ ಅವರನ್ನು ಗೆಲ್ಲಿಸಿಕೊಂಡಿದ್ದಾರೆ. ಆದರೆ ಅವರಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನ ಕಾಂಗ್ರೆಸ್ಗೆ ಸಿಗದಂತಾಗಿದೆ.
ರಿಜ್ವಾನ್ ಅರ್ಷದ್ ಆವರ ವಿಧಾನ ಪರಿಷತ್ ಸದಸ್ಯತ್ವದ ಅವಧಿ 2022ರವರೆಗೂ ಇದೆ. ಆದರೆ ಇದೀಗ ಅವರು ಶಾಸಕರಾಗಿ ಆಯ್ಕೆ ಆಗಿರುವುದರಿಂದ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ಸ್ಥಾನದ ಚುನಾವಣೆಗಾಗಿ ಅಧಿಸೂಚನೆ ಹೊರಡಿಸಿದರೆ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಾಗಿರುವ ಕಾರಣ ಬಿಜೆಪಿ ಅಭ್ಯರ್ಥಿಯೇ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.
ಇದೀಗ ಉಪ ಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿ ಅಥವಾ ಆರ್.ಶಂಕರ್ ಅವರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ