ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಸುಟ್ಟು ಭಸ್ಮ : ಚಿಕಿತ್ಸೆಗೆ ನಡೆದೇ ಹೋದ ಚಾಲಕ
Team Udayavani, Feb 12, 2022, 1:57 PM IST
ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ವಿದ್ಯುತ್ ಕಂಬ ತುಂಡಾಗಿ ಕಾರಿಗೆ ಬೆಂಕಿ
ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಕೈಗಾರಿಕಾ ಪ್ರದೇಶದ ಟಫೆ ಕಾರ್ಖಾನೆ ಸಮೀಪದ ಎಳ್ಳುಪುರ ರಸ್ತೆಯಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿಂದ ಇಳಿದು ನಡೆದುಕೊಂಡೆ ಚಿಕಿತ್ಸೆಗೆ ತೆರಳಿದ್ದಾನೆ ಎನ್ನಲಾಗಿದೆ. ಬೆಂಕಿ ಹತ್ತಿಕೊಂಡಿರುವ ವಿಷಯ ತಿಳಿದ ಅಗ್ನಿ
ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಕಾರಿನ ಚಾಲಕ ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡುತ್ತಿದ್ದು, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ
ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ವಿದ್ಯುತ್ ಕಂಬ ತುಂಡಾದ ಹಿನ್ನೆಲೆ ಕೈಗಾರಿಕಾ ಪ್ರದೇಶದ ಹಲವೆಡೆ ವಿದ್ಯುತ್ ಅಡಚಣೆ ಯುಂಟಾ ಗಿದ್ದು, ಬೆಸ್ಕಾಂ ಎಇಇ ರೋಹಿತ್ ನೇತೃತ್ವದಲ್ಲಿ ವಿದ್ಯುತ್ ಕಂಬ ಬದಲಿಸುವ ಕಾರ್ಯ ನಡೆಸಿದರು.
ಇದನ್ನೂ ಓದಿ : ಚುನಾವಣಾ ಸುಧಾರಣೆ : ಸುದ್ದಿಗೊಷ್ಠಿಯಲ್ಲಿ ಕಣ್ಣೀರಿಟ್ಟ ಸ್ಪೀಕರ್ ಕಾಗೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು