ದುರಸ್ತಿಯಾಗದ ರಾವಿಹಾಳ ರಸ್ತೆ : ವರ್ಷ ಕಳೆದರೂ ರಸ್ತೆ ಸರಿಪಡಿಸಲು ಮುಂದಾಗದ ತಾಲೂಕಾಡಳಿತ
Team Udayavani, Oct 8, 2020, 6:39 PM IST
ಸಿರುಗುಪ್ಪ: ನಗರದಿಂದ ರಾವಿಹಾಳ್ ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಬರುವ ಬೀರಳ್ಳಿ, ಕಲ್ಲುಕುಟಿಗಿನ ಹಾಳು ಗ್ರಾಮದ
ನಡುವಿನ ರಸ್ತೆಯಲ್ಲಿರುವ ಹಳ್ಳದ ನೀರಿನ ರಭಸಕ್ಕೆ ಸೇತುವೆ ಬಲಭಾಗದ ರಸ್ತೆ ಮತ್ತು ತಡೆಗೋಡೆ ಕೊಚ್ಚಿಹೋಗಿದ್ದು ರಸ್ತೆಯಲ್ಲಿ
ಪ್ರಯಾಣಿಸುವವರು ಆಯತಪ್ಪಿ ಬಿದ್ದರೆ ಜೀವ ಹೋಗುವ ಸಾಧ್ಯತೆ ಹೆಚ್ಚಾಗಿದೆ.
ವಿವಿಧ ಗ್ರಾಮಗಳು ಸೇರಿದಂತೆ ತಾಲೂಕು ಕೇಂದ್ರಕ್ಕೆ ತೆರಳುವವರು ಇದೇ ರಸ್ತೆ ಮೂಲಕ ಸಂಚರಿಸುತ್ತಾರೆ. ಕೃಷಿ ಕೆಲಸ ಕಾರ್ಯಗಳಿಗೆ ತೆರಳುವ ನೂರಾರು ರೈತರು ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಸೇತುವೆ ತಡೆಗೋಡೆ ಮತ್ತು ರಸ್ತೆ ಕೆಲವು ಭಾಗ ಕೊಚ್ಚಿಹೋಗಿದ್ದರೂ ಇಲ್ಲಿವರೆಗೆ ರಸ್ತೆ ರಿಪೇರಿ ಮಾಡಿ ತಡೆಗೋಡೆ ನಿರ್ಮಿಸುವ ಕಾರ್ಯವನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾಡದ ಕಾರಣ ಈ ರಸ್ತೆಯಲ್ಲಿ ಸಂಚರಿಸುವವರು ಹಿಡಿಶಾಪ
ಹಾಕುತ್ತಿದ್ದಾರೆ.
ಕಲ್ಲುಕುಟಿಗಿನಹಾಳು ಗ್ರಾಮದಿಂದ ಬೀರಳ್ಳಿ ಗ್ರಾಮದಲ್ಲಿರುವ ಶಾಲೆಗೆ ವಿದ್ಯಾರ್ಥಿಗಳು ಮತ್ತು ಪಡಿತರ ಧಾನ್ಯಗಳನ್ನು ತರಲು ಸಾರ್ವಜನಿಕರು ಇದೇ ರಸ್ತೆ ಮೂಲಕ ಸಂಚರಿಸುತ್ತಾರೆ. ಬಸರಳ್ಳಿ, ಅಕ್ಕತಂಗೇರಹಾಳು, ಭೈರಗಾಮದಿನ್ನೆ, ಕೊತ್ತಲಚಿಂತ, ನಾಡಂಗ, ಅಗಸನೂರು ಮತ್ತು ಸೀಮಾಂಧ್ರದ ಹರಿವಾಣಂ ಸೇರಿದಂತೆ ಅನೇಕ ಗ್ರಾಮಗಳಿಗೆ ತೆರಳುವವರು ಇದೇ ರಸ್ತೆಯ
ಮೂಲಕ ಸಂಚರಿಸುತ್ತಾರೆ. ಪ್ರತಿನಿತ್ಯವೂ ನೂರಾರು ಜನರು, ದ್ವಿಚಕ್ರ ವಾಹನಗಳು, ಸರಕು ವಾಹನಗಳು ಸಂಚರಿಸುತ್ತವೆ.
ಆದರೂ ಇಲ್ಲಿವರೆಗೆ ಬಿದ್ದಿರುವ ಸೇತುವೆ ತಡೆಗೋಡೆ ಮತ್ತು ಕೊಚ್ಚಿಹೋಗಿರುವ ರಸ್ತೆಯನ್ನು ರಿಪೇರಿ ಮಾಡಿಸುವ ಕಾರ್ಯಕ್ಕೆ
ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಮುಂದಾಗಿಲ್ಲ. ಇದರಿಂದಾಗಿ ಜನರು ಭಯದಲ್ಲಿಯೇ ಸಂಚರಿಸುತ್ತಿದ್ದಾರೆ.
– ಆರ್.ಬಸವರೆಡ್ಡಿ ಕರೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ