ಸರಿಯಾಗಿ ರಸ್ತೆ ನಿರ್ಮಿಸಿ ಪ್ರಯಾಣಿಕರ ಪ್ರಾಣ ಕಾಪಾಡಿ


Team Udayavani, Jul 1, 2022, 6:00 AM IST

ಸರಿಯಾಗಿ ರಸ್ತೆ ನಿರ್ಮಿಸಿ ಪ್ರಯಾಣಿಕರ ಪ್ರಾಣ ಕಾಪಾಡಿ

ದೇಶದಲ್ಲಿ ಉತ್ತಮವಾದ ರಸ್ತೆಗಳಿದ್ದರೆ ಅದರಿಂದ ಅಪಘಾತಗಳನ್ನು ತಪ್ಪಿಸಬಹುದು ಎಂದು ಹೇಳುತ್ತದೆ ಅಂತಾರಾಷ್ಟ್ರೀಯ ಮಟ್ಟದ ಅಧ್ಯಯನ. ಅಂದರೆ, ಇದರ ಅರ್ಥ ರಸ್ತೆ ಅಪಘಾತಕ್ಕೆ ಬೇರೆಲ್ಲ ಕಾರಣಗಳಿಗಿಂತ ಕೆಟ್ಟ ರಸ್ತೆಯೇ ಹೆಚ್ಚು ಕಾರಣ ಎಂದು ಲ್ಯಾನ್ಸೆಟ್‌ ವರದಿ ಹೇಳಿದೆ. ಇದರ ಪ್ರಕಾರ, ವಾರ್ಷಿಕವಾಗಿ ಉತ್ತಮ ರಸ್ತೆಗಳಿಂದಾಗಿ 30 ಸಾವಿರ ಜೀವಗಳನ್ನು ಉಳಿಸಬಹುದು.

ಇದನ್ನು ನಾವು ಬೆಂಗಳೂರಿನಲ್ಲಿಯೂ ಗಮನಿಸಬಹುದು. ಇತ್ತೀಚಿನ ದಿನಗಳಲ್ಲಿ ಉದ್ಯಾನನಗರಿಯಲ್ಲಿ ಸಂಭವಿಸುತ್ತಿರುವ ಬಹುತೇಕ ಅಪಘಾತಗಳಿಗೆ ಕೆಟ್ಟ ರಸ್ತೆ ಅಥವಾ ಗುಂಡಿಗಳೇ ಕಾರಣ ಎಂಬುದು ವೇದ್ಯವಾಗಿದೆ. ಈ ಬಗ್ಗೆ ಸಾಕಷ್ಟು ಆಕ್ರೋಶವೂ ವ್ಯಕ್ತವಾಗಿ, ಇದು ಕರ್ನಾಟಕ ಹೈಕೋರ್ಟ್‌ವರೆಗೂ ತಲುಪಿ ಅಲ್ಲೂ ಬಿಬಿಎಂಪಿ ಬೈಸಿಕೊಂಡಿದೆ. ಅಷ್ಟೇ ಅಲ್ಲ, ಬೆಂಗಳೂರಿನ ರಸ್ತೆಗಳ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮರ್ಯಾದೆ ಹೋಗಿರುವುದನ್ನು ನಾವು ಮನಗಾಣಬೇಕಾಗಿದೆ.

ಮತ್ತೆ ಲ್ಯಾನ್ಸೆಟ್‌ ವರದಿಗೆ ಬರುವುದಾದರೆ, ಭಾರತದಲ್ಲಿನ ರಸ್ತೆ ಅಪಘಾತಗಳಿಗೆ ಕೆಲವು ಅಂಶಗಳನ್ನು ಅದು ಪಟ್ಟಿ ಮಾಡಿದೆ. ಅಂದರೆ, ಅತಿ ವೇಗ, ಕುಡಿದು ವಾಹನ ಚಾಲನೆ, ಹೆಲ್ಮೆಟ್‌ ಹಾಕದೆ ಇರುವುದು, ಸೀಟ್‌ಬೆಲ್ಟ್ ಧರಿಸದೇ ವಾಹನ ಚಾಲನೆ ಮಾಡುವುದರಿಂದ ಅಪಘಾತದಿಂದಾಗಿ ಹೆಚ್ಚು ಮಂದಿ ಸಾಯುತ್ತಿದ್ದಾರೆ. ಅಷ್ಟೇ ಅಲ್ಲ, ವೇಗ ಮಿತಿ ಬಗ್ಗೆ ಆಗಾಗ್ಗೆ ಪರಿಶೀಲನೆ ನಡೆಸುತ್ತಿರುವುದರಿಂದ 20 ಸಾವಿರಕ್ಕೂ ಹೆಚ್ಚು, ಹೆಲ್ಮೆಟ್‌ ಧರಿಸಿ ಪ್ರಯಾಣಿಸಿದ್ದರಿಂದಾಗಿ 5 ಸಾವಿರಕ್ಕೂ ಹೆಚ್ಚು, ಸೀಟ್‌ ಬೆಲ್ಟ್ನಿಂದಾಗಿ 3 ಸಾವಿರಕ್ಕೂ ಹೆಚ್ಚು ಮಂದಿ ಸಾವಿನಿಂದ ಪಾರಾಗಿ¨ªಾರೆ. ಅಂದರೆ ಅಪಘಾತ ಸಂಭವಿಸಿದಾಗ್ಯೂ, ಹೆಲ್ಮೆಟ್‌, ಸೀಟ್‌ಬೆಲ್ಟ್ ಇವರ ಪ್ರಾಣವನ್ನು ಉಳಿಸಿದೆ. ವಿಶೇಷವೆಂದರೆ, ಕುಡಿದು ವಾಹನ ಚಾಲನೆ ಮಾಡಿದ್ದರಿಂದ ಭಾರತದಲ್ಲಿ ಸಾವನ್ನಪ್ಪಿರುವ ಬಗ್ಗೆ ಯಾವುದೇ ಅಂಕಿ ಅಂಶ ಸಿಕ್ಕಿಲ್ಲ.

ಲ್ಯಾನ್ಸೆಟ್‌ ವರದಿಯ ಪ್ರಕಾರ, ಜಾಗತಿಕವಾಗಿ ವರ್ಷಕ್ಕೆ 13.5 ಲಕ್ಷ ಮಂದಿ ಅಪಘಾತಗಳಿಂದಲೇ ಪ್ರಾಣ ಬಿಡುತ್ತಿದ್ದಾರೆ. ಇದರಲ್ಲಿ ಶೇ. 90ರಷ್ಟು ಅಪಘಾತಗಳು ಮಧ್ಯಮ ಆದಾಯ ಹೊಂದಿರುವ ದೇಶಗಳಲ್ಲಿ ಆಗುತ್ತಿವೆ. ಅಂದರೆ, ಭಾರತದಂಥ ದೇಶಗಳಲ್ಲಿಯೇ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ.

ಹಾಗಂತ ತೀರಾ ಮುಂದುವರಿದ ದೇಶಗಳಲ್ಲಿ ಅಪಘಾತಗಳು ಸಂಭವಿಸುತ್ತಿಲ್ಲ ಎಂದೇನಲ್ಲ. ಆದರೆ ಅಲ್ಲಿ ಅಪಘಾತಗಳು ಸಂಭವಿಸಿದರೂ, ಸಾವಿನ ಪ್ರಮಾಣ ಕಡಿಮೆ. ಇದಕ್ಕೆ ಅಲ್ಲಿನ ಉತ್ತಮ ರಸ್ತೆಗಳು ಮತ್ತು ಲೇನ್‌ ಕಾಪಾಡಿಕೊಳ್ಳುವುದು ಕಾರಣ ಎಂದು ವಿಶ್ಲೇಷಿಸಬಹುದು.

ಭಾರತದಂಥ ದೇಶದಲ್ಲಿ ಟ್ರಾಫಿಕ್‌ ನಿಯಮಗಳ ಕುರಿತಂತೆ ಇನ್ನಷ್ಟು ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ಇದೆ. ಕೆಲವೊಂದು ಸಂದರ್ಭಗಳಲ್ಲಿ ಅದರಲ್ಲೂ ಹಳ್ಳಿಗಾಡಿನ ವಿಚಾರದಲ್ಲಿ ಹೆಲ್ಮೆಟ್‌ಗಳು ಕಾಣಸಿಗುವುದೇ ಅಪರೂಪ. ಜತೆಗೆ, ಗ್ರಾಮೀಣ ರಸ್ತೆಗಳ ಸ್ಥಿತಿಯಂತೂ ಹೇಳತೀರದಾಗಿದೆ. ಬೆಂಗಳೂರಿನಲ್ಲಿಯೇ ಗುಂಡಿ ಬಿದ್ದ ರಸ್ತೆಗಳನ್ನು ಸರಿ ಮಾಡಲು ಸಾಕಷ್ಟು ಸಮಯ ತೆಗೆದುಕೊಳ್ಳುವಾಗ ಗ್ರಾಮೀಣ ಪ್ರದೇಶದ ಜನರ ಸಂಕಷ್ಟ ಕೇಳುವವರು ಯಾರು?

ಹೀಗಾಗಿ, ಮೊದಲಿಗೆ ವಾಹನ ಸವಾರರಲ್ಲಿ ಟ್ರಾಫಿಕ್‌ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದು, ಸರಿಯಾಗಿ ರಸ್ತೆ ನಿರ್ಮಾಣ ಮಾಡುವುದು, ವೇಗಮಿತಿ ಕಾಯ್ದುಕೊಳ್ಳುವುದು, ಕುಡಿದು ವಾಹನ ಚಾಲನೆ ಮಾಡುವುದನ್ನು ತಪ್ಪಿಸುವ ಕ್ರಮ ಕೈಗೊಳ್ಳಬೇಕಾಗಿದೆ. ಅದರಲ್ಲೂ ಉತ್ತಮ ರಸ್ತೆ ಮಾಡಿದಲ್ಲಿ ಅರ್ಧದಷ್ಟು ಸಮಸ್ಯೆಗೆ ಪರಿಹಾರ ಸಿಗುವುದು ಖಂಡಿತ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.