ಹಾಳಾದ ರಸ್ತೆಗೆ ಜಲಜೀವನ್‌ ಪರಿಹಾರ!


Team Udayavani, Nov 18, 2021, 1:31 PM IST

16road

ಸಿಂಧನೂರು: ಜಲಜೀವನ್‌ ಮಿಷನ್‌ ಯೋಜನೆಯಡಿ ಮನೆ-ಮನೆಗೆ ಗಂಗೆ ತಲುಪಿಸುವ ಯೋಜನೆಯಡಿ ಸಾರ್ವಜನಿಕ ಸ್ವತ್ತಿಗೆ ಹಾನಿಯಾದರೂ ಅದನ್ನು ಪುನರ್‌ ನಿರ್ಮಿಸುವ ಜವಾಬ್ದಾರಿ ವಹಿಸಲಾಗಿದ್ದು, ತಾಲೂಕಿನ ಸಾಲಗುಂದಾ ಗ್ರಾಮಸ್ಥರು ಹಾಳಾದ ಸಿಸಿ ರಸ್ತೆಗೆ ಮೋಕ್ಷ ಕಲ್ಪಿಸುತ್ತಾರೆಂಬ ನಿರೀಕ್ಷೆಯಲ್ಲಿದ್ದಾರೆ.

ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆಯಡಿ 1500ಕ್ಕೂ ಹೆಚ್ಚು ಕುಟುಂಬಗಳಿಗೆ ಶುದ್ಧ ಕುಡಿವ ನೀರು ಕಲ್ಪಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಅಂದಾಜು 2.24 ಕೋಟಿ ರೂ. ವೆಚ್ಚದಲ್ಲಿ ಪೈಪ್‌ಲೈನ್‌ ಯೋಜನೆ ಗ್ರಾಮದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಪೈಪ್‌ ಲೈನ್‌ ನಿರ್ಮಾಣ ಹಂತದಲ್ಲೇ ಗ್ರಾಮಸ್ಥರಲ್ಲಿ ನಿರಾಸೆ ಮೂಡಿದೆ.

ಸರ್ಕಾರದ ಯೋಜನೆಯಡಿ ಲಕ್ಷಾಂತರ ರೂ. ವ್ಯಯಿಸಿ ಇಲ್ಲಿ ಬೃಹತ್‌ ಕುಡಿವ ನೀರಿನ ಟ್ಯಾಂಕ್‌ ನಿರ್ಮಿಸಿ ಹಲವು ವರ್ಷ ಗತಿಸಿವೆ. ಹಾಗೆ ಕೆಲವೇ ವರ್ಷಗಳ ಹಿಂದೆ ಶುದ್ಧೀಕರಣ ಘಟಕ 25 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದಕ್ಕೂ ಕೂಡ ಪೈಪ್‌ಲೈನ್‌-ಮೋಟರ್‌ ಹಾಕಲಾಗಿದೆ. ಈ ಯೋಜನೆಯಿಂದ ಹನಿ ನೀರು ಕೂಡ ಸಾಲಗುಂದಾ ಗ್ರಾಮಸ್ಥರಿಗೆ ತಲುಪಿಲ್ಲ. ಬಿಲ್‌ ಪಾವತಿಯಾದ ನಂತರ ಗುತ್ತಿಗೆದಾರರು ಕೂಡ ಗ್ರಾಮದ ಕಡೆಗೆ ತಲೆ ಹಾಕಿ ನೋಡಿಲ್ಲ. ಭೌತಿಕ ಪ್ರಗತಿ ತೋರಿಸಿ ಬಿಲ್‌ ವಿದ್ಯೆ ಪ್ರದರ್ಶನ ಮಾಡಿದ್ದಾರೆ. ಇದೀಗ ಕೋಟ್ಯಂತರ ರೂ. ವೆಚ್ಚದ ಯೋಜನೆ ಕೈಗೆತ್ತಿಕೊಂಡಾಗಲೂ ಅದೇ ಹಾದಿ ಹಿಡಿಯುತ್ತಾರೆಂಬ ಅನುಮಾನ ಗ್ರಾಮಸ್ಥರನ್ನು ಕಾಡಲಾರಂಭಿಸಿದೆ.

ಸಿಸಿ ರಸ್ತೆ ದಿವಾಳಿ

ಸಾಲಗುಂದಾ ಗ್ರಾಮದಲ್ಲಿ ಲಕ್ಷಾಂತರ ರೂ. ಸರ್ಕಾರಿ ಅನುದಾನ ಬಳಸಿಕೊಂಡು ನಿರ್ಮಿಸಿದ ಸಿಸಿ ರಸ್ತೆ ಅಗೆಯಲಾಗಿದೆ. ಹೀಗೆ ಅಗೆದ ಬಳಿಕ ಹಲವರು ಅಪಘಾತಕ್ಕೆ ಸಿಲುಕಿದ್ದರಿಂದ ಪೈಪ್‌ ಹಾಕುವ ಮುನ್ನವೇ ಸಿಸಿ ರಸ್ತೆಯ ತಗ್ಗು ಮುಚ್ಚಲಾಗಿದೆ. ಸಹಜವಾಗಿಯೇ ಈ ಬೆಳವಣಿಗೆ ಗ್ರಾಮಸ್ಥರಲ್ಲಿ ಆಕ್ರೋಶ ಮೂಡಿಸಿದೆ. ಗ್ರಾಮದ 6ನೇ ವಾರ್ಡಿನಲ್ಲಿ ಅಗೆದಿರುವ ರಸ್ತೆಯಿಂದ ಹಲವು ಸಂಕಷ್ಟ ಎದುರಾಗಿವೆ. ವೃದ್ಧರು ಬಿದ್ದ ಬಳಿಕ ಆಕ್ರೋಶ ವ್ಯಾಪಕವಾಗಿ ಪೈಪ್‌ ಹಾಕುವ ಮುನ್ನ ತೆಗೆದ ಗುಂಡಿ ಮುಚ್ಚಲಾಗಿದೆ. ಆದರೆ, ದಿವಾಳಿಯಾಗಿರುವ ಸಿಸಿ ರಸ್ತೆ ಯಾರು ನಿರ್ಮಿಸುತ್ತಾರೆಂಬ ಪ್ರಶ್ನೆ ಎದುರಾಗಿದೆ.

ಉಪಗುತ್ತಿಗೆಯೇ ಪರಿಹಾರ

ಸಂಕಷ್ಟ ಎದುರಾಗಿರುವ ಬಗ್ಗೆ ಸಂಕಷ್ಟ ಹೇಳಿಕೊಳ್ಳುವ ಗ್ರಾಮಸ್ಥರು ಕೂಡ ಲಿಖೀತವಾಗಿ ಹೇಳಿಕೆ ನೀಡಲು ಹಿಂದೇಟು ಹಾಕಿದ್ದಾರೆ. ಹಬೀದ್‌ ಖಾದ್ರಿ ಎನ್ನುವ ಗುತ್ತಿಗೆದಾರರಿಗೆ ಈ ಕಾಮಗಾರಿ ಹಂಚಿಕೆಯಾಗಿದ್ದರೂ ಗುತ್ತಿಗೆ ಕೆಲಸದ ಅನುಭವ ಇಲ್ಲದ ಸ್ವಗ್ರಾಮದ ಒಂದಿಬ್ಬರು ಉಸ್ತುವಾರಿ ವಹಿಸಿದ್ದಾರೆ ಎಂದು ಸ್ಥಳೀಯರು ದೂರುತ್ತಾರೆ. ಆದರೆ, ಮನಬಂದಂತೆ ಪೈಪ್‌ ಹಾಕಿ ಮುಚ್ಚಿ ಹಾಕಲು ಹೊರಟ ಪರಿಣಾಮ ಜಲಜೀವನ್‌ ಯೋಜನೆ ಬಗ್ಗೆಯೂ ಗ್ರಾಮಸ್ಥರಲ್ಲಿ ನಿರಾಸೆ ಮೂಡಲಾರಂಭಿಸಿದೆ. ಮೂಲ ಗುತ್ತಿಗೆದಾರರೇ ಗ್ರಾಮಕ್ಕೆ ಹೋಗಿ ನೋಡಿದಾಗಲೇ ಇದರ ಕರ್ಮಕಾಂಡ ಬಯಲಾಗಲಿದ್ದು, ಮನೆ-ಮನೆಗೆ ಗಂಗೆ ಯೋಜನೆ ಬಗ್ಗೆ ಗ್ರಾಮಸ್ಥರನ್ನೇ ವಿಚಾರಿಸಬೇಕಿದೆ. ಅರ್ಧ ಕೋಟಿ ರೂ. ಸುರಿದ ಮೇಲೂ ಹನಿ ನೀರು ಕಾಣದ ಗ್ರಾಮಸ್ಥರಲ್ಲಿ ಆಕ್ರೋಶ ಮಡುಗಟ್ಟಿದ್ದು, ಇದಕ್ಕೆ ಅಧಿಕಾರಿಗಳೇ ಉತ್ತರಿಸಬೇಕಿದೆ.

ನಾವು ಕೂಡ ಸಾಲಗುಂದಾ ಗ್ರಾಮಕ್ಕೆ ಹೋಗಿ ಬಂದಿದ್ದು, ಒಡೆದು ಹೋಗಿರುವ ಸಿಸಿ ರಸ್ತೆ ನಿರ್ಮಿಸಲು ಗುತ್ತಿಗೆದಾರರಿಗೆ ಹೇಳಲಾಗಿದೆ. ಹೀಗಾಗಿ, ಗ್ರಾಮಸ್ಥರು ಆತಂಕ ಪಡಬೇಕಿಲ್ಲ. ಸಿಸಿ ರಸ್ತೆ ಮರು ನಿರ್ಮಿಸಿ ಕೊಡಲಾಗುವುದು. -ಅಶೋಕರೆಡ್ಡಿ, ಎಇಇ, ಗ್ರಾಮೀಣ ನೀರು ಪೂರೈಕೆ ವಿಭಾಗ, ಸಿಂಧನೂರು

-ಯಮನಪ್ಪ ಪವಾರ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.