ರಸ್ತೆ ಸುಧಾರಣೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ : ಸಮಿತಿ ಆರೋಪ
Team Udayavani, Sep 13, 2020, 2:35 PM IST
ಬಾದಾಮಿ: ಬನಶಂಕರಿಯಿಂದ ಬಾದಾಮಿಯವರೆಗೆ ಕೈಗೊಂಡಿರುವ ರಸ್ತೆ ಸುಧಾರಣೆ ಕಾಮಗಾರಿ ಕಳಪೆಯಾಗಿದೆ. ಎರಡೂ ಬದಿಯ ಪಾದಚಾರಿ ರಸ್ತೆ ಕಿರಿದಾಗಿದೆ. ಲೋಕೋಪಯೋಗಿ ಇಲಾಖೆಯಿಂದ 5 ಕೋಟಿ ರೂ.ವೆಚ್ಚದ ಈ ಕಾಮಗಾರಿ ಡಿಪಿಆರ್ ಪ್ರಕಾರ ನಡೆಯುತ್ತಿಲ್ಲ ಎಂದು ಬಾದಾಮಿ ಅಭಿವೃದ್ಧಿ ಹೋರಾಟ ಸಮಿತಿ ಆರೋಪಿಸಿದೆ.
ಪ್ರತಿ ವರ್ಷ ನಡೆಯುವ ಬಾದಾಮಿ-ಬನಶಂಕರಿದೇವಿ ಜಾತ್ರೆಯ ವೇಳೆ ಲಕ್ಷಾಂತರ ಜನ ಭಕ್ತರು ಈ ರಸ್ತೆಯಲ್ಲಿಯೇ ಸಾಗಿ ದೇವಿಯ ದರ್ಶನ ಪಡೆಯುವುದರಿಂದ ಸುಧಾರಣೆ ಕಾಮಗಾರಿ ನಡೆಸಿರುವುದು ಸಂತಸ ತಂದಿದೆ. ಆದರೆ, ಗುಣಮಟ್ಟ ಕಡಿಮೆಯಾಗಿದೆ.
ಪಾದಚಾರಿ ರಸ್ತೆಗೆ ಕರ್ಬಸ್ಟೋನ್ ಅಳವಡಿಸುತ್ತಿಲ್ಲ. ಇದರಿಂದ ವಾಹನಗಳು ಫುಟ್ ಪಾತ್ ರಸ್ತೆಯ ಮೇಲೆಯೇ ಬಂದು ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಕೂಡಲೇ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸಿ ಗುಣಮಟ್ಟದ ಕೆಲಸ ನಡೆಯುವಂತೆ ಕ್ರಮಕೈಗೊಳ್ಳಬೇಕು ಎಂದು ಬಾದಾಮಿ ಅಭಿವೃದ್ಧಿ ಹೋರಾಟ ಸಮಿತಿ ಆಗ್ರಹಿಸಿದೆ.
ಬನಶಂಕರಿ ದೇವಸ್ಥಾನದಿಂದ ಬಾದಾಮಿಯ ರಾಮದುರ್ಗ ಕ್ರಾಸ್ವರೆಗೂ ಕಾಮಗಾರಿ ಮಾಡಬೇಕಿದೆ. ಆದರೆ, ಗಾತ್ರವನ್ನು ಕಡಿತಗೊಳಿಸಿ ಆರಂಭಿಸಲಾಗಿದೆ. ರಸ್ತೆಯ ಎರಡೂ ಬದಿಯಲ್ಲಿ 1 ಮೀಟರ ಡಾಂಬರೀಕರಣ ಮಾಡಲಾಗಿದೆ. ಆದರೆ ಅದರಲ್ಲಿಯೂ 1 ಮೀ ಪೂರ್ಣ ಕೆಲಸ ನಡೆದಿಲ್ಲ. ರಸ್ತೆಯ ಎರಡೂ ಬದಿಯಲ್ಲಿ 2.75ಮೀ ಪಾದಚಾರಿ ರಸ್ತೆ ನಿರ್ಮಿಸಬೇಕು. ಆದರೆ 2.10ಮೀಟರ ಮಾತ್ರ ಮಾಡಲಾಗುತ್ತಿದೆ.
ಸರಕಾರದಿಂದ ಬಂದ ಅನುದಾನ ಸದ್ಬಳಕೆಯಾಗಬೇಕು ಎಂದು ಹೋರಾಟ ಸಮಿತಿ ಆಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ