ರಾಮನಗರ: ಮಾರಕಾಸ್ತ್ರ ತೋರಿಸಿ ದರೋಡೆಗೆ ಹೊಂಚು ಹಾಕುತ್ತಿದ್ದ ತಂಡ ಸೆರೆ


Team Udayavani, Aug 27, 2020, 10:47 AM IST

ರಾಮನಗರ: ಮಾರಕಾಸ್ತ್ರ ತೋರಿಸಿ ದರೋಡೆಗೆ ಹೊಂಚು ಹಾಕುತ್ತಿದ್ದ ತಂಡ ಸೆರೆ

ರಾಮನಗರ: ಮಾರಕಾಸ್ತ್ರಗಳನ್ನು ಝಳಪಿಸಿ ಹಣ, ಒಡವೆ, ದ್ವಿಚಕ್ರ ವಾಹನಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ 6 ಮಂದಿ ಯುವಕರ ತಂಡವನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಬೆಳವಾಡಿ ಅಂಚೆ ಕೂರ್ಗಹಳ್ಳಿ ನಿವಾಸಿಗಳಾದ ಕೆ. ಕೌಶಿಕ್, ವೆಂಕಟೇಶ, ಭರತ, ಮೈಸೂರು ಬೆಳವಾಡಿ ಗ್ರಾಮದ ಸ್ವೀರ್ಪ ಕಾಲೋನಿ ನಿವಾಸಿ ಎಸ್.ಜೀವನ, ಕೂರ್ಗಳ್ಳಿ ಬಳಿ ಫ‌ುಡ್‌ ಕೋರ್ಟಿನಲ್ಲಿ ಕೆಲಸಕ್ಕಿರುವ ಎಂ.ಸುಮಂತಾ, ಕೂರ್ಗಳ್ಳಿ ರಾಮಮಂದಿರದ ಮೇಗಳ ಕೊಪ್ಪದ ನಿವಾಸಿ ಸಚಿನ್‌ ಬಂಧಿತ ಆರೋಪಿಗಳು.

ಆ.25ರ ಬೆಳಗಿನ ಜಾವ 2 ಗಂಟೆಯಲ್ಲಿ ಜಿಲ್ಲೆಯ ಚನ್ನಪಟ್ಟಣದ ಸಂಕಲಗೆರೆ ಗೇಟ್‌ ಬಳಿಯ ಬಿ.ಎಂ.ಹೆದ್ದಾರಿ ರಸ್ತೆಯಲ್ಲಿ ಆರೋಪಿಗಳು ಕಾರಿನಲ್ಲಿ ಬಂದು ಕೈಗಳಲ್ಲಿ ಅಪಾಯಕಾರಿ ಆಯುಧಗಳನ್ನು ಹಿಡಿದು ದುಷ್ಕೃತ್ಯ ನಡೆಸಲು ಹೊಂಚು ಹಾಕುತ್ತಿದ್ದರು. ಈ ಬಗ್ಗೆ ಮಾಹಿತಿ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಚನ್ನಪಟ್ಟಣ ಗ್ರಾಮಾಂತರ ಪಿಎಸ್ ಐ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಕಾರು, ಲಾಂಗ್, ಕಬ್ಬಿಣದ ರಾಡು, ಚಾಕು, ಮೆಣಸಿನಕಾಯಿ ಪುಡಿ ಮತ್ತು ಪ್ಲಾರ್ಸ್ಟ ವಶಕ್ಕೆ ಪಡೆದಿದ್ದಾರೆ.

ಆ.22ರ ಮಧ್ಯರಾತ್ರಿ ಚನ್ನಪಟ್ಟಣ ತಾಲೂಕು ಮತ್ತಿಕೆರೆಶೆಟ್ಟಿಹಳ್ಳಿ ರಸ್ತೆ ಯಲ್ಲಿ ನಡೆದು ಬರುತ್ತಿದ್ದ ವ್ಯಕ್ತಿ ಯೊಬ್ಬರ ಬಳಿಯಿಂದ 5520 ರೂ. ನಗದು, ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಈ ಕೃತ್ಯವೆಸಗಿರುವ ಬಗ್ಗೆ ಪತ್ತೆಯಾಗಿದೆ. ಪೊಲೀಸ್‌ ಹಿರಿಯ ಅಧಿಕಾರಿಗಳು ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಕಾರ್ಯ ವನ್ನು ಶ್ಲಾಘಿಸಿದ್ದಾರೆ.

ಮನೆ ಬೀಗ ಮುರಿದು ನಗದು ಕಳ್ಳತನ
ಕನಕಪುರ: ಮಂಗಳವಾರ ರಾತ್ರಿ ಮನೆ ಬೀಗ ಮುರಿದಿರುವ ಖದೀಮರು ಮನೆಯಲ್ಲಿದ್ದ 35 ಸಾವಿರ ರೂ.ನಗದು ದೋಚಿ ಪರಾರಿಯಾಗಿರುವ ಘಟನೆ ನಗರದ ಟಿಎಪಿಎಂಎಸ್‌ ರಸ್ತೆಯಲ್ಲಿ ನಡೆದಿದೆ. ನಗರದ ವಾಣಿ ಚಿತ್ರಮಂದಿರದ ಪಕ್ಕದ ಟಿಎಪಿ ಸಿಎಂಎಸ್‌ ರಸ್ತೆಯ ಚೆರ್ಚ ಎದುರಿನ ಎಂ.ವಿ. ದಯಾ ನಿಧಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಮನೆ ಮಾಲಿಕರು ಮಾವನ ಮನೆಗೆ ಹೋಗಿದ್ದರು. ಮಂಗಳ ವಾರ ರಾತ್ರಿ ಮನೆ ಬೀಗ ಮುರಿದು ಮನೆಯಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ 35 ಸಾವಿರ ರೂ.ನಗದು ದೋಚಿದ್ದಾರೆ. ಕಳ್ಳತನವಾದ ರಾತ್ರಿ ಕೂಗಳತೆ ದೂರದ ಶಕ್ತಿ ದೇವತೆ ಕೆಂಕೇರ ಮ್ಮನವರ ಗೌರಿ ಕೊಂಡೋತ್ಸವ ಮಧ್ಯರಾತ್ರಿ ವರೆಗೂ ನಡೆದಿದೆ.

ಕಳ್ಳತನವಾದ ಮನೆಯ ಮೊದ ಲನೇ ಮಹಡಿ ಯಲ್ಲಿ ಬಾಡಿಗೆಗೆ ವಾಸವಿದ್ದ ವರು ಅಗ್ನಿ ಕೊಂಡೋತ್ಸವದಲ್ಲಿ ಭಾಗಿಯಾಗಿ ರಾತ್ರಿ 2ಕ್ಕೆ ಮನೆ ಗೆ ಮರಳಿದ್ದಾರೆ. ಆವರೆ ಗೂ ಮನೆ ಯಲ್ಲಿ ಕಳ್ಳತನವಾ ಗಿರಲಿಲ್ಲ. ರಾತ್ರಿ 3ರ ನಂತರ ಕಳ್ಳತನವಾಗಿರಬ ಹುದು ಎಂದು ಮನೆ ಮಾಲಿ ಕರು ಅನುಮಾನ ವ್ಯಕ್ತಪಡಿಸಿದ್ದಾರೆ. ನಗರ ಠಾಣೆ ಎಸ್ ಐ ಲಕ್ಷ್ಮಣ ಗೌಡ ಸ್ಥಳಕ್ಕೆ ಭೇಟಿ ನೀಡಿದ್ದರು. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿತು. ತನಿಖೆ ಮುಂದುವರಿದಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.