ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾದ ಆರ್‌ಟಿಇ ಸೀಟು   

ಆಧಾರ್‌-ಬಿಪಿಎಲ್‌ ಕಾರ್ಡ್‌ ಲಿಂಕ್‌ ಕಡ್ಡಾಯ ಹಿನ್ನೆಲೆ ಯೋಜನೆಯಿಂದ ದೂರವಾದ ಬಹುತೇಕ ಪೋಷಕರು

Team Udayavani, Jun 17, 2022, 3:29 PM IST

17

ಹಾವೇರಿ: ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಆರ್‌ಟಿಇ ಅಡಿ ಭರ್ತಿ ಆಗುತ್ತಿದ್ದ ಸೀಟುಗಳನ್ನು ಪಡೆಯಲು ಈ ಹಿಂದೆ ವಿದ್ಯಾರ್ಥಿ ಪೋಷಕರ ನಡುವೆ ನಡೆಯುತ್ತಿದ್ದ ನೂಕುನುಗ್ಗಲು ಈಗ ಇಲ್ಲವಾಗಿದ್ದು, ಜಿಲ್ಲೆಯಲ್ಲಿ ಆರ್‌ಟಿಇ ಸೀಟುಗಳು ಮಾತ್ರ ಈಗ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ.

ಹೌದು, ಕಳೆದ ಮೇ ತಿಂಗಳ 16ರಿಂದಲೇ 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಮಕ್ಕಳ ದಾಖಲಾತಿ ಸಹ ಚುರುಕುಗೊಂಡಿದೆ. ಆದರೆ, ಸರ್ಕಾರ ಆರ್‌ಟಿಇ ಕಾರ್ಯಕ್ರಮ ಅನುಷ್ಠಾನದಲ್ಲಿ ತಂದ ಬದಲಾವಣೆ ಹಾಗೂ ಹೊಸ ಬಿಗಿ ನಿಯಮಗಳ ಹಿನ್ನೆಲೆಯಲ್ಲಿ ಆರ್‌ಟಿಇ ಅಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಮಂಜೂರಾಗಿರುವ 514 ಸೀಟುಗಳ ಪೈಕಿ ಇದುವರೆಗೆ ಭರ್ತಿ ಆಗಿದ್ದು ಬರೀ 11 ಮಾತ್ರ.

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಜಿಲ್ಲೆಗೆ 2022-23ನೇ ಸಾಲಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ 514 ಸೀಟುಗಳನ್ನು ಆರ್‌ಟಿಇ ಅಡಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ದಾಖಲಾತಿಗೆ ಮಂಜೂರು ಮಾಡಿದೆ. ಈಗಾಗಲೇ ಮೊದಲ ಹಂತದಲ್ಲಿ ನಡೆದ ಪ್ರಕ್ರಿಯೆಯಲ್ಲಿ 303 ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದರೂ ಇದುವರೆಗೆ ಶಾಲೆಗೆ ದಾಖಲಾಗಿರುವ ಮಕ್ಕಳ ಸಂಖ್ಯೆ ಬರೀ 11 ಮಾತ್ರ. ಆರ್‌ಟಿಇ ಸೀಟು ಸಿಕ್ಕರೂ ಅನೇಕ ವಿದ್ಯಾರ್ಥಿಗಳ ಪೋಷಕರು ಖಾಸಗಿ ಶಾಲೆಗೆ ಇನ್ನೂ ಮಕ್ಕಳನ್ನು ದಾಖಲಿಸಲು ಆಸಕ್ತಿ ತೋರದಿರುವುದು ಅಂಕಿ ಅಂಶಗಳಿಂದ ದೃಢಪಟ್ಟಿದೆ.

ಕಠಿಣ ನಿಯಮಗಳೇ ತೊಡಕು: ಖಾಸಗಿ ಶಾಲೆಗಳವರು ಆರ್‌ಟಿಇ ಯೋಜನೆಯನ್ನು ದಂಧೆಯಾಗಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ 2019ರಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಯಿರುವ ಅರ್ಧ ಕಿಲೋ ಮೀಟರ್‌ ವ್ಯಾಪ್ತಿ ಅಥವಾ ಒಂದು ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಿದ್ದರೆ ಅಂತಹ ಖಾಸಗಿ ಶಾಲೆಗೆ ಆರ್‌ಟಿಇ ಕೋಟಾ ರದ್ದುಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅರ್ಧ ಭಾಗದಷ್ಟು ಖಾಸಗಿ ಶಾಲೆಗಳಿಗೆ ಈ ಕೋಟಾ ಲಭಿಸಲಿಲ್ಲ.

ಈ ಸಮಸ್ಯೆಯ ಜತೆಗೆ ಆರ್‌ಟಿಇ ಪ್ರವೇಶಕ್ಕೆ ಆಧಾರ್‌, ಬಿಪಿಎಲ್‌ ಕಾರ್ಡ್‌ ಕಡ್ಡಾಯಗೊಳಿಸಿ ಲಿಂಕ್‌ ಕೊಡಿಸಿದ ಪರಿಣಾಮ ಅನೇಕ ಪೋಷಕರಿಗೆ ಆರ್‌ ಟಿಇ ಯೋಜನೆ ಲಭ್ಯವಾಗಲಿಲ್ಲ. ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಕೋಟಾದಲ್ಲಿ ಪ್ರವೇಶ ಪಡೆದ ಮಕ್ಕಳನ್ನು ಇನ್ನುಳಿದ ಮಕ್ಕಳು ನೋಡುವ ದೃಷ್ಟಿಯೇ ಬೇರೆಯಾದ ಕಾರಣ ಬೇಸತ್ತ ಪೋಷಕರು ಆರ್‌ ಟಿಇಯಿಂದ ದೂರ ಸರಿಯುತ್ತಿದ್ದಾರೆ ಎನ್ನಲಾಗುತ್ತಿದೆ.

ಆರ್‌ಟಿಇ ಸೀಟಿಗೆ ಬೇಡಿಕೆ ಕುಸಿತ: ಎಲ್ಲರಿಗೂ ಶಿಕ್ಷಣ ಎಂಬ ಧ್ಯೇಯದಿಂದ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೂ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲೂ ಶಿಕ್ಷಣ ದೊರೆಯಲಿ ಎಂಬ ಉದ್ದೇಶದಿಂದ 2019ರಲ್ಲಿ ಕೇಂದ್ರ ಸರ್ಕಾರ ಆರ್‌ಟಿಇ ಜಾರಿಗೊಳಿಸಿತ್ತು. ಈ ಕಾಯ್ದೆಯಡಿ ಯಾವುದೇ ಮಗು ಸರ್ಕಾರಿ ಕೋಟಾದಡಿ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯಲು ಅನುಕೂಲ ಕಲ್ಪಿಸಿಕೊಡಲಾಗಿತ್ತು. ಆದರೆ, 2019ರಲ್ಲಿ ತಂದ ತಿದ್ದುಪಡಿ ಬಳಿಕ ಬೇಡಿಕೆ ಕುಸಿದಿದೆ. ಇದಕ್ಕೆ ಪ್ರವೇಶಾತಿಯಲ್ಲಿ ಇರುವ ಹಲವು ತೊಡಕುಗಳೇ ಕಾರಣ ಎಂದು ಪೋಷಕರು ದೂರುತ್ತಾರೆ.

ಮಕ್ಕಳ ನೋಡುವ ದೃಷ್ಟಿಯೇ ಬೇರೆ: ಆರ್‌ಟಿಇ ಅಡಿ ಸೀಟು ಸಿಕ್ಕರೂ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್‌ಟಿಇ ಮಕ್ಕಳನ್ನು ಶಾಲೆಯಲ್ಲಿ ನೋಡುವ ದೃಷ್ಟಿಕೋನ ಬೇರೆಯೇ ಆಗಿದ್ದು, ಜೊತೆಗೆ ಸರ್ಕಾರ ಆರ್‌ಟಿಇ ಪ್ರವೇಶಕ್ಕೆ ರೂಪಿಸಿರುವ ಹಲವು ಬಿಗಿ ಕ್ರಮಗಳಿಂದ ಆಸಕ್ತರಿಗೆ ಸೀಟುಗಳು ಲಭ್ಯವಾಗುತ್ತಿಲ್ಲ ಎಂಬ ಮಾತುಗಳು ವ್ಯಕ್ತವಾಗುತ್ತಿವೆ. ಅಲ್ಲದೇ, ಶಾಲಾ ಶುಲ್ಕ ಬಿಟ್ಟು ಆರ್‌ಟಿಇ ಮಕ್ಕಳಿಂದಲೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸಮವಸ್ತ್ರ, ಪಠ್ಯ, ನೋಟ್‌ಬುಕ್‌ ಹೆಸರಲ್ಲಿ ದುಬಾರಿ ಶುಲ್ಕ ವಿ ಧಿಸುತ್ತಿರುವುದರಿಂದಲೇ ಈಗ ಆರ್‌ಟಿಇ ಸೀಟುಗಳ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಆಸಕ್ತಿ ಕಳೆದುಕೊಂಡಿದ್ದಾರೆ.

2022-23ನೇ ಸಾಲಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಗೆ 514 ಸೀಟುಗಳು ಆರ್‌ಟಿಇ ಅಡಿ ಮಂಜೂರಾಗಿವೆ. ಆದರೆ, ಇದುವರೆಗೆ ಜಿಲ್ಲೆಯಲ್ಲಿ 11 ವಿದ್ಯಾರ್ಥಿಗಳು ಮಾತ್ರ ಆರ್‌ಟಿಇ ಕೋಟಾದಡಿ ಖಾಸಗಿ ಶಾಲೆಗಳಿಗೆ ದಾಖಲಾಗಿದ್ದಾರೆ. ಈ ಹಿಂದೆ ಖಾಸಗಿ ಶಾಲೆಯವರು ತಮಗೆ ಇಷ್ಟ ಬಂದಂತೆ ಮಕ್ಕಳನ್ನು ಆರ್‌ಟಿಇ ಅಡಿ ದಾಖಲಿಸಿ ಕೊಳ್ಳುತ್ತಿದ್ದರು. ಕಠಿಣ ನಿಯಮಗಳು ಜಾರಿಯಾದ ನಂತರ ಅವು ಪೋಷಕರಿಗೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳವರಿಗೂ ಕಷ್ಟವಾಗಿ ಪರಿಣಮಿಸಿವೆ. –ಬಿ.ಎಸ್‌.ಜಗದೀಶ್ವರ, ಡಿಡಿಪಿಐ, ಹಾವೇರಿ

-ವೀರೇಶ ಮಡ್ಲೂರ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.