ನೆರೆಯಿಂದ ಶಕ್ತಿ ಕಳೆದುಕೊಂಡ ಆರ್‌ಟಿಪಿಎಸ್‌!


Team Udayavani, Nov 13, 2019, 3:08 AM IST

nereyida

ರಾಯಚೂರು: ಜನರ ಬದುಕಿನ ಮೇಲೆ ಬರೆ ಎಳೆದ ನೆರೆ, ವಿದ್ಯುತ್‌ ಉತ್ಪಾದನೆಗೆ ಮಾತ್ರ ವರವಾಗಿ ಪರಿಣಮಿಸಿದೆ. ಕಳೆದೆರಡು ತಿಂಗಳಲ್ಲಿ ಜಲಮೂಲಗಳಿಂದ ವಿದ್ಯುತ್‌ ಉತ್ಪಾದನೆ ವ್ಯಾಪಕವಾಗಿ ಹೆಚ್ಚಾಗಿದ್ದು, ಶಾಖೋತ್ಪನ್ನ ಕೇಂದ್ರಗಳ ಹೊರೆ ತಗ್ಗಿಸಿದೆ. ರಾಜ್ಯದಲ್ಲಿ ಮಳೆ ಇಲ್ಲವಾದರೆ ಶಾಖೋತ್ಪನ್ನ ಕೇಂದ್ರಗಳ ಮೇಲೆ ಒತ್ತಡ ಹೆಚ್ಚುವುದು ಸಾಮಾನ್ಯ.

ಬೇಸಿಗೆಯಲ್ಲಂತೂ ಬೇಡಿಕೆ ಮಿತಿ ಮೀರುತ್ತದೆ. ಆಗ ಯಾವೊಂದು ಘಟಕಗಳಿಗೂ ವಿಶ್ರಾಂತಿ ಇರಲ್ಲ. ಆದರೆ, ಈ ಬಾರಿ ಸುರಿದ ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ, ಅಲ್ಲಿನ ಜಲಸಂಪನ್ಮೂಲಗಳಿಂದ ವಿದ್ಯುತ್‌ ಉತ್ಪಾದನೆ ಹೆಚ್ಚಾಗುತ್ತಿದೆ. ಈ ಕಾರಣಕ್ಕೆ ಆರ್‌ಟಿಪಿಎಸ್‌, ಬಿಟಿಪಿಎಸ್‌ ಸೇರಿದಂತೆ ಇನ್ನಿತರ ಶಾಖೋತ್ಪನ್ನ ಕೇಂದ್ರಗಳಿಗೆ ಕೆಲವೊಮ್ಮೆ ಕೆಲಸ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ.

ಏಳು ಘಟಕ ಬಂದ್‌: ರಾಜ್ಯದ ಯಾವ ಘಟಕ ವಿರಮಿಸಿದರೂ ರಾಯಚೂರು ಶಾಖೋತ್ಪನ್ನ ಕೇಂದ್ರ ಮಾತ್ರ ಸಕ್ರಿಯವಾಗಿರುತ್ತದೆ. ಆದರೆ, ಮೊಟ್ಟ ಮೊದಲ ಬಾರಿಗೆ ಅ.27ರಂದು ಎಂಟರಲ್ಲಿ ಏಳು ಘಟಕಗಳನ್ನು ಸ್ಥಗಿತಗೊಳಿಸಲಾಗಿತ್ತು. ಅಂದು ಅತಿ ಕಡಿಮೆ ವಿದ್ಯುತ್‌ ಉತ್ಪಾದನೆ ಮಾಡಲಾಗಿತ್ತು. 1,600 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯದ ಆರ್‌ಟಿಪಿಎಸ್‌ ಕೇವಲ ಒಂದು ಘಟಕವನ್ನು ನಾಮ್‌ಕಾವಾಸ್ತೆ ಎನ್ನುವಂತೆ ನಡೆಸಿತ್ತು.

ಸೋಲಾರ್‌-ಪವನ ಶಕ್ತಿ: ರಾಜ್ಯದಲ್ಲಿ ಸೋಲಾರ್‌, ಪವನಶಕ್ತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಕ್ರಮೇಣ ಶಾಖೋತ್ಪನ್ನ ಕೇಂದ್ರಗಳ ಬಳಕೆಗೆ ಕಡಿವಾಣ ಹಾಕುವ ಚಿಂತನೆ ಕೂಡ ನಡೆದಿದೆ ಎನ್ನುತ್ತವೆ ಮೂಲಗಳು. ಸುಮಾರು 10 ಸಾವಿರ ಮೆಗಾವ್ಯಾಟ್‌ಗೂ ಅ ಧಿಕ ಪ್ರಮಾ ಣದ ವಿದ್ಯುತ್‌ನ್ನು ಸೋಲಾರ್‌ ಮತ್ತು ಪವನ ಶಕ್ತಿಯಿಂದ ಪಡೆಯಲಾಗುತ್ತಿದೆ. ಇವುಗಳನ್ನು ಬೇಸಿಗೆಯಲ್ಲಿ ಹೆಚ್ಚು ಬಳಸಿಕೊಳ್ಳುವ ಚಿಂತನೆ ಸರ್ಕಾರದ್ದು. ಇನ್ನು ಈ ಬಾರಿ ರಾಜ್ಯದಲ್ಲಿ ಮಳೆ ಚೆನ್ನಾಗಿ ಸುರಿದ ಪರಿಣಾಮ ಈಗಾಗಲೇ ಶರಾವತಿ, ನಾಗಝರಿ, ಕದ್ರ, ಗೇರುಸೊಪ್ಪ, ಜೋಗ, ಕೊಡಸಳ್ಳಿ ಸೇರಿ ಅನೇಕ ಕಡೆ ಜಲಶಕ್ತಿ ಉತ್ಪಾದನೆ ಚೆನ್ನಾಗಿ ಆಗುತ್ತಿದೆ.

ಖರ್ಚು ಜಾಸ್ತಿ: ಶಾಖೋತ್ಪನ್ನ ಕೇಂದ್ರಗಳಿಂದ ಉತ್ಪಾದಿ ಸುವ ವಿದ್ಯುತ್‌ಗೆ ಖರ್ಚು ಜಾಸ್ತಿ. ಇಲ್ಲಿ ಒಂದು ಯೂನಿಟ್‌ಗೆ 3ರಿಂದ 3.5 ರೂ.ಖರ್ಚಾಗುತ್ತದೆ. ಆದರೆ, ಜಲಸಂಪನ್ಮೂಲ, ಪವನಶಕ್ತಿ, ಸೋಲಾರ್‌ಗೆ ಹೋಲಿಸಿ ದರೆ ಇದು ದುಪ್ಪಟ್ಟು ಎಂದೇ ಹೇಳಬೇಕು. ಅಲ್ಲಿ ಒಂದರಿಂದ ಒಂದೂವರೆ ರೂ.ಗೆ ಯೂನಿಟ್‌ ವಿದ್ಯುತ್‌ ಉತ್ಪಾದಿಸಬಹುದಾಗಿದೆ. ಹೀಗಾಗಿ, ಸರ್ಕಾರದ ಚಿತ್ತ ಈಗ ಅತ್ತ ವಾಲುತ್ತಿದೆ. ಬೇಸಿಗೆಯಲ್ಲಿ ಜಲಸಂಪನ್ಮೂಲ, ಪವನ ಶಕ್ತಿಯಿಂದ ಉತ್ಪಾದನೆ ತಗ್ಗುವುದರಿಂದ ಶಾಖೋತ್ಪನ್ನ ಕೇಂದ್ರಗಳೇ ಆಧಾರವಾಗಲಿವೆ. ಆದರೂ ಕಳೆದ ವರ್ಷ ಏಪ್ರಿಲ್‌, ಮೇನಲ್ಲಿಯೇ ಬೇಡಿಕೆ ಕುಸಿದಿತ್ತು. ಹಿಂದೆಯೆಲ್ಲ ವರ್ಷವಿಡೀ ಬೇಡಿಕೆ ಇರುತ್ತಿತ್ತು. ಆದರೆ, ಈಗ ಬೇಸಿಗೆಗೆ ಮಾತ್ರ ಸೀಮಿತಗೊಳ್ಳುತ್ತಿದೆ ಎನ್ನುತ್ತಾರೆ ಕೇಂದ್ರದ ಅಧಿಕಾರಿಗಳು.

ರಾಜ್ಯದಲ್ಲಿ ಈಗ ಸೋಲಾರ್‌, ಪವನಶಕ್ತಿ ಹಾಗೂ ಜಲಸಂಪನ್ಮೂಲದಿಂದ ಹೆಚ್ಚಿನ ವಿದ್ಯುತ್‌ ಪಡೆಯುವುದರಿಂದ ಶಾಖೋತ್ಪನ್ನ ಕೇಂದ್ರಗಳಿಗೆ ಬೇಡಿಕೆ ಕುಗ್ಗಿದೆ. ಈ ಬಾರಿ ಮಳೆ ಪ್ರಮಾಣ ಹೆಚ್ಚಾದ ಕಾರಣ ಅ.27ರಂದು ಏಳು ಘಟಕಗಳನ್ನು ಸ್ಥಗಿತಗೊಳಿಸಲಾ ಗಿತ್ತು. ಈಗಿನ ಪರಿಸ್ಥಿತಿಯನ್ನು ಅವಲೋಕಿಸಿದರೆ ಬೇಸಿಗೆಯಲ್ಲೂ ನಮಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಕಡಿಮೆ. ಆದರೆ, ನಮ್ಮ ಎಲ್ಲ ಘಟಕ ಗಳು ಉತ್ಪಾದನೆಗೆ ಸಿದ್ಧವಾ  ಗಿದ್ದು, ಅಗತ್ಯದಷ್ಟು ವಿದ್ಯುತ್‌ ಪೂರೈಸಲು ಸಿದ್ಧವಾಗಿದ್ದೇವೆ.
-ಆರ್‌.ವೇಣುಗೋಪಾಲ್‌, ಕಾರ್ಯನಿರ್ವಾಹಕ ನಿರ್ದೇಶಕ, ಆರ್‌ಟಿಪಿಎಸ್‌

* ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.