ರುದ್ರಪ್ಪ ಲಮಾಣಿ ವಿರುದ್ಧ ಆಧಾರರಹಿತ ಆರೋಪ ಸಲ್ಲದು
Team Udayavani, Nov 12, 2020, 3:36 PM IST
ಹಾವೇರಿ: ಮಾಜಿ ಸಚಿವ ರುದ್ರಪ್ಪ ಲಮಾಣಿ ಕುರಿತು ಆಧಾರರಹಿತ ಆರೋಪ ಮಾಡಿರುವ ಶಾಸಕ ನೆಹರು ಓಲೇಕಾರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಘಟಕದಿಂದ ಬುಧವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೇವಲ ರಾಜಕೀಯ ದೃಷ್ಟಿ ಕೋನವನ್ನಿಟ್ಟುಕೊಂಡು ಇಡೀ ಬಂಜಾರ ಸಮುದಾಯವನ್ನು ಗುರಿಯಾಗಿಸಿ ಕೊಂಡು ಅವರ ಗೌರವಕ್ಕೆ ಚ್ಯುತಿ ತರುವ ಹಾಗೂ ಚಾರಿತ್ರ್ಯ ವಧೆ ಮಾಡುವ ದುರುದ್ದೇಶದಿಂದ ಆಧಾರರಹಿತ ಆರೋಪ ಮಾಡಿದ್ದಾರೆ. ಇದು ಶಾಸಕರಿಗೆ ಶೋಭೆ ತರುವಂತಹುದಲ್ಲ. ಮುಖ್ಯಮಂತ್ರಿಗಳು ಸಾಂವಿಧಾನಿಕವಾಗಿ ಹಾಗೂ ಕಾನೂನಾತ್ಮಕವಾಗಿ ಶಾಸಕ ನೆಹರು ಓಲೇಕಾರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಬಂಜಾರ ಸಮುದಾಯವು ತಮ್ಮನ್ನು ಒತ್ತಾಯಿಸುತ್ತದೆ ಎಂದು
ಮನವಿಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಬಂಜಾರ ಸಮುದಾಯದ ಮುಖಂಡರಾದ ಪೀರಸ್ವಾಮಿ ಲಮಾಣಿ, ಸಿ.ಸಿ. ಲಮಾಣಿ,
ಸುರೇಶ ಲಮಾಣಿ, ಹನುಮಂತ ಲಮಾಣಿ ಇದ್ದರು.
ಇದನ್ನೂ ಓದಿ:ಲಾಟರಿ ಹೆಸರಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಜನರಿಗೆ ಪಂಗನಾಮ! 28 ಲಕ್ಷಕ್ಕೂ ಅಧಿಕ ವಂಚನೆ
ಜಿಲ್ಲೆಯಾದ್ಯಂತ ಹೋರಾಟ ಎಚ್ಚರಿಕೆ
ರಾಣೆಬೆನ್ನೂರು: ಶಾಸಕ ನೆಹರು ಓಲೇಕಾರ ಅವರು ಮಾಜಿ ಸಚಿವ ರುದ್ರಪ್ಪ ಲಮಾಣಿ ಕುರಿತು ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಬಂಜಾರ ಸಮುದಾಯ ಮುಖಂಡ ಹಾಗೂ ರೈತ ಮುಖಂಡ ಕೃಷ್ಣಮೂರ್ತಿ ಲಮಾಣಿ ತಿಳಿಸಿದ್ದಾರೆ. ಈ ಕುರಿತು
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರುದ್ರಪ್ಪ ಲಮಾಣಿ ಅವರು ಸಭ್ಯ ರಾಜಕಾರಣಿಯಾಗಿದ್ದು, ಗ್ರಾಪಂ ಮಟ್ಟದಿಂದ ರಾಜಕೀಯಕ್ಕೆ ಧುಮುಕಿ ಶಾಸಕರಾಗಿ, ಸಚಿವರಾಗಿ, ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ ಜನಪ್ರಿಯತೆ ಗಳಿಸಿದ್ದಾರೆ. ನೆಹರು ಓಲೇಕಾರ ಅವರು ಈ ರೀತಿ ಇಲ್ಲಸಲ್ಲದ ಆಪಾದನೆ ಮಾಡುತ್ತಿರುವುದು ಸರಿಯಲ್ಲ. ರಾಜಕೀಯದಲ್ಲಿ ಏಳು-ಬೀಳುಗಳು ಸಹಜ.
ಒಂದು ವೇಳೆ ರುದ್ರಪ್ಪ ಲಮಾಣಿ ಅವರ ಮಗ ತಪ್ಪು ಮಾಡಿದ್ದಲ್ಲಿ ಅವರ ಮೇಲೆ ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ. ಅದಕ್ಕಾಗಿ
ರುದ್ರಪ್ಪ ಲಮಾಣಿ ತೇಜೋವಧೆ ಮಾಡುವುದು ಸರಿಯಲ್ಲ. ಇದೇ ರೀತಿ ಮುಂದುವರೆದರೆ ಬಂಜಾರ ಸಮುದಾಯವು
ಜಿಲ್ಲೆಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ