ಕೋವಿಡ್ ನಿಯಂತ್ರಣಕ್ಕಾಗಿ ವೈದ್ಯರು, ಅಧ್ಯಾಪಕರಿಗೆ ಲಸಿಕೆ ನೀಡಲು ರಷ್ಯಾ ಸಜ್ಜು


Team Udayavani, Aug 2, 2020, 3:01 PM IST

ಕೋವಿಡ್ ನಿಯಂತ್ರಣಕ್ಕಾಗಿ ವೈದ್ಯರು, ಅಧ್ಯಾಪಕರಿಗೆ ಲಸಿಕೆ ನೀಡಲು ರಷ್ಯಾ ಸಜ್ಜು

ಮಾಸ್ಕೋ: ಕೋವಿಡ್‌ ಸೋಂಕು ಇನ್ನಿಲ್ಲದಂತೆ ಏರಿಕೆ ಕಾಣುತ್ತಿರುವಂತೆ, ಅದರ ನಿಯಂತ್ರಣಕ್ಕಾಗಿ ಲಸಿಕೆ ಸಿದ್ಧಪಡಿಸಿದ್ದೇವೆ ಎಂದು ಹೇಳುತ್ತಿರುವ ರಷ್ಯಾ ಈಗ ಅದನ್ನು ಜನರಿಗೆ ನೀಡಲು ಮುಂದಾಗಿದೆ. ಪ್ರಯೋಗಗಳು ಮುಗಿದು, ಆರಂಭದಲ್ಲಿ ವೈದ್ಯರು ಮತ್ತು ಅಧ್ಯಾಪಕರಿಗೆ ಲಸಿಕೆ ನೀಡಲಾಗುವುದು ಎಂದು ರಷ್ಯಾ ಆರೋಗ್ಯ ಸಚಿವ ಮಿಖಾಯಲ್‌ ಮುರಶೊ ಅವರು ಹೇಳಿದ್ದಾರೆ.

ರಷ್ಯಾ ಸರಕಾರಿ ಸ್ವಾಮ್ಯದ ಸಂಶೋಧನ ಕೇಂದ್ರ ಪ್ರಯೋಗಗಳನ್ನು ಪೂರ್ಣಗೊಳಿಸಿದೆ. ಇದರ ಕಾಗದ ಪತ್ರಗಳು ಸಿದ್ಧಗೊಂಡಿದ್ದು, ನೋಂದಣಿಯಷ್ಟೇ ಬಾಕಿ ಇವೆ. ಗಾಮಲೆಯಾ ಇನ್‌ಸ್ಟಿಟ್ಯೂಟ್‌ ಇದನ್ನು ಸಿದ್ಧಪಡಿಸಿದ್ದು, ಅಕ್ಟೋಬರ್‌ ವೇಳೆಗೆ ಸಾಮೂಹಿಕ ಲಸಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಎಲ್ಲರಿಗೂ ಲಸಿಕೆ ತಲುಪುವಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಹೆಚ್ಚಿನ ಖಚಿತತೆಗಾಗಿ ಇನ್ನೂ ಒಂದೂವರೆ ತಿಂಗಳು ಲಸಿಕೆಯ ಪ್ರಯೋಗ ನಡೆಯಲಿದೆ ಎಂದೂ ಹೇಳಿದ್ದಾರೆ.

ಇದಕ್ಕೂ ಮೊದಲೇ ರಷ್ಯಾ ಆ.10 ಅಥವಾ 12ರ ಒಳಗಾಗಿ ಜಗತ್ತಿನ ಮೊದಲ ಕೋವಿಡ್‌ ಲಸಿಕೆಯ ಬಗ್ಗೆ ನೋಂದಣಿ ಮಾಡಿಕೊಳ್ಳುವುದಾಗಿ ಹೇಳಿಕೊಂಡಿತ್ತು.

ಒಂದೊಮ್ಮೆ ನೋಂದಣಿಯಾದರೆ ಏಳು ಅಥವಾ ಹತ್ತು ದಿನಗಳ ಒಳಗಾಗಿ ಲಸಿಕೆಯನ್ನು ಬಿಡುಗಡೆ ಮಾಡಲು ಮಾಸ್ಕೋದ ಗಾಮಲೆಯಾ ಇನ್‌ಸ್ಟಿಟ್ಯೂಟ್‌ಗೆ ಅನುಮತಿ ಸಿಗಲಿದೆ.

ಈ ಮೊದಲು ಮಾನವ ಪ್ರಯೋಗಗಳು ಸರಿಯಾಗಿ ಆಗಿಲ್ಲ ಎಂಬ ಆರೋಪವೂ ಈ ಲಸಿಕೆ ತಯಾರಕರ ಮೇಲಿತ್ತು. ಆದರೆ ಲಸಿಕೆ ಪ್ರಯೋಗ ಸರಿಯಾದ ಅಧ್ಯಯನ ವಿಧಾನಗಳನ್ವಯವೇ ಆಗಿದೆ ಎಂದು ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿತ್ತು. ಲಸಿಕೆಯಲ್ಲಿ ರಷ್ಯಾದ ಸರಕಾರವೂ ಹೂಡಿಕೆ ಮಾಡಿದೆ.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.