ಜಾತ್ರೆಯಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ : ಪೊಲೀಸರಿಂದ ಕಾರ್ಯಾಚರಣೆ
Team Udayavani, Apr 5, 2022, 3:09 PM IST
ಸಾಗರ : ನಗರದ ಐತಿಹಾಸಿಕ ಪ್ರಸಿದ್ಧವಾದ ಮಹಾಗಣಪತಿ ಜಾತ್ರೆಯ ರಥೋತ್ಸವದಲ್ಲಿ ದೇವರ ಪೂಜೆಗೆ ಬಂದಿದ್ದ 70 ವರ್ಷದ ವೃದ್ಧ ಮಹಿಳೆಯ ಚಿನ್ನದ ಸರ ಕಳ್ಳತನವಾದ ಘಟನೆ ಮಂಗಳವಾರ ನಡೆದಿದೆ.
ಗಣಪತಿ ಜಾತ್ರೆಯ ತೇರಿನ ಬಳಿ ಪ್ರಸಾದ ಸ್ವೀಕರಿಸುತ್ತಿದ್ದಾಗ ಯಾರೋ ನನ್ನ ಕುತ್ತಿಗೆಯಲ್ಲಿದ್ದ ಸರ ಅಪಹರಿಸಿದ್ದಾರೆ ಎಂದು ಸೈದೂರಿನ ಚಂದ್ರಮ್ಮ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
20 ಗ್ರಾಂ ತೂಕದ ಸುಮಾರು ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ಎಂದು ಅಂದಾಜಿಸಲಾಗಿದೆ. ಸರ ಕಳೆದುಕೊಂಡ ವೃದ್ಧ ಮಹಿಳೆ ಚಂದ್ರಮ್ಮ ಸೈದೂರಿನಿಂದ ಒಬ್ಬರೇ ಸಾಗರದ ಗಣಪತಿ ಜಾತ್ರೆಗೆ ಆಗಮಿಸಿದ್ದರು. ಪೋಲೀಸರು ಸಿಸಿ ಕ್ಯಾಮೆರಾ ಪರಿಶೀಲಿಸುತ್ತಿದ್ದು ಶೀಘ್ರದಲ್ಲಿ ಸರ ಪತ್ತೆ ಹಚ್ಚುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ವಿಟ್ಲ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್, ಮೂವರ ಬಂಧನ; ನಗದು, ಸಾವಿರಾರು ಮೌಲ್ಯದ ಮೊಬೈಲ್ ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ