ಹಿರಿಯ ಸಾಹಿತಿಗಳಿಗೆ ಸ್ವಗೃಹದಲ್ಲೇ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
Team Udayavani, Sep 28, 2021, 6:21 AM IST
ಉಳ್ಳಾಲ/ಉಡುಪಿ/ಪುತ್ತೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ ಸೆ. 12ರಂದು ಬೆಂಗಳೂರಿನಲ್ಲಿ ನಡೆದಿದ್ದು, ಅನಿವಾರ್ಯ ಕಾರಣದಿಂದ ಗೈರುಹಾಜರಾಗಿದ್ದ ಕರಾವಳಿಯ ಹಿರಿಯ ಸಾಹಿತಿಗಳಾದ ಡಾ| ಅಮೃತ ಸೋಮೇಶ್ವರ, ಲಕ್ಷ್ಮೀಶ ತೋಳ್ಪಾಡಿ ಮತ್ತು ಡಾ| ಮಹಾಬಲೇಶ್ವರ ರಾವ್ ಅವರ ನಿವಾಸಕ್ಕೇ ತೆರಳಿ ಪ್ರದಾನ ಮಾಡಿ ಗೌರವಿಸುವ ಕಾರ್ಯಕ್ರಮವು ಸೋಮವಾರ ನಡೆಯಿತು.
ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ| ಬಿ.ವಿ. ವಸಂತ ಕುಮಾರ್, ಸದಸ್ಯರಾದ ಡಾ| ಬಿ.ಎಂ. ಶರಭೇಂದ್ರ ಸ್ವಾಮಿ, ರಿಜಿಸ್ಟ್ರಾರ್ ಎನ್. ಕರಿಯಪ್ಪ ಅವರು ಹಿರಿಯರನ್ನು ಗೌರವಿಸಿದರು.
ಅಮೃತ ಸೋಮೇಶ್ವರ ಅವರಿಗೆ “ಗೌರವಶ್ರೀ’ ಪ್ರಶಸ್ತಿ
ಉಳ್ಳಾಲ: ಹಿರಿಯ ಜನಪದ ವಿದ್ವಾಂಸ, ಸಾಹಿತಿ ಡಾ| ಅಮೃತ ಸೋಮೇಶ್ವರ ಅವರಿಗೆ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ “ಗೌರವ ಶ್ರೀ’ ಪ್ರಶಸ್ತಿಯನ್ನು ಸೋಮೇಶ್ವರದಲ್ಲಿರುವ ಸ್ವಗೃಹ “ಒಲುಮೆ’ಯಲ್ಲಿ ಪ್ರದಾನ ಮಾಡಲಾಯಿತು.
ಇದನ್ನೂ ಓದಿ:ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ
ಈ ಸಂದರ್ಭದಲ್ಲಿ ಅಮೃತ ಸೋಮೇಶ್ವರ ಅವರ 86ನೇ ಹುಟ್ಟುಹಬ್ಬದ ಆಚರಣೆಯೂ ನಡೆಯಿತು. ಮಂಗಳೂರು ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಸೂರ್ಯನಾರಾಯಣ ಭಟ್, ನರ್ಮದಾ ಅಮೃತಾ ಸೋಮೇಶ್ವರ, ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ರಾಜೇಶ್ವರಿ, ಸತ್ಯ ಜೀವನ್, ಸೃಜನ್ ಸೋಮೇಶ್ವರ ಹಾಗೂ ಸೃಷ್ಟಿ ಸೋಮೇಶ್ವರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ