ಹಳೆ ಹಾಡು ಬರಹಗಾರ್ತಿ ಶೈಲಜಾ ಹೆಗಡೆ ಅವರಿಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ
Team Udayavani, Mar 12, 2023, 5:24 PM IST
ಶಿರಸಿ: ಇಲ್ಲಿನ ಸಾಹಿತ್ಯ ಸಿಂಚನ ಬಳಗದ ವಾರ್ಷಿಕೋತ್ಸವದ ಅಂಗವಾಗಿ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿಯನ್ನು ಸಿದ್ದಾಪುರದ ಮಗೇಗಾರಿನ ಹಳೆ ಹಾಡು ಬರಹಗಾರ್ತಿ ಶೈಲಜಾ ಹೆಗಡೆ ಅವರಿಗೆ ಪ್ರಕಟಿಸಲಾಗಿದೆ ಎಂದು ಬಳಗದ ಮುಖ್ಯಸ್ಥ ಶಿವಪ್ರಸಾದ ಹೀರೇಕೈ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಹಾಗೂ ಕೃತಿಗಳ ಬಿಡುಗಡೆ ಸಮಾರಂಭ ನಗರದ ನೆಮ್ಮದಿ ಕುಟೀರದಲ್ಲಿ ಮಾರ್ಚ್ 19 ರಂದು ಮಧ್ಯಾಹ್ನ ೨.೩೦ಕ್ಕೆ ನಡೆಯಲಿದೆ. ಇದೇ ವೇಳೆ ಹಿರಿಯ ಸಾಹಿತಿ ಹಾಗೂ ಪರ್ತಕರ್ತರಾದ ರಾಜೀವ ಅಜ್ಜಿಬಳ ಅವರ ಸಮುಧ್ಧರಣ ಮತ್ತು ದ್ವೀಪಾಂತರ ಹಾಗೂ ಲತಾ ಹೆಗಡೆ ಬಾಳೆಗದ್ದೆ ಅವರ ನುಡಿಸಿಂಚನ ಕೃತಿ ಬಿಡುಗಡೆ ನಡೆಯಲಿದೆ.
ತಾಲೂಕು ಕಸಾಪ ಅಧ್ಯಕ್ಷ ಸುಬ್ರಾಯ ಜಿ.ಭಟ್ ಬಕ್ಕಳ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಹಿರಿಯ ಬರಹಗಾರರಾದ ಎಸ್ ಆರ್ ಎನ್ ಮೂರ್ತಿ ಕೈಗಾ ವಹಿಸಲಿದ್ದಾರೆ.
ಬಳಿಕ ಚುಟುಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು ಭಾಗವಹಿಸುವ ಕವಿಗಳು ಮಾರ್ಚ್ ೧೬ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ