ಮಾಯವಾದವೋ ಕೆರೆಗಳು ಮಾಯವಾದವು !

ಸಾಲಿಗ್ರಾಮ ಪ.ಪಂ. ವ್ಯಾಪ್ತಿಯಲ್ಲಿ ಕೆರೆಗಳಿಗೆ ಕೊರತೆ ಇರಲಿಲ್ಲ

Team Udayavani, Apr 21, 2021, 2:25 AM IST

ಮಾಯವಾದವೋ ಕೆರೆಗಳು ಮಾಯವಾದವು !

ಪಟ್ಟಣ ಪಂಚಾಯತ್‌ನಲ್ಲಿ ಕೆರೆಗಳಿಗೂ ಬರವಿರಲಿಲ್ಲ ; ಕುಡಿಯುವ ನೀರಿಗೂ ಸಮಸ್ಯೆ ಇರಲಿಲ್ಲ. ಕೃಷಿ ಪ್ರಾಧಾನ್ಯ ಪ್ರದೇಶವಾದ ಗ್ರಾಮಗಳಲ್ಲಿ ನಿಧಾನವಾಗಿ ಕೆರೆಗಳು ಕರಗುತ್ತಾ ಬಂದವು. ಅದರೊಂದಿಗೇ ಕೃಷಿಗೂ ಪ್ರಾಮುಖ್ಯತೆ ಕಡಿಮೆಯಾಗುತ್ತಾ ಬಂದಿತು. ಇದರ ಬೆನ್ನಿಗೇ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸತೊಡಗಿತು. ಈಗ ಸಮಸ್ಯೆಯ ತುತ್ತ ತುದಿಗೆ ಹೋಗಿಲ್ಲ ಎಂಬುದೊಂದೇ ಸಮಾಧಾನದ ಸಂಗತಿ. ಈಗಲಾದರೂ ಕೆರೆಗಳು ಅಭಿವೃದ್ಧಿಪಡಿಸಿ ಸಮೃದ್ಧ ಜಲಮೂಲವನ್ನಾಗಿ ಮಾರ್ಪಡಿಸಿಕೊಂಡರೆ ಅದು ಪಟ್ಟಣ ಪಂಚಾಯತ್‌ನ ಜಾಣ ನಡೆಯಾದೀತು.

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ಇದ್ದ ಕೆರೆಗಳ ಪೈಕಿ ಅರ್ಧದಷ್ಟು ಕೆರೆಗಳು ಈಗ ಜೀರ್ಣಗೊಂಡಿವೆ. ಉಳಿದ ಅರ್ಧದಷ್ಟು ಕೆರೆಗಳನ್ನು ಉಳಿಸಿಕೊಳ್ಳಲು ಪಟ್ಟಣ ಪಂಚಾಯತ್‌ ಮತ್ತು ಜನರು ಇನ್ನಾದರೂ ಮುಂದಾಗಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ನೀರಿನ ಕೊರತೆ ನಮ್ಮನ್ನು ಕಾಡದಿರದು.

ಉದಯವಾಣಿ ಕಲೆ ಹಾಕಿದ ಮಾಹಿತಿ ಪ್ರಕಾರ ಪ.ಪಂ. ವ್ಯಾಪ್ತಿಯಲ್ಲಿ ಸುಮಾರು 40-50 ವರ್ಷಗಳ ಹಿಂದೆ 16 ದೊಡ್ಡಕೆರೆ ಮತ್ತು 81 ಕಿರುಕೆರೆಗಳು ಸೇರಿದಂತೆ ಒಟ್ಟು 97 ಸರಕಾರಿ ಕೆರೆಗಳಿದ್ದವು. ಕಾರ್ಕಡ ಗ್ರಾಮದಲ್ಲಿ ದೇಸಿಕೆರೆ, ಮಟೆರೆ, ಬಳ್ಳಿಕೆರೆ, ಚೇಂಪಿನಕೆರೆ, ಹೆದ್ದಾರಿ ಕೆರೆ ಎನ್ನುವ ದೊಡ್ಡ ಕೆರೆಗಳು ಹಾಗೂ 25 ಕಿರು ಕೆರೆಗಳು ಸೇರಿದಂತೆ ಒಟ್ಟು 30 ಕೆರೆಗಳಿದ್ದವು. ಗುಂಡ್ಮಿ ಗ್ರಾಮದಲ್ಲಿ ಕಾನ್‌ಕೆರೆ, ಶಾಸ್ತ್ರಿಕೆರೆ, ಆಂತನಕೆರೆ, ತಗ್ಗಿನಬೈಲುಕೆರೆ, ಮಡಿವಾಳಬೆಟ್ಟು ಕೆರೆ, ಯಕ್ಷಿಮಠಕೆರೆ ದೊಡ್ಡಕೆರೆ ಮತ್ತು 24 ಚಿಕ್ಕ ಕೆರೆ ಸೇರಿದಂತೆ ಒಟ್ಟು 30 ಕೆರೆಗಳಿದ್ದವು. ಪಾರಂಪಳ್ಳಿ ಗ್ರಾಮದಲ್ಲಿ ವಿಷ್ಣುಮೂರ್ತಿ ಕೆರೆ, ದಾಸನಕೆರೆ, ಅಡಿಗರಕೆರೆ ಮತ್ತು 19 ಕಿರು ಕೆರೆ ಸೇರಿದಂತೆ 22 ಕೆರೆಗಳು ಅಸ್ತಿತ್ವದಲ್ಲಿದ್ದವು. ಚಿತ್ರಪಾಡಿ ಗ್ರಾಮದಲ್ಲಿ ಬೆಟ್ಲಕ್ಕಿ ಕೆರೆ ಮತ್ತು 14 ಕಿರುಕೆರೆಗಳೊಂದಿಗೆ ಒಟ್ಟು 15 ಕೆರೆಗಳಿದ್ದವು. ಒಟ್ಟು 97 ಕೆರೆಗಳಿದ್ದವು ಎಂದು ಕಂದಾಯ ಇಲಾಖೆಯ ದಾಖಲೆಯಲ್ಲಿದೆ.

ರೈತರು ಈ ಕೆರೆಗಳ ನೀರನ್ನು ಬಳಸಿಕೊಂಡು ವರ್ಷದಲ್ಲಿ 3 ಬಾರಿ ಭತ್ತ, ಶೇಂಗಾ ಮುಂತಾದ ಬೆಳೆ ಬೆಳೆಯುತ್ತಿದ್ದರು.

ಕೆರೆಗಳ ಸ್ವರೂಪ ಹಾಳಾಗದಿರಲಿ
ಕೆರೆಯ ಸುಂದರೀಕರಣ, ಆಧುನೀಕರಣ (ವಾಕಿಂಗ್‌ ಟ್ರ್ಯಾಕ್‌ ಇತ್ಯಾದಿ)ದ ಹೆಸರಿನಲ್ಲಿ ಒಟ್ಟೂ ಕೆರೆಗಳ ಅಸ್ತಿತ್ವಕ್ಕಾಗಲೀ ಅಥವಾ ಸುತ್ತಲಿನ ಹಸಿರಿನ ಅಸ್ತಿತ್ವಕ್ಕಾಗಲೀ (ಮರ-ಗಿಡ) ಚ್ಯುತಿ ಬಾರದಂತೆ ಸಂಬಂಧಪಟ್ಟ ಇಲಾಖೆಗಳು, ಪಟ್ಟಣ ಪಂಚಾಯತ್‌ ಗಮನಹರಿಸಬೇಕಿದೆ. ಕೆರೆ ಅಭಿವೃದ್ಧಿಪಡಿಸುವ ಗ್ರಾಮಸ್ಥ ರಿಗೂ, ಸಂಘ ಸಂಸ್ಥೆಗಳಿಗೂ ಹಸುರಿನ ಮಹತ್ವವನ್ನು ತಿಳಿಸಿ ಕೊಡಬೇಕಿದೆ. ಯಾಕೆಂದರೆ, ಈಗ ಕೆರೆಗಳ ಸುಂದರೀಕರಣ ಎಂದರೆ ಸುತ್ತಲಿನ ಬೃಹತ್‌ ಮರಗಳನ್ನು ಕಡಿದು, ಇಂಟರ್‌ಲಾಕ್‌ ಹಾಕುವುದು. ಇಂಥ ಕಾಂಕ್ರೀಟ್‌ ವನ ನಿರ್ಮಿಸುವ ಅಪಾಯವನ್ನು ತಡೆಯಬೇಕಿದೆ.

 ಕುಡಿಯುವ ನೀರಿಗೆ ಬಳಕೆ
ಪ.ಪಂ. ವ್ಯಾಪ್ತಿಯಲ್ಲಿ 417 ಮನೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಜತೆಗೆ 8.9. ಎಂ.ಸಿ.ಎಫ್‌.ಟಿ. ನೀರಿನ ಬೇಡಿಕೆಯನ್ನು ಪ.ಪಂ.ನ 8 ಬಾವಿಗಳಿಂದ ಪೂರೈಸಲಾಗುತ್ತಿಲ್ಲ. ಹೀಗಾಗಿ ಕೆರೆಗಳ ಹೂಳೆತ್ತಿ ಅಭಿವೃದ್ಧಿ ಪಡಿಸಿದರೆ ಬಾವಿಯ ನೀರಿನ ಮಟ್ಟ ಮತ್ತು ಅಂತರ್ಜಲ ಮಟ್ಟ ವೃದ್ಧಿಯಾಗಿ ಕುಡಿಯುವ ನೀರಿನ ಸಮಸ್ಯೆ ದೂರವಾಗಲಿದೆ ಹಾಗೂ ಖಾಸಗಿ ಬಾವಿಗಳಲ್ಲೂ ಜಲಮಟ್ಟ ಹೆಚ್ಚಾಗಲಿದೆ.

ಕಂದಾಯ ಇಲಾಖೆಯ ಮೂಲಕ ಸರಕಾರಿ ಕೆರೆಗಳ ಸರ್ವೆ ನಡೆಸಿ ಗುರುತಿಸಬೇಕಿದ್ದು, ಒತ್ತುವರಿಯಾಗಿದ್ದರೆ ಅದನ್ನು ತೆರವುಗೊಳಿಸಿ ಅಭಿವೃದ್ಧಿಪಡಿಸಬೇಕಿದೆ. ಪ್ರಸ್ತುತ ಪಾರಂಪಳ್ಳಿ ವಿಷ್ಣುಮೂರ್ತಿ ದೇವಸ್ಥಾನ ಕೆರೆಯನ್ನು ಸ್ಥಳೀಯರು ಒಟ್ಟಾಗಿ ಅಭಿವೃದ್ಧಿಪಡಿಸುತ್ತಿದ್ದಾರೆ. ಇದೇ ಮಾದರಿಯ ಕೆಲಸ ಪ್ರತಿಯೊಂದು ಗ್ರಾಮದಲ್ಲೂ ಆಗಬೇಕಿದೆ ಮತ್ತು ಕೆರೆಗಳ ಅಭಿವೃದ್ಧಿ ಸರಕಾರ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಕಷ್ಟು ಅವಕಾಶಗಳಿದೆ. ಗ್ರಾಮಸ್ಥರ ಸಭೆ ಕರೆದು, ಕೆರೆಗಳ ಉಳಿವಿನ ಬಗ್ಗೆ ಚರ್ಚಿಸಿ ಯೋಜನೆಗಳನ್ನು ಹಾಕಿಕೊಳ್ಳುವ ಇಚ್ಛಾಶಕ್ತಿಯನ್ನು ಆಡಳಿತ ವ್ಯವಸ್ಥೆ ತೋರಬೇಕಿದೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.